AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗಿಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ

ಮಸೀದಿ ಸಮುಚ್ಚಯದಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಸಮೀಕ್ಷೆಯು 10.15ಕ್ಕೆ ಮುಕ್ತಾಯವಾಯಿತು.

ಬಿಗಿಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ
ಕಾಶಿಯ ಜ್ಞಾನವಾಪಿ ಮಸೀದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 16, 2022 | 1:02 PM

ಲಖನೌ: ನ್ಯಾಯಾಲಯದ ಸೂಚನೆಯಂತೆ ಕಾಶಿಯ ಜ್ಞಾನವಾಪಿ ಮಸೀದಿಯ (Gyanvapi Mosque) ವಿಡಿಯೊ ಸಮೀಕ್ಷೆ ಸೋಮವಾರ ಮುಕ್ತಾಯವಾಯಿತು. ಸಮೀಕ್ಷೆ ನಡೆಸಲು ಬಂದವರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಮಸೀದಿ ಸಮುಚ್ಚಯದಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಸಮೀಕ್ಷೆಯು 10.15ಕ್ಕೆ ಮುಕ್ತಾಯವಾಯಿತು. ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಂತೆ ಜ್ಞಾನವಾಪಿ ಮಸೀದಿ ಇದೆ. ಜ್ಞಾನವಾಪಿ ಮಸೀದಿಯ ಹೊರಗೋಡೆಯಲ್ಲಿರುವ ಕೆಲ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಮಹಿಳೆಯರ ತಂಡವೊಂದು ಅನುಮತಿ ಕೋರಿದೆ.

‘ನ್ಯಾಯಾಲಯವು ನೇಮಿಸಿದ್ದ ಸಮಿತಿಯು ಎರಡು ತಾಸು ಸಮೀಕ್ಷೆ ನಡೆಸಿದ ನಂತರ ಕೆಲಸ ಮುಗಿಸಿತು. ತಂಡದ ಭಾಗವಾಗಿರುವ ಎಲ್ಲ ಪಕ್ಷಗಳೂ ತೃಪ್ತಿ ವ್ಯಕ್ತಪಡಿಸಿವೆ’ ಎಂದು ವಾರಣಾಸಿ ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ವರದಿಗಾರರಿಗೆ ತಿಳಿಸಿದರು.

ಮಸೀದಿ ಸಮಿತಿಯು ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ ಸಮೀಕ್ಷೆಯನ್ನು ಕಳೆದ ವಾರ ನಿಲ್ಲಿಸಲಾಗಿತ್ತು. ನ್ಯಾಯಾಲಯವು ನೇಮಿಸಿರುವ ಅಡ್ವೊಕೇಟ್ ಕಮಿಷನರ್​ಗೆ ಮಸೀದಿಯ ಒಳಗೆ ಚಿತ್ರೀಕರಣ ನಡೆಸಲು ಅನುಮತಿ ಇಲ್ಲ ಎಂದು ಮಸೀದಿ ಸಮಿತಿ ಆಕ್ಷೇಪಿಸಿತ್ತು.

ಅಡ್ವೊಕೇಟ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಬದಲಿಸಬೇಕು ಎನ್ನುವ ಮಸೀದಿ ಸಮಿತಿಯ ಮನವಿಯನ್ನು ಕಳೆದ ಗುರುವಾರ ವಾರಣಾಸಿಯ ಜಿಲ್ಲಾ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ತಳ್ಳಿ ಹಾಕಿದ್ದರು. ಜ್ಞಾನವಾಪಿ ಮಸೀದಿ-ಗೌರಿ ಶೃಂಗಾರ್ ಸಮುಚ್ಚಯದ ಸಮೀಕ್ಷೆಯನ್ನು ಅವರಿಂದಲೇ ನಡೆಸಲು ನ್ಯಾಯಾಲಯ ಸಮ್ಮತಿಸಿತ್ತು. ಕೋರ್ಟ್​ ಕಮಿಷನರ್​ಗೆ ನೆರವು ಒದಗಿಸಲೆಂದು ಇನ್ನೂ ಇಬ್ಬರು ವಕೀಲರನ್ನು ನ್ಯಾಯಾಲಯವು ನೇಮಿಸಿತ್ತು. ಮಂಗಳವಾರದ ಒಳಗೆ ಸಮೀಕ್ಷೆ ಪೂರ್ಣಗೊಳಿಸಬೇಕೆಂದು ಸೂಚಿಸಿತ್ತು.

ಮಸೀದಿಯ ಕೆಲವು ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಲು ಬೀಗದ ಕೀಲಿಗಳನ್ನು ನೀಡದಿದ್ದರೆ ಬೀಗ ಒಡೆಯಲಾಗುವುದು ಎಂದು ಎಚ್ಚರಿಸಿದ್ದ ನ್ಯಾಯಾಲಯವು, ಸಮೀಕ್ಷೆಗೆ ಅಡ್ಡಿಪಡಿಸುವವರ ವಿರುದ್ಧ ಎಫ್​ಐಆರ್ ದಾಖಲು ಮಾಡುವಂತೆ ಸೂಚಿಸಿತ್ತು.

ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್​ ಶುಕ್ರವಾರ ನಿರಾಕರಿಸಿತ್ತು. ಮುಸ್ಲಿಂ ಸಮುದಾಯ ಸಲ್ಲಿಸಿರುವ ಮನವಿಯನ್ನು ಆಲಿಸುವುದಾಗಿ ಭರವಸೆ ನೀಡಿತ್ತು. ನ್ಯಾಯಾಲಯ ನೇಮಿಸಿರುವ ಅಡ್ವೊಕೇಟ್ ಕಮಿಷನರ್​ಗಳು, ಐವರು ವಕೀಲರು (ಎರಡೂ ಪಕ್ಷಗಳ ಪರವಾಗಿ ತಲಾ ಇಬ್ಬರು ಮತ್ತು ಒಬ್ಬ ಸಹಾಯಕ) ವಿಡಿಯೊ ಸಮೀಕ್ಷೆ ನಡೆಸಿದ ತಂಡದಲ್ಲಿ ಇದ್ದರು.

ತಾಜಾ ಸುದ್ದಿಗೆ ಲಿಂಕ್ ಕ್ಲಿಕ್ ಮಾಡಿ

ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ