AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque Survey: ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಆರಂಭ

ಭಾರತೀಯ ಪುರಾತತ್ವ ಇಲಾಖೆಯು ಕಾಶಿಯ ಜ್ಞಾನವಾಪಿ(Gyanvapi) ಮಸೀದಿಯ ಸಮೀಕ್ಷೆಯನ್ನು ಇಂದು(ಸೋಮವಾರ) ಆರಂಭಿಸಿದೆ.

Gyanvapi Mosque Survey: ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಆರಂಭ
ಜ್ಞಾನವಾಪಿ ಮಸೀದಿImage Credit source: Dtnext
ನಯನಾ ರಾಜೀವ್
|

Updated on: Jul 24, 2023 | 8:01 AM

Share

ಭಾರತೀಯ ಪುರಾತತ್ವ ಇಲಾಖೆಯು ಕಾಶಿಯ ಜ್ಞಾನವಾಪಿ(Gyanvapi) ಮಸೀದಿಯ ಸಮೀಕ್ಷೆಯನ್ನು ಇಂದು(ಸೋಮವಾರ) ಆರಂಭಿಸಿದೆ. ಅಯೋಧ್ಯೆ(Ayodhya)ಯ ರಾಮಜನ್ಮ ಭೂಮಿಯ ವ್ಯಾಜ್ಯವನ್ನು ನ್ಯಾಯಾಲಯದಲ್ಲಿ ಪರಿಹರಿಸಲಾಗಿದ್ದು, ಪ್ರಕರಣ ಅಂತ್ಯಗೊಂಡು ಇದೀಗ ರಾಮಮಂದಿರದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈಗ ವಾರಾಣಸಿಯ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎನ್ನಲಾಗಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಇಂದು ಆರಂಭಿಸಲಾಗಿದೆ. ಈ ಕುರಿತು ಭಾರತೀಯ ಪುರಾತತ್ವ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಹಿಂದೂ ಪರ ದಾವೆದಾರರು, ಹಿಂದಿನ ಶಿವ ದೇವಾಲಯದ ಅವಶೇಷ ಎಂದು ಹೇಳಲಾಗತ್ತಿರುವ ಶಿವಲಿಂಗ ರೀತಿಯ ರಚನೆ ವಝುಖಾನಾ ಹೊರತುಪಡಿಸಿ ಎಲ್ಲಾ ಪ್ರದೇಶಗಳಿಗೆ ಈ ಸಮೀಕ್ಷೆ ವಿಸ್ತರಿಸುತ್ತದೆ. ASI ಆಗಸ್ಟ್ 4ರೊಳಗೆ ಜಿಲ್ಲಾ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕಿದೆ.

ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಹೇಳುವ ಮಹಿಳೆಯರ ಗುಂಪಿನ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯದ ಆದೇಶ ಬಂದಿದೆ. ಹಿಂದೂ ದೇವತೆಗಳ ಪುರಾತನ ವಿಗ್ರಹಗಳು ಮಸೀದಿಯೊಳಗೆ ನೆಲೆಗೊಂಡಿವೆ ಮತ್ತು ವೈಜ್ಞಾನಿಕ ಸಮೀಕ್ಷೆಯಿಂದ ಮಾತ್ರ ಸತ್ಯವನ್ನು ಬಹಿರಂಗಪಡಿಸಬಹುದು ಎಂದು ಮಹಿಳೆಯರು ಹೇಳಿದ್ದಾರೆ.

ಮತ್ತಷ್ಟು ಓದಿ: ಜ್ಞಾನವಾಪಿ ಪ್ರಕರಣ: ಮಸೀದಿ ಸಮಿತಿಯ ಮನವಿ ತಿರಸ್ಕರಿಸಿದ ವಾರಣಾಸಿ ನ್ಯಾಯಾಲಯ

ಒಂದು ವರ್ಷದ ಹಿಂದೆ ನಡೆದ ವೀಡಿಯೋಗ್ರಾಫಿಕ್ ಸಮೀಕ್ಷೆಯಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿತ್ತು, ಹೀಗಾಗಿ ವೈಜ್ಞಾನಿಕ ಸಮೀಕ್ಷೆಯನ್ನು ಮುಂದೂಡಲಾಗಿತ್ತು, ವಝುಖಾನಾ ಪ್ರದೇಶವನ್ನು ಸೀಲ್ ಮಾಡುವಂತೆಯೂ ನ್ಯಾಯಾಲಯ ಸೂಚಿಸಿತ್ತು.

ಈ ಹಿಂದೆ, ಹಿಂದೂ ಅರ್ಜಿದಾರರು  ಶಿವಲಿಂಗ ಎಂದು ಪ್ರತಿಪಾದಿಸಿದ ರಚನೆಯ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಎಎಸ್‌ಐಗೆ ನಿರ್ದೇಶನ ನೀಡಿತು. ಜ್ಞಾನವಾಪಿ ಮಸೀದಿಯ ಅಧಿಕಾರಿಗಳು ಈ ರಚನೆಯು ವಝುಖಾನಾ ದಲ್ಲಿ ಕಾರಂಜಿಯ ಒಂದು ಭಾಗವಾಗಿದೆ ಎಂದು ಹೇಳಲಾಗಿತ್ತು.

ಮಸೀದಿಯ ವಝುಖಾನಾದಲ್ಲಿ ಶಿವಲಿಂಗದಂಥ ರಚನೆ ಇದೆ ಎಂದು ಹೇಳಲಾಗಿರುವ ಕಾರಣ, ಆ ಸ್ಥಳದ ಸಂರಕ್ಷಣೆಗೆ ಸುಪ್ರೀಂಕೋರ್ಟ್​ ಆದೇಶಿಸಿದೆ ಹೀಗಾಗಿ ಆ ನಿರ್ದಿಷ್ಟ ಜಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ಸಮೀಕ್ಷೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ