Sign In

By signing in or creating an account, you agree with Associated Broadcasting Company's Terms & Conditions and Privacy Policy.

H3N2 Death in Maharashtra: ಮಹಾರಾಷ್ಟ್ರದಲ್ಲಿ ತೀವ್ರ ಜ್ವರದಿಂದ ಎಂಬಿಬಿಎಸ್​ ವಿದ್ಯಾರ್ಥಿ ಸಾವು, ಹೆಚ್​3ಎನ್​2 ವೈರಸ್ ಶಂಕೆ

ಮಹಾರಾಷ್ಟ್ರದಲ್ಲಿ ಹೆಚ್​3ಎನ್​2 ವೈರಸ್​ಗೆ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಲ್ಲಿ, ಬಾರತದಲ್ಲಿ ಹೆಚ್​3ಎನ್​2 ವೈರಸ್​ ಪ್ರಕರಣಗಳು ಹೆಚ್ಚುತ್ತಿವೆ.

H3N2 Death in Maharashtra: ಮಹಾರಾಷ್ಟ್ರದಲ್ಲಿ ತೀವ್ರ ಜ್ವರದಿಂದ ಎಂಬಿಬಿಎಸ್​ ವಿದ್ಯಾರ್ಥಿ ಸಾವು, ಹೆಚ್​3ಎನ್​2 ವೈರಸ್ ಶಂಕೆ
ಹೆಚ್​3ಎನ್​2 ವೈರಸ್Image Credit source: The Wire
Follow us
ನಯನಾ ರಾಜೀವ್
| Updated By: Digi Tech Desk

Updated on:Mar 15, 2023 | 2:20 PM

ಮಹಾರಾಷ್ಟ್ರದಲ್ಲಿ ಹೆಚ್​3ಎನ್​2 ವೈರಸ್​ಗೆ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಲ್ಲಿ, ಬಾರತದಲ್ಲಿ ಹೆಚ್​3ಎನ್​2 ವೈರಸ್​ ಪ್ರಕರಣಗಳು ಹೆಚ್ಚುತ್ತಿವೆ. ಭಾರತದಲ್ಲಿ ಇದುವರೆಗೆ H3N2 ನಿಂದ ಎರಡು ಸಾವುಗಳು ಸಂಭವಿಸಿವೆ. ಒಂದು ಕರ್ನಾಟಕದಲ್ಲಿ ಮತ್ತು ಇನ್ನೊಂದು ಹರಿಯಾಣದಲ್ಲಿ. ಇದೀಗ ಮಹಾರಾಷ್ಟ್ರದಲ್ಲಿ ಎಂಬಿಬಿಎಸ್​ ವಿದ್ಯಾರ್ಥಿ ಮೃತಪಟ್ಟಿದ್ದು, ಇದು ಹೆಚ್​3ಎನ್​2 ಎನ್ನುವುದಕ್ಕೆ ಸಧ್ಯಕ್ಕೆ ಯಾವುದೇ ಪುರಾವೆಗಳಿಲ್ಲ.  ಮರಣೋತ್ತರ ಪರೀಕ್ಷೆಯಲ್ಲಿ ಅವರ ರಕ್ತದಲ್ಲಿ H3N2 ವೈರಸ್ ಪತ್ತೆಯಾಗಿದೆ ಎನ್ನಲಾಗಿದೆ.

ಅಹ್ಮದ್‌ನಗರದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ 23ರ ಹರೆಯದ  ವಿದ್ಯಾರ್ಥಿ ಕಳೆದ ವಾರ ಸ್ನೇಹಿತರೊಂದಿಗೆ ಕೊಂಕಣದ ಅಲಿಬಾಗ್‌ಗೆ ಪಿಕ್ನಿಕ್‌ಗೆ ತೆರಳಿದ್ದರು. ಅಲ್ಲಿಂದ ಬಂದ ನಂತರ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಪರೀಕ್ಷಿಸಿದಾಗ ಕೋವಿಡ್-19 ಪಾಸಿಟಿವ್ ಎಂದು ತಿಳಿದುಬಂದಿದೆ. ಆ ನಂತರ ಅವರನ್ನು ಅಹಮದ್‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ (ಮಾರ್ಚ್ 13) ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.  ಅವರ ಮರಣೋತ್ತರ ಪರೀಕ್ಷೆಯು ಅವರ ರಕ್ತದಲ್ಲಿ H3N2 ವೈರಸ್ ಕಂಡುಬಂದಿದೆ ಎಂದು ವರದಿಯಾಗಿದೆ, ಆದರೆ ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.

ಮತ್ತೊಂದು ಪ್ರಕರಣದಲ್ಲಿ, ಗುಜರಾತ್‌ನ ವಡೋದರಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 58 ವರ್ಷದ ಮಹಿಳೆ ಜ್ವರ ತರಹದ ರೋಗಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಮಾರ್ಚ್ 14) ತಿಳಿಸಿದ್ದಾರೆ. H3N2 ಇನ್‌ಫ್ಲುಯೆಂಜಾ ವೈರಸ್ ಕಾರಣವೇ ಎಂದು ಕೇಳಿದಾಗ, ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಪರಿಶೀಲನಾ ಸಮಿತಿಯು ಮಹಿಳೆಯ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:54 am, Wed, 15 March 23

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್