AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ವಿವಾದ: ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ಬಗ್ಗೆ ಇಂದು ವಿಚಾರಣೆ

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಹಾಗೂ ಪ್ರಾರ್ಥನೆಗೆ ಅವಕಾಶ ನೀಡುವಂತೆ ಕೋರಿ ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿ ಸಿಂಧುತ್ವದ ಬಗೆಗಿನ ವಿಚಾರಣೆಯನ್ನು ಇಂದು ಜ್ಞಾನವಾಪಿ ಜಿಲ್ಲಾ ನ್ಯಾಯಾಲಯವು ನಡೆಸಲಿದೆ. ಸರ್ವೆ ವಿಡಿಯೋ ಸೋರಿಕೆ ಬಗ್ಗೆಯೂ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಜ್ಞಾನವಾಪಿ ಮಸೀದಿ ವಿವಾದ: ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ಬಗ್ಗೆ ಇಂದು ವಿಚಾರಣೆ
ಜ್ಞಾನವಾಪಿ ಮಸೀದಿImage Credit source: PTI
TV9 Web
| Updated By: Rakesh Nayak Manchi|

Updated on: Jul 04, 2022 | 9:05 AM

Share

ವಾರಣಾಸಿ: ಜ್ಞಾನವಾಪಿ ಮಸೀದಿ- ವಿಶ್ವನಾಥ ದೇವಾಲಯ ವಿವಾದದ ಅರ್ಜಿಯ ವಿಚಾರಣೆಯನ್ನು ಇಂದು ವಾರಣಾಸಿಯ ಜಿಲ್ಲಾ ಕೋರ್ಟ್ ನಡೆಸಲಿದೆ. ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ಬಗ್ಗೆ ಜಿಲ್ಲಾ ನ್ಯಾಯಾಲಯದ ಜಡ್ಜ್ ಅಜಯ್ ಕೃಷ್ಣ ವಿಶ್ವೇಶ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹಿಂದೂಗಳು ಸಲ್ಲಿಸಿದ್ದ ಅರ್ಜಿಯು ವಿಚಾರಣೆಗೆ ಯೋಗ್ಯವೇ ಅಲ್ಲವೇ ಎಂಬ ಬಗ್ಗೆ ವಿಚಾರಣೆ ನಡೆಯಲಿದೆ.

ಜ್ಞಾನವಾಪಿ ಮಸೀದಿಯ ಹಿಂಭಾಗದಲ್ಲಿ ದೇವಾಲಯದ ಕುರುಹುಗಳಿದ್ದು, ಈ ಹಿಂದೆ ಇದು ದೇವಾಲಯವಾಗಿತ್ತು, ಹೀಗಾಗಿ ಮಸೀದಿಯಲ್ಲಿ ನಿತ್ಯ ಪೂಜೆ ನಡೆಸಲು ಹಾಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಸಿಂಧುತ್ವದ ಬಗ್ಗೆ ವಿಚಾರಣೆ ಇಂದು ನಡೆಯಲಿದೆ.

ಇದನ್ನೂ ಓದಿ: Maharashtra Politics: ಏಕನಾಥ್ ಶಿಂಧೆಯಿಂದ ಇಂದು ವಿಶ್ವಾಸಮತ ಯಾಚನೆ; ನೂತನ ಸರ್ಕಾರಕ್ಕೆ ಸಿಗುತ್ತಾ ಬಹುಮತ?

ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ವಿಚಾರಣೆಯ ಜೊತೆಗೆ ಸರ್ವೇ ವಿಡಿಯೋ ಸೋರಿಕೆಯ ಬಗ್ಗೆಯೂ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಮಸೀದಿಯ ಹಿಂದೂ ದೇವಾಲಯವಾಗಿತ್ತೇ ಎಂಬಿತ್ಯಾದಿಗಳ ಮಾಹಿತಿ ಕಲೆಹಾಕಿಕೊಳ್ಳಲು ಕೋರ್ಟ್ ಆದೇಶದಂತೆ ಸರ್ವೆ ನಡೆಸಲಾಗಿತ್ತು. ಈ ವೇಳೆ ಕೋರ್ಟ್ ಕಮೀಷನರ್​ಗಳು ನಡೆಸಿದ್ದ ಸರ್ವೇಯ ವಿಡಿಯೋಗಳು ಸೋರಿಕೆಯಾಗಿವೆ. ಈ ಲೋಪದ ಬಗ್ಗೆಯೂ ಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದ್ದು,  ಕೋರ್ಟ್ ನ ಜಡ್ಜ್ ಅಜಯ್ ಕೃಷ್ಣ ವಿಶ್ವೇಶ ಅವರಿರುವ ಪೀಠ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ವಾರಣಾಸಿಯ ಮಸೀದಿ ಸರ್ವೇ ವಿಡಿಯೋ ಮಾಧ್ಯಮಗಳಿಗೆ ಸೋರಿಕೆ: ಮಸೀದಿಯ ಒಳಗೆ ಏನೇನಿದೆ? ಇಲ್ಲಿದೆ ವಿಡಿಯೋ

ವಿಡಿಯೋದಲ್ಲಿ ಮಸೀದಿಯೊಳಗಡೆ ಶಿವಲಿಂಗ ಇರುವುದು ಪತ್ತೆಯಾಗಿದೆ. ಶಿವಲಿಂಗದ ಜಾಗದಲ್ಲಿ ನೀರು ತುಂಬಿಕೊಂಡಿತ್ತು. ಈ ನೀರನ್ನು ಮೊದಲಿಗೆ ಮೋಟಾರ್ ಪಂಪ್ ಸೆಟ್ ಮೂಲಕ ಹೊರ ಹಾಕಿ ಸರ್ವೇ ನಡೆಸಲಾಗಿದೆ. ಈ ವೇಳೆ ಒಳಭಾಗದಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ಬಳಿಕ ಶಿವಲಿಂಗವನ್ನು ಸಂಪೂರ್ಣ ಸ್ವಚ್ಚಗೊಳಿಸಿ ಅಳತೆ ಹಾಕಲಾಗಿದೆ. ಜೊತೆಗೆ ಮಸೀದಿಯೊಳಗೆ ನಂದಿ ವಿಗ್ರಹ ಕೂಡ ಪತ್ತೆಯಾಗಿದೆ. ಶಿವಲಿಂಗದ ಕಡೆ ನಂದಿ ವಿಗ್ರಹ ಮುಖ ಮಾಡಿದೆ. ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ಕಳಸ ಕೂಡ ಪತ್ತೆಯಾಗಿದೆ. ದೇಗುಲದ ಮೇಲಿರುವ ಕಳಸದಂಥ ಕುರುಹು ಪತ್ತೆಯಾಗಿದೆ.

ಇದನ್ನೂ ಓದಿ: ಬಂಧಿತ ಎಲ್​ಇಟಿ ಉಗ್ರರ ಪೈಕಿ ಓರ್ವ ಮಾಜಿ ಬಿಜೆಪಿ ವ್ಯಕ್ತಿ, ಜಮ್ಮು ಕಾಶ್ಮೀರದ ರಾಜಕೀಯ ವಲಯಗಳಲ್ಲಿ ಗದ್ದಲ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!