AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗಿಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ

ಮಸೀದಿ ಸಮುಚ್ಚಯದಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಸಮೀಕ್ಷೆಯು 10.15ಕ್ಕೆ ಮುಕ್ತಾಯವಾಯಿತು.

ಬಿಗಿಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ
ಕಾಶಿಯ ಜ್ಞಾನವಾಪಿ ಮಸೀದಿ
TV9 Web
| Edited By: |

Updated on: May 16, 2022 | 1:02 PM

Share

ಲಖನೌ: ನ್ಯಾಯಾಲಯದ ಸೂಚನೆಯಂತೆ ಕಾಶಿಯ ಜ್ಞಾನವಾಪಿ ಮಸೀದಿಯ (Gyanvapi Mosque) ವಿಡಿಯೊ ಸಮೀಕ್ಷೆ ಸೋಮವಾರ ಮುಕ್ತಾಯವಾಯಿತು. ಸಮೀಕ್ಷೆ ನಡೆಸಲು ಬಂದವರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಮಸೀದಿ ಸಮುಚ್ಚಯದಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಸಮೀಕ್ಷೆಯು 10.15ಕ್ಕೆ ಮುಕ್ತಾಯವಾಯಿತು. ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಂತೆ ಜ್ಞಾನವಾಪಿ ಮಸೀದಿ ಇದೆ. ಜ್ಞಾನವಾಪಿ ಮಸೀದಿಯ ಹೊರಗೋಡೆಯಲ್ಲಿರುವ ಕೆಲ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಮಹಿಳೆಯರ ತಂಡವೊಂದು ಅನುಮತಿ ಕೋರಿದೆ.

‘ನ್ಯಾಯಾಲಯವು ನೇಮಿಸಿದ್ದ ಸಮಿತಿಯು ಎರಡು ತಾಸು ಸಮೀಕ್ಷೆ ನಡೆಸಿದ ನಂತರ ಕೆಲಸ ಮುಗಿಸಿತು. ತಂಡದ ಭಾಗವಾಗಿರುವ ಎಲ್ಲ ಪಕ್ಷಗಳೂ ತೃಪ್ತಿ ವ್ಯಕ್ತಪಡಿಸಿವೆ’ ಎಂದು ವಾರಣಾಸಿ ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ವರದಿಗಾರರಿಗೆ ತಿಳಿಸಿದರು.

ಮಸೀದಿ ಸಮಿತಿಯು ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ ಸಮೀಕ್ಷೆಯನ್ನು ಕಳೆದ ವಾರ ನಿಲ್ಲಿಸಲಾಗಿತ್ತು. ನ್ಯಾಯಾಲಯವು ನೇಮಿಸಿರುವ ಅಡ್ವೊಕೇಟ್ ಕಮಿಷನರ್​ಗೆ ಮಸೀದಿಯ ಒಳಗೆ ಚಿತ್ರೀಕರಣ ನಡೆಸಲು ಅನುಮತಿ ಇಲ್ಲ ಎಂದು ಮಸೀದಿ ಸಮಿತಿ ಆಕ್ಷೇಪಿಸಿತ್ತು.

ಅಡ್ವೊಕೇಟ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಬದಲಿಸಬೇಕು ಎನ್ನುವ ಮಸೀದಿ ಸಮಿತಿಯ ಮನವಿಯನ್ನು ಕಳೆದ ಗುರುವಾರ ವಾರಣಾಸಿಯ ಜಿಲ್ಲಾ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ತಳ್ಳಿ ಹಾಕಿದ್ದರು. ಜ್ಞಾನವಾಪಿ ಮಸೀದಿ-ಗೌರಿ ಶೃಂಗಾರ್ ಸಮುಚ್ಚಯದ ಸಮೀಕ್ಷೆಯನ್ನು ಅವರಿಂದಲೇ ನಡೆಸಲು ನ್ಯಾಯಾಲಯ ಸಮ್ಮತಿಸಿತ್ತು. ಕೋರ್ಟ್​ ಕಮಿಷನರ್​ಗೆ ನೆರವು ಒದಗಿಸಲೆಂದು ಇನ್ನೂ ಇಬ್ಬರು ವಕೀಲರನ್ನು ನ್ಯಾಯಾಲಯವು ನೇಮಿಸಿತ್ತು. ಮಂಗಳವಾರದ ಒಳಗೆ ಸಮೀಕ್ಷೆ ಪೂರ್ಣಗೊಳಿಸಬೇಕೆಂದು ಸೂಚಿಸಿತ್ತು.

ಮಸೀದಿಯ ಕೆಲವು ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಲು ಬೀಗದ ಕೀಲಿಗಳನ್ನು ನೀಡದಿದ್ದರೆ ಬೀಗ ಒಡೆಯಲಾಗುವುದು ಎಂದು ಎಚ್ಚರಿಸಿದ್ದ ನ್ಯಾಯಾಲಯವು, ಸಮೀಕ್ಷೆಗೆ ಅಡ್ಡಿಪಡಿಸುವವರ ವಿರುದ್ಧ ಎಫ್​ಐಆರ್ ದಾಖಲು ಮಾಡುವಂತೆ ಸೂಚಿಸಿತ್ತು.

ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್​ ಶುಕ್ರವಾರ ನಿರಾಕರಿಸಿತ್ತು. ಮುಸ್ಲಿಂ ಸಮುದಾಯ ಸಲ್ಲಿಸಿರುವ ಮನವಿಯನ್ನು ಆಲಿಸುವುದಾಗಿ ಭರವಸೆ ನೀಡಿತ್ತು. ನ್ಯಾಯಾಲಯ ನೇಮಿಸಿರುವ ಅಡ್ವೊಕೇಟ್ ಕಮಿಷನರ್​ಗಳು, ಐವರು ವಕೀಲರು (ಎರಡೂ ಪಕ್ಷಗಳ ಪರವಾಗಿ ತಲಾ ಇಬ್ಬರು ಮತ್ತು ಒಬ್ಬ ಸಹಾಯಕ) ವಿಡಿಯೊ ಸಮೀಕ್ಷೆ ನಡೆಸಿದ ತಂಡದಲ್ಲಿ ಇದ್ದರು.

ತಾಜಾ ಸುದ್ದಿಗೆ ಲಿಂಕ್ ಕ್ಲಿಕ್ ಮಾಡಿ

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ