Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ಸೆ.22 ರಂದು ಮುಂದಿನ ವಿಚಾರಣೆ

ನ್ಯಾಯಾಲಯವು ಮುಸ್ಲಿಂ ಅರ್ಜಿದಾರರು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತು ಮತ್ತು ಹಿಂದೂ ಮಹಿಳೆಯರು ಸಲ್ಲಿಸಿರುವ  ಅರ್ಜಿ ವಿಚಾರಣೆ ನಡೆಸಬಹುದು ಎಂದು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಸೆ.22 ರಂದು ನಡೆಯಲಿದೆ.

Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ಸೆ.22 ರಂದು ಮುಂದಿನ ವಿಚಾರಣೆ
ಜ್ಞಾನವಾಪಿ ಮಸೀದಿ 
Edited By: ರಶ್ಮಿ ಕಲ್ಲಕಟ್ಟ

Updated on: Sep 12, 2022 | 3:07 PM

ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque Case) ಪ್ರತಿದಿನ ಹಿಂದೂ ದೇವತೆಗಳ ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಆರಾಧಕರು ಮಾಡಿದ ಮನವಿಯನ್ನು ಪ್ರಶ್ನಿಸಿ ಅಂಜುಮನ್ ಸಮಿತಿ ಸಲ್ಲಿಸಿದ ಮನವಿಯನ್ನು ವಾರಣಾಸಿಯ ಜಿಲ್ಲಾ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಶೃಂಗಾರ ಗೌರಿ ಮತ್ತು ಇತರ ದೇವತೆಗಳ ಆರಾಧನೆಯ ಹಕ್ಕುಗಳನ್ನು ಕೋರಿ ಮಹಿಳಾ ಫಿರ್ಯಾದಿಗಳ ಪ್ರಕರಣ ವಿಚಾರಣೆಗೆ ಯೋಗ್ಯ ಎಂದು ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಆದೇಶಿಸಿದ್ದಾರೆ. ಜ್ಞಾನವಾಪಿ ಶ್ರೀನಗರ ಗೌರಿ ವಿವಾದ ಪ್ರಕರಣದ ತೀರ್ಪು ನೀಡುತ್ತಿರುವ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರ ಏಕ ಸದಸ್ಯ ಪೀಠವು ಈ ಆದೇಶ ನೀಡಿದ್ದು ಮುಸ್ಲಿಂ ಪರವಾಗಿ ಪ್ರತಿನಿಧಿಸುವ ಅಂಜುಮನ್ ಇಂತೆಜಾಮಿಯಾ ಸಮಿತಿಯು ಹೈಕೋರ್ಟ್‌ ಮೆಟ್ಟಿಲೇರುವುದಾಗಿ ಹೇಳಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯವು ಮುಸ್ಲಿಂ ಅರ್ಜಿದಾರರು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತು ಮತ್ತು ಹಿಂದೂ ಮಹಿಳೆಯರು ಸಲ್ಲಿಸಿರುವ  ಅರ್ಜಿ ವಿಚಾರಣೆ ನಡೆಸಬಹುದು ಎಂದು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಸೆ.22 ರಂದು ನಡೆಯಲಿದೆ ಎಂದು  ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಫಿರ್ಯಾದುದಾರರಲ್ಲಿ ಒಬ್ಬರನ್ನು ಪ್ರತಿನಿಧಿಸುವ ಹಿಂದೂ ಪರ ವಕೀಲ ಮನ್ ಭಾದೂರ್ ಸಿಂಗ್, ಮುಸ್ಲಿಂ ಕಡೆಯ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ. ಒಂದು ದಿನದ ಹಿಂದೆ, ವಾರಣಾಸಿಯ ಆಡಳಿತವು ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ವಿಧಿಸಿದ್ದು ಎರಡೂ ಸಮುದಾಯಗಳ ಜನರು ವಾಸಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿತ್ತು.

ಕೋಮು ಸೂಕ್ಷ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಧೀಶರು ಕಳೆದ ತಿಂಗಳು ಆದೇಶವನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದ್ದರು.

Published On - 2:33 pm, Mon, 12 September 22

Web contact

TV9 Kannada

Read More
Follow Us