AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ಸಮೀಕ್ಷೆ ಆರಂಭ, ಸುಪ್ರಿಂಕೋರ್ಟ್​ ಮೆಟ್ಟಿಲೇರಿದ ಮಸೀದಿ ಆಡಳಿತ ಮಂಡಳಿ

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯನ್ನು ಹಿಂದೂ ದೇವಾಲಯವ ಕೆಡವಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆಯನ್ನು ಪುನರಾರಂಭಿಸಿದೆ. ಈ ಸಮೀಕ್ಷೆಯನ್ನು ಮಸೀದಿ ಸಮಿತಿ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದೆ.

ಜ್ಞಾನವಾಪಿ ಮಸೀದಿ ಸಮೀಕ್ಷೆ ಆರಂಭ, ಸುಪ್ರಿಂಕೋರ್ಟ್​ ಮೆಟ್ಟಿಲೇರಿದ ಮಸೀದಿ ಆಡಳಿತ ಮಂಡಳಿ
ಮಸೀದಿImage Credit source: Mint
ನಯನಾ ರಾಜೀವ್
|

Updated on: Aug 04, 2023 | 8:02 AM

Share

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯನ್ನು ಹಿಂದೂ ದೇವಾಲಯವ ಕೆಡವಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆಯನ್ನು ಪುನರಾರಂಭಿಸಿದೆ. ಈ ಸಮೀಕ್ಷೆಯನ್ನು ಮಸೀದಿ ಸಮಿತಿ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದೆ. ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಒಪ್ಪಿಗೆ ನೀಡಿದೆ.

ಹಲವು ಬಿಜೆಪಿ ನಾಯಕರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಈ ಸ್ಥಳದಲ್ಲಿ ದೇವಾಲಯದ ಬಗ್ಗೆ ಸತ್ಯ ಈಗ ಹೊರಬರಲಿದೆ ಎಂದು ಹೇಳಿದ್ದಾರೆ. ಈ ತೀರ್ಪನ್ನು ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಈ ವಿಚಾರದಲ್ಲಿ ತಮ್ಮ ವಿಚಾರಣೆ ನಡೆಸದೆ ಯಾವುದೇ ಆದೇಶ ಹೊರಡಿಸಬಾರದು ಎಂದು ಹಿಂದೂ ಪರ ಪಕ್ಷವೊಂದು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದೆ.

ಮತ್ತಷ್ಟು ಓದಿ: Gyanvapi Mosque: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ

ಹಿಂದೂ ಅರ್ಜಿದಾರರು ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಮತ್ತು 17 ನೇ ಶತಮಾನದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಅದನ್ನು ಕೆಡವಲಾಯಿತು ಎಂದು ವಾದಿಸಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ಮಸೀದಿ ಸಂಕೀರ್ಣದೊಳಗೆ ಯಾವುದೇ ಸಮೀಕ್ಷೆಯನ್ನು ನಿರ್ಬಂಧಿಸಿತ್ತು. ಜುಲೈ 24 ರಂದು ಸಮೀಕ್ಷೆ ಪ್ರಾರಂಭವಾಯಿತು, ಆದರೆ ಮಸೀದಿ ಸಮಿತಿಯು ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದರಿಂದ ಕೆಲವೇ ಗಂಟೆಗಳಲ್ಲಿ ತಡೆ ಬಿದ್ದಿತ್ತು.

ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕುರಿತು ಮಾತನಾಡಿ, ಒಂದೊಮ್ಮೆ ಇದು ಮಸೀದಿಯಾಗಿದ್ದರೆ ಅಲ್ಲಿ ತ್ರಿಶೂಲ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ