AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ವಿವಾದ: ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ಬಗ್ಗೆ ಇಂದು ವಿಚಾರಣೆ

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಹಾಗೂ ಪ್ರಾರ್ಥನೆಗೆ ಅವಕಾಶ ನೀಡುವಂತೆ ಕೋರಿ ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿ ಸಿಂಧುತ್ವದ ಬಗೆಗಿನ ವಿಚಾರಣೆಯನ್ನು ಇಂದು ಜ್ಞಾನವಾಪಿ ಜಿಲ್ಲಾ ನ್ಯಾಯಾಲಯವು ನಡೆಸಲಿದೆ. ಸರ್ವೆ ವಿಡಿಯೋ ಸೋರಿಕೆ ಬಗ್ಗೆಯೂ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಜ್ಞಾನವಾಪಿ ಮಸೀದಿ ವಿವಾದ: ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ಬಗ್ಗೆ ಇಂದು ವಿಚಾರಣೆ
ಜ್ಞಾನವಾಪಿ ಮಸೀದಿImage Credit source: PTI
TV9 Web
| Edited By: |

Updated on: Jul 04, 2022 | 9:05 AM

Share

ವಾರಣಾಸಿ: ಜ್ಞಾನವಾಪಿ ಮಸೀದಿ- ವಿಶ್ವನಾಥ ದೇವಾಲಯ ವಿವಾದದ ಅರ್ಜಿಯ ವಿಚಾರಣೆಯನ್ನು ಇಂದು ವಾರಣಾಸಿಯ ಜಿಲ್ಲಾ ಕೋರ್ಟ್ ನಡೆಸಲಿದೆ. ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ಬಗ್ಗೆ ಜಿಲ್ಲಾ ನ್ಯಾಯಾಲಯದ ಜಡ್ಜ್ ಅಜಯ್ ಕೃಷ್ಣ ವಿಶ್ವೇಶ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹಿಂದೂಗಳು ಸಲ್ಲಿಸಿದ್ದ ಅರ್ಜಿಯು ವಿಚಾರಣೆಗೆ ಯೋಗ್ಯವೇ ಅಲ್ಲವೇ ಎಂಬ ಬಗ್ಗೆ ವಿಚಾರಣೆ ನಡೆಯಲಿದೆ.

ಜ್ಞಾನವಾಪಿ ಮಸೀದಿಯ ಹಿಂಭಾಗದಲ್ಲಿ ದೇವಾಲಯದ ಕುರುಹುಗಳಿದ್ದು, ಈ ಹಿಂದೆ ಇದು ದೇವಾಲಯವಾಗಿತ್ತು, ಹೀಗಾಗಿ ಮಸೀದಿಯಲ್ಲಿ ನಿತ್ಯ ಪೂಜೆ ನಡೆಸಲು ಹಾಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಸಿಂಧುತ್ವದ ಬಗ್ಗೆ ವಿಚಾರಣೆ ಇಂದು ನಡೆಯಲಿದೆ.

ಇದನ್ನೂ ಓದಿ: Maharashtra Politics: ಏಕನಾಥ್ ಶಿಂಧೆಯಿಂದ ಇಂದು ವಿಶ್ವಾಸಮತ ಯಾಚನೆ; ನೂತನ ಸರ್ಕಾರಕ್ಕೆ ಸಿಗುತ್ತಾ ಬಹುಮತ?

ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ಸಿಂಧುತ್ವದ ವಿಚಾರಣೆಯ ಜೊತೆಗೆ ಸರ್ವೇ ವಿಡಿಯೋ ಸೋರಿಕೆಯ ಬಗ್ಗೆಯೂ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಮಸೀದಿಯ ಹಿಂದೂ ದೇವಾಲಯವಾಗಿತ್ತೇ ಎಂಬಿತ್ಯಾದಿಗಳ ಮಾಹಿತಿ ಕಲೆಹಾಕಿಕೊಳ್ಳಲು ಕೋರ್ಟ್ ಆದೇಶದಂತೆ ಸರ್ವೆ ನಡೆಸಲಾಗಿತ್ತು. ಈ ವೇಳೆ ಕೋರ್ಟ್ ಕಮೀಷನರ್​ಗಳು ನಡೆಸಿದ್ದ ಸರ್ವೇಯ ವಿಡಿಯೋಗಳು ಸೋರಿಕೆಯಾಗಿವೆ. ಈ ಲೋಪದ ಬಗ್ಗೆಯೂ ಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದ್ದು,  ಕೋರ್ಟ್ ನ ಜಡ್ಜ್ ಅಜಯ್ ಕೃಷ್ಣ ವಿಶ್ವೇಶ ಅವರಿರುವ ಪೀಠ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ವಾರಣಾಸಿಯ ಮಸೀದಿ ಸರ್ವೇ ವಿಡಿಯೋ ಮಾಧ್ಯಮಗಳಿಗೆ ಸೋರಿಕೆ: ಮಸೀದಿಯ ಒಳಗೆ ಏನೇನಿದೆ? ಇಲ್ಲಿದೆ ವಿಡಿಯೋ

ವಿಡಿಯೋದಲ್ಲಿ ಮಸೀದಿಯೊಳಗಡೆ ಶಿವಲಿಂಗ ಇರುವುದು ಪತ್ತೆಯಾಗಿದೆ. ಶಿವಲಿಂಗದ ಜಾಗದಲ್ಲಿ ನೀರು ತುಂಬಿಕೊಂಡಿತ್ತು. ಈ ನೀರನ್ನು ಮೊದಲಿಗೆ ಮೋಟಾರ್ ಪಂಪ್ ಸೆಟ್ ಮೂಲಕ ಹೊರ ಹಾಕಿ ಸರ್ವೇ ನಡೆಸಲಾಗಿದೆ. ಈ ವೇಳೆ ಒಳಭಾಗದಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ಬಳಿಕ ಶಿವಲಿಂಗವನ್ನು ಸಂಪೂರ್ಣ ಸ್ವಚ್ಚಗೊಳಿಸಿ ಅಳತೆ ಹಾಕಲಾಗಿದೆ. ಜೊತೆಗೆ ಮಸೀದಿಯೊಳಗೆ ನಂದಿ ವಿಗ್ರಹ ಕೂಡ ಪತ್ತೆಯಾಗಿದೆ. ಶಿವಲಿಂಗದ ಕಡೆ ನಂದಿ ವಿಗ್ರಹ ಮುಖ ಮಾಡಿದೆ. ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ಕಳಸ ಕೂಡ ಪತ್ತೆಯಾಗಿದೆ. ದೇಗುಲದ ಮೇಲಿರುವ ಕಳಸದಂಥ ಕುರುಹು ಪತ್ತೆಯಾಗಿದೆ.

ಇದನ್ನೂ ಓದಿ: ಬಂಧಿತ ಎಲ್​ಇಟಿ ಉಗ್ರರ ಪೈಕಿ ಓರ್ವ ಮಾಜಿ ಬಿಜೆಪಿ ವ್ಯಕ್ತಿ, ಜಮ್ಮು ಕಾಶ್ಮೀರದ ರಾಜಕೀಯ ವಲಯಗಳಲ್ಲಿ ಗದ್ದಲ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ