AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗೆ ಅವಕಾಶ ನೀಡುವ ಕುರಿತು ರೈತರು ಆಲೋಚಿಸಬೇಕು: ಎಚ್.ಡಿ.ಕುಮಾರಸ್ವಾಮಿ

ಪ್ರಯೋಗಕ್ಕೆ ಅವಕಾಶ ನೀಡದಿದ್ದರೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದಿರುವ ಎಚ್​.ಡಿ.ಕುಮಾರಸ್ವಾಮಿ, ರೈತರು ಕಾಯ್ದೆಗಳ ಅನುಷ್ಠಾನಕ್ಕೆ ಒಮ್ಮೆ ಅವಕಾಶ ನೀಡಬೇಕು. ಸರ್ಕಾರ ಮತ್ತು ಹೋರಾಟಗಾರರ ನಡುವೆ ಸಮನ್ವಯ ಸಾಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಕಾಯ್ದೆಗೆ ಅವಕಾಶ ನೀಡುವ ಕುರಿತು ರೈತರು ಆಲೋಚಿಸಬೇಕು: ಎಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
guruganesh bhat
| Edited By: |

Updated on: Dec 27, 2020 | 6:42 PM

Share

ಬೆಂಗಳೂರು: ‘ರೈತರು ಹೊಸ ಕೃಷಿ ಕಾಯ್ದೆಗಳನ್ನು ಪ್ರಯೋಗಾತ್ಮಕವಾಗಿ ಸ್ವೀಕರಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಕ್ಕೆ ದನಿಗೂಡಿಸಿದ್ದಾರೆ. ರೈತ ಸಮುದಾಯವು ಕಾಯ್ದೆಗಳ ಕುರಿತು ಮುಕ್ತ ಮನಸ್ಸಿನಿಂದ ಯೋಚಿಸಬೇಕು.ನೂತನ ಕೃಷಿ ಕಾಯ್ದೆಗಳಿಂದ ಪ್ರಯೋಜನವಾಗದಿದ್ದರೆ ಸರ್ಕಾರ ತಿದ್ದುಪಡಿ ಮಾಡುವ ಭರವಸೆ ನೀಡಿದೆ ಎಂದಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್​​ರನ್ನು ಟ್ಯಾಗ್ ಮಾಡಿರುವ ಅವರು ದೆಹಲಿ ಚಲೋ ಚಳವಳಿ ಇತರ ದೇಶಗಳಿಗೆ ಭಾರತದಲ್ಲಿ ಬೃಹತ್ ಸಮಸ್ಯೆ ಸೃಷ್ಟಿಯಾಗಿದೆ ಎಂಬ ಸಂದೇಶವನ್ನು ನೀಡುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಯೋಗಾತ್ಮಕವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಅವಕಾಶ ನೀಡುವಂತೆ ಕೋರಿದ್ದಾರೆ. ಒಂದು ವೇಳೆ ಕಾಯ್ದೆಗಳಿಂದ ಕಿಂಚಿತ್ ಉಪಯೋಗವೂ ಆಗದಿದ್ದರೆ ರೈತರು ಸೂಚಿಸುವ ತಿದ್ದುಪಡಿ ತರುವುದಾಗಿ ಪ್ರಸ್ತಾವನೆ ಮುಂದಿಟ್ಟಿದ್ದಾರೆ. ರೈತರು ಈ ಪ್ರಸ್ತಾವನೆಯನ್ನು ಮುಕ್ತ ಮನಸ್ಸಿಂದ ಸ್ವೀಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪ್ರಯೋಗಕ್ಕೆ ಅವಕಾಶ ನೀಡದಿದ್ದರೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದಿರುವ ಅವರು, ರೈತರು ಕಾಯ್ದೆಗೆ ಒಮ್ಮೆ ಅವಕಾಶ ನೀಡಬೇಕು. ಸರ್ಕಾರ ಮತ್ತು ಹೋರಾಟಗಾರರ ನಡುವೆ ಸಮನ್ವಯ ಸಾಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿಗಷ್ಟೇ ಗೃಹ ಸಚಿವ ರಾಜನಾಥ್ ಸಿಂಗ್​, ಒಂದೆರಡು ವರ್ಷಗಳಿಗಾದರೂ ನೂತನ ಕೃಷಿ ಕಾಯ್ದೆ ಪ್ರಾಯೋಗಿಕವಾಗಿ ಜಾರಿಗೊಳಿಸಿಸುವ ಕುರಿತು ಹೇಳಿಕೆ ನೀಡಿದ್ದರು.

ದೆಹಲಿಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ: ಕುಮಾರಸ್ವಾಮಿ ಸರಣಿ ಟ್ವೀಟ್

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?