AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque Case: ವಾರಣಾಸಿ ಕೋರ್ಟ್​ ತೀರ್ಪು ಪ್ರಶ್ನಿಸಿ, ಅಲಹಾಬಾದ್ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ

ಮಸೀದಿ ಸಂಕೀರ್ಣದೊಳಗೆ ಶಿವಲಿಂಗ ವೈಜ್ಞಾನಿಕ ತನಿಖೆ ಇಲ್ಲ, ವಾರಣಾಸಿ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಅರ್ಜಿ ಸಲ್ಲಿಕೆ

Gyanvapi Mosque Case:  ವಾರಣಾಸಿ ಕೋರ್ಟ್​ ತೀರ್ಪು ಪ್ರಶ್ನಿಸಿ, ಅಲಹಾಬಾದ್ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ
ಕಾಶಿಯಲ್ಲಿರುವ ಜ್ಞಾನವಾಪಿ ಮಸೀದಿ
TV9 Web
| Edited By: |

Updated on:Nov 05, 2022 | 9:38 PM

Share

ಅಲಹಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ (Uttar Pradesh) ವಾರಾಣಸಿ ಜ್ಞಾನವಾಪಿ ಮಸೀದಿ (Gyanvapi Mosque) ಸಂಕೀರ್ಣದೊಳಗೆ ಶಿವಲಿಂಗ ವೈಜ್ಞಾನಿಕ ತನಿಖೆಗೆ ಅವಕಾಶವಿಲ್ಲ ಎನ್ನುವ ಮೂಲಕ ವಾರಣಾಸಿ ನ್ಯಾಯಾಲಯವು ಹಿಂದೂಗಳ ಮನವಿಯನ್ನು ತಿರಸ್ಕರಿಸಿತ್ತು. ಈಗ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಐವರು ಮಹಿಳೆಯರು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲಹಾಬಾದ್ ಹೈಕೋರ್ಟ್ ಮೇಲ್ಮನವಿ ಅರ್ಜಿ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ.

ಹಿನ್ನೆಲೆ

ಜ್ಞಾನವಾಪಿ ಮಸೀದಿ  ಸಂಕೀರ್ಣದೊಳಗೆ ಶಿವಲಿಂಗ ವೈಜ್ಞಾನಿಕ ತನಿಖೆಗೆ ಅವಕಾಶವಿಲ್ಲ ಎನ್ನುವ ಮೂಲಕ ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳ ಮನವಿಯನ್ನು ತಿರಸ್ಕರಿಸಿದೆ. ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾ. ಅಜಯ್​ ಕೃಷ್ಣ ಅವರಿದ್ದ ಪೀಠ  ಶಿವಲಿಂಗದ ಕಾರ್ಬನ್ ಡೇಟಿಂಗ್ ಮಾಡದಂತೆ (ಅ. 14) ರಂದು ಆದೇಶ ನೀಡಿದ್ದರು. ಈ ಮೂಲಕ  ಹಿಂದೂಗಳು ಸಲ್ಲಿಸಿದ್ದ ಅರ್ಜಿಯನ್ನು  ವಜಾಗೊಳಿಸಿದ್ದರು.

ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಾಣಿಸಿಕೊಂಡಿರುವ ಶಿವಲಿಂಗದ ಶಿವಲಿಂಗದ ‘ವೈಜ್ಞಾನಿಕ ತನಿಖೆ (ಕಾರ್ಬನ್ ಡೇಟಿಂಗ್ ಪರೀಕ್ಷೆ) ನಡೆಸಬೇಕು ಎಂದು ಹಿಂದೂ ಆರಾಧಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ  ವಾರಾಣಸಿಯ ಜಿಲ್ಲಾ ನ್ಯಾಯಾಲಯ ಅ. 14 ರಂದು ತೀರ್ಪು ಪ್ರಕಟಿಸಿತ್ತು.

ಮೇ 16ರಂದು ಜ್ಞಾನವಾಪಿ ಮಸೀದಿಯ ಆವರಣದಲ್ಲಿ ವಿಡಿಯೋ ಸಮೀಕ್ಷೆ ನಡೆಸಲಾಗಿತ್ತು. ಮುಸ್ಲಿಮರು ನಮಾಜ್​ಗೂ ಮೊದಲು ಬಳಸುತ್ತಿದ್ದ ಕೊಳದ ಬಳಿ ಶಿವಲಿಂಗದ ಆಕೃತಿ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಆ ಆಕೃತಿಯನ್ನು ಕಾರ್ಬನ್ ಡೇಟಿಂಗ್​ಗೆ ಒಳಪಡಿಸಬೇಕೆಂದು ಹಿಂದೂ ಪರ ಅರ್ಜಿದಾರರು ಮನವಿ ಮಾಡಿದ್ದರು.

ಕೋರ್ಟ್​ನಲ್ಲಿ ಮುಸ್ಲಿಂ ಪರ ವಾದ ಮಂಡಿಸಿದ ವಕೀಲ ಮುಮ್ತಾಜ್ ಅಹ್ಮದ್, ‘ಯಾವುದೇ ವಸ್ತುವಿನ ಕಾರ್ಬನ್ ಡೇಟಿಂಗ್ ಪ್ರಕ್ರಿಯೆಯ ವೇಳೆ ಆ ವಸ್ತು ಹಾನಿಗೊಳಗಾದರೆ ಅದು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿದಂತೆ ಆಗುತ್ತದೆ. ಜಿಲ್ಲಾ ಮ್ಯಾಜಿಸ್ಟ್ರೇಟ್​ಗೆ ಆ ಆಕೃತಿಯನ್ನು ಸುರಕ್ಷಿತವಾಗಿಡಲು ಈ ಹಿಂದೆ ಸುಪ್ರೀಂ ಕೋರ್ಟ್​ ಸೂಚಿಸಿತ್ತು. ಹಾಗಾಗಿ, ಅದನ್ನು ಅಧ್ಯಯನಕ್ಕೆ ಒಳಪಡಿಸುವುದು ಸರಿಯಲ್ಲ’ ಎಂದು ಹೇಳಿದ್ದರು.

ಇದರ ಮೂಲ ಪ್ರಕರಣವು ಶೃಂಗಾರ್ ಗೌರಿಯ ಪೂಜೆಗೆ ಸಂಬಂಧಿಸಿದ್ದು ಆದರೆ ಮಸೀದಿಯಲ್ಲಿನ ರಚನೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಸ್ಲಿಂ ಪರ ವಕೀಲರು ವಾದಿಸಿದ್ದರು.

ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿದೆ. ವಾರಣಾಸಿ ನ್ಯಾಯಾಲಯದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೆಡವಲ್ಪಟ್ಟ ಹಿಂದೂ ರಚನೆಯ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ಆರೋಪವನ್ನು ಮತ್ತೆ ಚರ್ಚೆಗೆ ಎತ್ತಿಕೊಳ್ಳಲಾಗಿದೆ. ‘ಶಿವಲಿಂಗ’ ಎಂದು ಕರೆಯಲ್ಪಡುವ ವಸ್ತುವು ವಾಸ್ತವವಾಗಿ ಕಾರಂಜಿಯಾಗಿತ್ತು ಎಂದು ಮಸೀದಿ ಸಮಿತಿ ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 pm, Sat, 5 November 22