AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque Case: ಮಸೀದಿಯೊಳಗೆ ಶಿವಲಿಂಗದ ವೈಜ್ಞಾನಿಕ ಅಧ್ಯಯನ ನಡೆಸುವಂತಿಲ್ಲ; ಹಿಂದೂಗಳ ಮನವಿ ತಿರಸ್ಕರಿಸಿದ ಕೋರ್ಟ್

ಮಸೀದಿ ಸಂಕೀರ್ಣದೊಳಗೆ ಶಿವಲಿಂಗ ವೈಜ್ಞಾನಿಕ ತನಿಖೆ ಇಲ್ಲ, ವಾರಣಾಸಿ ನ್ಯಾಯಾಲಯವು ಹಿಂದೂಗಳ ಮನವಿಯನ್ನು ತಿರಸ್ಕರಿಸಿದೆ.

Gyanvapi Mosque Case: ಮಸೀದಿಯೊಳಗೆ ಶಿವಲಿಂಗದ ವೈಜ್ಞಾನಿಕ ಅಧ್ಯಯನ ನಡೆಸುವಂತಿಲ್ಲ; ಹಿಂದೂಗಳ ಮನವಿ ತಿರಸ್ಕರಿಸಿದ ಕೋರ್ಟ್
Gyanvapi Mosque Case
TV9 Web
| Updated By: ಸುಷ್ಮಾ ಚಕ್ರೆ|

Updated on:Oct 14, 2022 | 3:21 PM

Share

ಜ್ಞಾನವಾಪಿ ಮಸೀದಿ (Gyanvapi Mosque) ಸಂಕೀರ್ಣದೊಳಗೆ ಶಿವಲಿಂಗ ವೈಜ್ಞಾನಿಕ ತನಿಖೆಗೆ ಅವಕಾಶವಿಲ್ಲ ಎನ್ನುವ ಮೂಲಕ ವಾರಣಾಸಿ ನ್ಯಾಯಾಲಯವು ಹಿಂದೂಗಳ ಮನವಿಯನ್ನು ತಿರಸ್ಕರಿಸಿದೆ. ಶಿವಲಿಂಗದ ಕಾರ್ಬನ್ ಡೇಟಿಂಗ್ ಮಾಡದಂತೆ ಆದೇಶ ನೀಡಿದೆ. ಹಿಂದೂಗಳು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಉತ್ತರ ಪ್ರದೇಶದ ವಾರಾಣಸಿ ಜಿಲ್ಲಾ ಕೋರ್ಟ್​​ ಆದೇಶ ನೀಡಿದೆ. ಶಿವಲಿಂಗದ ವೈಜ್ಞಾನಿಕ ಅಧ್ಯಯನ ನಡೆಸದಂತೆ ವಾರಾಣಸಿ ಜಿಲ್ಲಾ ಕೋರ್ಟ್ ನ್ಯಾ.ಅಜಯ್​ ಕೃಷ್ಣ ಆದೇಶ ನೀಡಿದ್ದಾರೆ.

ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಇಂದು (ಶುಕ್ರವಾರ) ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ ‘ಶಿವಲಿಂಗ’ದ ‘ವೈಜ್ಞಾನಿಕ ತನಿಖೆ’ ಕೋರಿ ಹಿಂದೂ ಆರಾಧಕರ ಮನವಿಯನ್ನು ತಿರಸ್ಕರಿಸಿದೆ. ಜ್ಞಾನವಾಪಿ ಮಸೀದಿಯಲ್ಲಿ ಕಾಣಿಸಿಕೊಂಡಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸಬೇಕು ಎಂದು ಸಲ್ಲಿಸಲಾಗಿರುವ ಹಿಂದೂಗಳ ಅರ್ಜಿಯ ವಿಚಾರಣೆಯನ್ನು ವಾರಾಣಸಿಯ ಜಿಲ್ಲಾ ನ್ಯಾಯಾಲಯ ಇಂದು ನಡೆಸಿದೆ.

ಅರ್ಜಿಯ ಮೇಲಿನ ವಾದ-ಪ್ರತಿವಾದಗಳು ಮಂಗಳವಾರ ಪೂರ್ಣಗೊಂಡಿದ್ದು, ನ್ಯಾಯಾಲಯ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಮೇ 16ರಂದು ಜ್ಞಾನವಾಪಿ ಮಸೀದಿಯ ಆವರಣದಲ್ಲಿ ವಿಡಿಯೋ ಸಮೀಕ್ಷೆ ನಡೆಸಲಾಗಿತ್ತು. ಮುಸ್ಲಿಮರು ನಮಾಜ್​ಗೂ ಮೊದಲು ಬಳಸುತ್ತಿದ್ದ ಕೊಳದ ಬಳಿ ಶಿವಲಿಂಗದ ಆಕೃತಿ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಆ ಆಕೃತಿಯನ್ನು ಕಾರ್ಬನ್ ಡೇಟಿಂಗ್​ಗೆ ಒಳಪಡಿಸಬೇಕೆಂದು ಹಿಂದೂ ಪರ ಅರ್ಜಿದಾರರು ಮನವಿ ಮಾಡಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ವೈಜ್ಞಾನಿಕ ತನಿಖೆಗೆ ಮನವಿ; ವಿಚಾರಣೆ ಅಕ್ಟೋಬರ್ 11ಕ್ಕೆ ಮುಂದೂಡಿಕೆ

ಕೋರ್ಟ್​ನಲ್ಲಿ ಮುಸ್ಲಿಂ ಪರ ವಾದ ಮಂಡಿಸಿದ ವಕೀಲ ಮುಮ್ತಾಜ್ ಅಹ್ಮದ್, ‘ಯಾವುದೇ ವಸ್ತುವಿನ ಕಾರ್ಬನ್ ಡೇಟಿಂಗ್ ಪ್ರಕ್ರಿಯೆಯ ವೇಳೆ ಆ ವಸ್ತು ಹಾನಿಗೊಳಗಾದರೆ ಅದು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿದಂತೆ ಆಗುತ್ತದೆ. ಜಿಲ್ಲಾ ಮ್ಯಾಜಿಸ್ಟ್ರೇಟ್​ಗೆ ಆ ಆಕೃತಿಯನ್ನು ಸುರಕ್ಷಿತವಾಗಿಡಲು ಈ ಹಿಂದೆ ಸುಪ್ರೀಂ ಕೋರ್ಟ್​ ಸೂಚಿಸಿತ್ತು. ಹಾಗಾಗಿ, ಅದನ್ನು ಅಧ್ಯಯನಕ್ಕೆ ಒಳಪಡಿಸುವುದು ಸರಿಯಲ್ಲ’ ಎಂದು ಹೇಳಿದ್ದರು.

ಇದರ ಮೂಲ ಪ್ರಕರಣವು ಶೃಂಗಾರ್ ಗೌರಿಯ ಪೂಜೆಗೆ ಸಂಬಂಧಿಸಿದ್ದು ಆದರೆ ಮಸೀದಿಯಲ್ಲಿನ ರಚನೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಸ್ಲಿಂ ಪರ ವಕೀಲರು ವಾದಿಸಿದ್ದರು.

ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿದೆ. ವಾರಣಾಸಿ ನ್ಯಾಯಾಲಯದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೆಡವಲ್ಪಟ್ಟ ಹಿಂದೂ ರಚನೆಯ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ಆರೋಪವನ್ನು ಮತ್ತೆ ಚರ್ಚೆಗೆ ಎತ್ತಿಕೊಳ್ಳಲಾಗಿದೆ. ‘ಶಿವಲಿಂಗ’ ಎಂದು ಕರೆಯಲ್ಪಡುವ ವಸ್ತುವು ವಾಸ್ತವವಾಗಿ ಕಾರಂಜಿಯಾಗಿತ್ತು ಎಂದು ಮಸೀದಿ ಸಮಿತಿ ಹೇಳಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Fri, 14 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!