AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H3N2 Virus: ಪುದುಚೇರಿಯಲ್ಲಿ ಹೆಚ್​3ಎನ್​2 ವೈರಸ್ ಹೆಚ್ಚಳ, ಶಾಲೆಗಳಿಗೆ ಮಾ.16 ರಿಂದ 10 ದಿನಗಳ ಕಾಲ ರಜೆ ಘೋಷಣೆ

ಪುದುಚೇರಿಯಲ್ಲಿ ಹೆಚ್​3ಎನ್​2 ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಚ್​ 16-26ರವರೆಗೆ ರಜೆ ಘೋಷಿಸಲಾಗಿದೆ. ಮಾರ್ಚ್​ 11ರವರೆಗೆ ಪುದುಚೇರಿಯಲ್ಲಿ 79 ಹೆಚ್​3ಎನ್​2 ಪ್ರಕರಣಗಳು ಪತ್ತೆಯಾಗಿದ್ದವು.

H3N2 Virus: ಪುದುಚೇರಿಯಲ್ಲಿ ಹೆಚ್​3ಎನ್​2 ವೈರಸ್ ಹೆಚ್ಚಳ, ಶಾಲೆಗಳಿಗೆ ಮಾ.16 ರಿಂದ 10 ದಿನಗಳ ಕಾಲ ರಜೆ ಘೋಷಣೆ
ಸಚಿವ A Namassivayam
ನಯನಾ ರಾಜೀವ್
|

Updated on:Mar 15, 2023 | 2:20 PM

Share

ಪುದುಚೇರಿಯಲ್ಲಿ ಹೆಚ್​3ಎನ್​2 ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಚ್​ 16-26ರವರೆಗೆ ರಜೆ ಘೋಷಿಸಲಾಗಿದೆ. ಮಾರ್ಚ್​ 11ರವರೆಗೆ ಪುದುಚೇರಿಯಲ್ಲಿ 79 ಹೆಚ್​3ಎನ್​2 ಪ್ರಕರಣಗಳು ಪತ್ತೆಯಾಗಿದ್ದವು. ಇದುವರೆಗೆ ಯಾವುದೇ ಸಾವು ವರದಿಯಾಗಿಲ್ಲ. ಹೆಚ್ಚುತ್ತಿರುವ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಕೇಂದ್ರಾಡಳಿತ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಚಿಕಿತ್ಸೆಗಾಗಿ ಹೊರರೋಗಿಗಳ ವಿಭಾಗದಲ್ಲಿ ವಿಶೇಷ ಬೂತ್​ಗಳನ್ನು ಪ್ರಾರಂಭಿಸಲಾಗಿದೆ.

ಹೆಚ್ಚುತ್ತಿರುವ ವೈರಸ್ ಪ್ರಕರಣಗಳ ಮಧ್ಯೆ ಶಾಲೆಗಳನ್ನು ಮುಚ್ಚುವಂತೆ ರಾಜಕೀಯ ಪಕ್ಷಗಳು ಮತ್ತು ಪೋಷಕರು ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಒತ್ತಾಯಿಸಿದ್ದವು, ಹಾಗಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ವೈದ್ಯರ ಪ್ರಕಾರ, H3N2 ವೈರಸ್ ಮಕ್ಕಳು ಮತ್ತು ವೃದ್ಧರ ಮೇಲೆ ಹೆಚ್ಚು ದಾಳಿ ಮಾಡುತ್ತಿದೆ. ಆದ್ದರಿಂದ, ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಮತ್ತು ಇತರ ಎಲ್ಲಾ ನಿಯಮಗಳನ್ನು ಅನುಸರಿಸುವುದು ಸೇರಿದಂತೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವೈದ್ಯರು ಸೂಚಿಸಿದ್ದಾರೆ.

ಮತ್ತಷ್ಟು ಓದಿ: H3N2 Death in Maharashtra: ಮಹಾರಾಷ್ಟ್ರದಲ್ಲಿ ತೀವ್ರ ಜ್ವರದಿಂದ ಎಂಬಿಬಿಎಸ್​ ವಿದ್ಯಾರ್ಥಿ ಸಾವು, ಹೆಚ್​3ಎನ್​2 ವೈರಸ್ ಶಂಕೆ

ಹೆಚ್3ಎನ್2 ವೈರಸ್ ಸೋಂಕಿಗೆ ಒಳಗಾದ ಕೆಲವು ರೋಗಿಗಳಲ್ಲಿ ಶ್ವಾಸಕೋಶದಲ್ಲಿ ಹೆಚ್ಚಿನ ಸೋಂಕು ಹರಡುತ್ತಿದೆ ಎಂದು ವೈದ್ಯರು ಹೇಳುತ್ತಾರೆ. ನ್ಯುಮೋನಿಯಾ ಬರುವ ಸ್ಥಿತಿಯೂ ನಿರ್ಮಾಣವಾಗುತ್ತಿದೆ. ಸಾಮಾನ್ಯವಾಗಿ ವಯಸ್ಸಾದ ಅಥವಾ ಚಿಕ್ಕ ಮಕ್ಕಳಲ್ಲಿ, ಪ್ರಕರಣವು ಹದಗೆಟ್ಟಾಗ, ಅವರನ್ನು ಆಸ್ಪತ್ರೆಗೆ ಸೇರಿಸುವ ಅವಶ್ಯಕತೆಯಿದೆ.

ಮಹಾರಾಷ್ಟ್ರದಲ್ಲಿ ಹೆಚ್​3ಎನ್​2 ವೈರಸ್​ಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿಯಾಗಿದ್ದಾರೆ. ಇದುವರೆಗೆ ಕರ್ನಾಟಕದಲ್ಲಿ, ಹರ್ಯಾಣದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Wed, 15 March 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?