AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಜ್ಞಾನವಾಪಿ ಮಸೀದಿ ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾದ ಸ್ಥಳ ನಿರ್ಬಂಧಿಸಲು ವಾರಣಾಸಿ ನ್ಯಾಯಾಲಯ ಆದೇಶ

Gyanvapi Mosque Case ಇಂದು ಬೆಳಿಗ್ಗೆ ಕೊಳದಿಂದ ನೀರನ್ನು ಬತ್ತಿಸಿದಾಗ  "ಶಿವಲಿಂಗ" ಕಂಡುಬಂದಿದೆ ಎಂದು ಮಸೀದಿಯ ಹಿಂಭಾಗದಲ್ಲಿರುವ ದೇಗುಲದಲ್ಲಿ ಪ್ರಾರ್ಥನೆ ಮಾಡಲು ವರ್ಷಪೂರ್ತಿ ಪ್ರವೇಶವನ್ನು ಕೋರಿದ ಹಿಂದೂ ಮಹಿಳೆಯರ ಗುಂಪನ್ನು ಪ್ರತಿನಿಧಿಸುವ ವಕೀಲರು ಹೇಳಿದ್ದಾರೆ

Breaking ಜ್ಞಾನವಾಪಿ ಮಸೀದಿ ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾದ ಸ್ಥಳ ನಿರ್ಬಂಧಿಸಲು ವಾರಣಾಸಿ ನ್ಯಾಯಾಲಯ ಆದೇಶ
ಜ್ಞಾನವಾಪಿ ಮಸೀದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 16, 2022 | 2:39 PM

ನ್ಯಾಯಾಲಯದ ಸೂಚನೆಯಂತೆ ಕಾಶಿಯ ಜ್ಞಾನವಾಪಿ ಮಸೀದಿಯ (Gyanvapi Mosque) ವಿಡಿಯೊ ಸಮೀಕ್ಷೆ ಸೋಮವಾರ ಮುಕ್ತಾಯವಾಗಿದೆ. ವಿಡಿಯೊ ಚಿತ್ರೀಕರಣ ವೇಳೆ ಶಿವಲಿಂಗ ಪತ್ತೆಯಾದ ಸ್ಥಳವನ್ನು ನಿರ್ಬಂಧಿಸಲು ಜಿಲ್ಲೆಯ ಅಧಿಕಾರಿಗಳಿಗೆ ವಾರಾಣಾಸಿ ನ್ಯಾಯಾಲಯ ಆದೇಶಿಸಿದೆ. ಉತ್ತರ ಪ್ರದೇಶದ (Uttar Pradesh)ವಾರಣಾಸಿಯಲ್ಲಿರುವ (Varanasi) ಜ್ಞಾನವಾಪಿ ಮಸೀದಿ ಸಂಕೀರ್ಣದ ಮೂರು ದಿನಗಳ ವಿಡಿಯೊ ಸಮೀಕ್ಷೆ ನ್ಯಾಯಾಲಯದ ಆದೇಶದ ಇಂದು (ಸೋಮವಾರ)ಕೊನೆಗೊಂಡಿದೆ. ಸಂಕೀರ್ಣದ ಬಳಿ ಬಿಗಿ ಭದ್ರತೆ ಮತ್ತು ನಿರ್ಬಂಧಗಳ ನಡುವೆ ಇಂದು ಬೆಳಿಗ್ಗೆ ಕೊನೆಯ ದಿನದ ಚಿತ್ರೀಕರಣ ಪ್ರಾರಂಭವಾಯಿತು. ಇಂದು ಬೆಳಿಗ್ಗೆ ಕೊಳದಿಂದ ನೀರನ್ನು ಬತ್ತಿಸಿದಾಗ  “ಶಿವಲಿಂಗ” ಕಂಡುಬಂದಿದೆ ಎಂದು ಮಸೀದಿಯ ಹಿಂಭಾಗದಲ್ಲಿರುವ ದೇಗುಲದಲ್ಲಿ ಪ್ರಾರ್ಥನೆ ಮಾಡಲು ವರ್ಷಪೂರ್ತಿ ಪ್ರವೇಶವನ್ನು ಕೋರಿದ ಹಿಂದೂ ಮಹಿಳೆಯರ ಗುಂಪನ್ನು ಪ್ರತಿನಿಧಿಸುವ ವಕೀಲರು ಹೇಳಿದ್ದಾರೆ. ಈ ಕೊಳದ ನೀರನ್ನು  ಪ್ರಾರ್ಥನೆಗೆ ಮುನ್ನ ಶುದ್ಧೀಕರಣಕ್ಕೆ (ವುಜು) ಬಳಸಲಾಗುತ್ತಿತ್ತು ಎಂದು ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದರು. ಇಸ್ಲಾಮಿಕ್ ವುಜು ಅಥವಾ ಶುದ್ಧೀಕರಣ ಆಚರಣೆಗಾಗಿ ಬಳಸಲಾಗುವ ಕೊಳವನ್ನು ಮುಚ್ಚಬೇಕು ಎಂದು ಅರ್ಜಿದಾರರು ಸ್ಥಳೀಯ ನ್ಯಾಯಾಲಯವನ್ನು ಕೇಳಿದರು. ನ್ಯಾಯಾಲಯವು ಮನವಿಯನ್ನು ಸ್ವೀಕರಿಸಿದೆ. ಅದೇ ವೇಳೆ  ಸದ್ಯಕ್ಕೆ ಕೊಳವನ್ನು ಬಳಸದಂತೆ ನೋಡಿಕೊಳ್ಳಲು ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶಿಸಿತು.

ಮಸೀದಿ ಸಂಕೀರ್ಣದಲ್ಲಿ “ಶಿವಲಿಂಗ” ಕಂಡುಬಂದ ಬಗ್ಗೆ ವರದಿಗಳನ್ನು ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ ಅವರು ಈ ಹಿಂದೆ ದೃಢಪಡಿಸಿರಲಿಲ್ಲ. “ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವಿವರಗಳನ್ನು ಆಯೋಗದ ಯಾವುದೇ ಸದಸ್ಯರು ಬಹಿರಂಗಪಡಿಸಿಲ್ಲ. ನ್ಯಾಯಾಲಯ ಸಮೀಕ್ಷೆಯ ಮಾಹಿತಿಯ ರಕ್ಷಕರಾಗಿದ್ದಾರೆ. ನಿನ್ನೆ ಒಬ್ಬ ಸದಸ್ಯರನ್ನು ಆಯೋಗದಿಂದ ಕೆಲವು ನಿಮಿಷಗಳ ಕಾಲ ಡಿಬಾರ್ ಮಾಡಲಾಗಿದೆ, ನಂತರ ಆಯೋಗಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಸಮೀಕ್ಷಾ ತಂಡವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು, ಕೊಳವನ್ನು ಚಿತ್ರೀಕರಿಸಿದೆ. ನಾಳೆ ನ್ಯಾಯಾಲಯದೊಂದಿಗೆ ಈ ಸಮೀಕ್ಷೆ ಹಂಚಿಕೊಳ್ಳಲಿದೆ. ವರದಿಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸದಿದ್ದರೆ, ನಾವು ನ್ಯಾಯಾಲಯಕ್ಕೆ ಹೆಚ್ಚಿನ ಸಮಯ ಕೇಳುತ್ತೇವೆ ಎಂದು ಸರ್ಕಾರಿ ವಕೀಲ ಮಹೇಂದ್ರ ಪ್ರಸಾದ್ ಪಾಂಡೆ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ
Image
ಬಿಗಿಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ
Image
Gyanvapi masjid controversy: ಕೋರ್ಟ್ ನೇಮಿಸಿದ ಕಮೀಷನರುಗಳಿಂದ ವಿಡಿಯೋ ಸರ್ವೇ ನಾಳೆ ಆರಂಭ, ಪ್ರಕ್ರಿಯೆ ಹೇಗೆ ನಡೆಯಲಿದೆ ಗೊತ್ತಾ?
Image
ವಾರಣಾಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ನಿಲ್ಲಿಸಲು ಸುಪ್ರೀಂಕೋರ್ಟ್ ನಕಾರ, ನಾಳೆಯಿಂದ ವಿಡಿಯೊ ಚಿತ್ರೀಕರಣ ಸರ್ವೆ

ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಸಮೀಪದಲ್ಲಿದೆ. ಜ್ಞಾನವಾಪಿ ಮಸೀದಿಯ ಹೊರಗೋಡೆಯಲ್ಲಿರುವ ಕೆಲ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಮಹಿಳೆಯರ ತಂಡವೊಂದು ಅನುಮತಿ ಕೋರಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:20 pm, Mon, 16 May 22

ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ