AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ಸರ್ವರ್​ ಹ್ಯಾಕ್​; 128 ಖಾತೆಗಳಿಗೆ 12 ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡ ವಂಚಕರು

ಹೈದ್ರಾಬಾದ್​ನ ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್​ಅನ್ನು ಸೈಬರ್​ ವಂಚಕರು ಹ್ಯಾಕ್​ ಮಾಡಿದ್ದು 12.90 ಕೋಟಿ ರೂಗಳನ್ನು ದೇಶದ ವಿವಿಧ ಬ್ಯಾಂಕ್​ಗಳ 128 ಖಾತೆಗಳಿಗೆ ವರ್ಗಾಯಿಸಿದ ಘಟನೆ ನಡೆದಿದೆ.

ಬ್ಯಾಂಕ್​ ಸರ್ವರ್​ ಹ್ಯಾಕ್​; 128 ಖಾತೆಗಳಿಗೆ 12 ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡ ವಂಚಕರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 26, 2022 | 2:23 PM

Share

ಹೈದ್ರಾಬಾದ್​ನ ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್ ( Mahesh Co-Operative Urban Bank )​ ಅನ್ನು ಸೈಬರ್​ ವಂಚಕರು ಹ್ಯಾಕ್ (Hack)​ ಮಾಡಿದ್ದು 12.90 ಕೋಟಿ ರೂಗಳನ್ನು ದೇಶದ ವಿವಿಧ ಬ್ಯಾಂಕ್​ಗಳ 128 ಖಾತೆಗಳಿಗೆ ವರ್ಗಾಯಿಸಿದ ಘಟನೆ ನಡೆದಿದೆ. ಒಂದೇ ಬ್ಯಾಂಕ್​ನ ಮೂರು ಖಾತೆಗಳನ್ನು ಹ್ಯಾಕ್​ ಮಾಡಿದ್ದು ಒಂದೇ ದಿನದಲ್ಲಿ 12 ಕೋಟಿಗೂ ಹೆಚ್ಚು ಹಣಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಈ ಕುರಿತು ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್​ನ ಐಟಿ ಹೆಡ್​ ಕೆ ಬದ್ರಿನಾಥ್​ ಮಾಹಿತಿ ನೀಡಿದ್ದು, ಬ್ಯಾಂಕ್ ಗ್ರಾಹಕರ ಖಾತೆಗಳಲ್ಲಿನ ಹಣ ಸುರಕ್ಷಿತವಾಗಿದೆ. ಹ್ಯಾಕರ್ಸ್​​ಗಳು  ಬ್ಯಾಂಕ್​ನ ರೆಮಿಟನ್ಸ್​​ ಫಂಡ್ (Remittance Funds) (ರವಾನೆ ಮಾಡುವ ಹಣ)ನ ಖಾತೆಯನ್ನು ಹ್ಯಾಕ್​ ಮಾಡಿ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. ಗಮನಕ್ಕೆ ಬಂದ ತಕ್ಷಣ ಹಣ ವರ್ಗಾವಣೆಯಾಗುವುದನ್ನು ತಡೆಯಲಾಗಿದೆ. ಆದರೂ 12.90 ಕೋಟಿರೂಗಳನ್ನು ವಂಚಕರು ದೋಚಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಣ ದೋಚಿದ್ದರ ಕುರಿತು ಬ್ಯಾಂಕ್​ ಕಡೆಯಿಂದ ಸೈಬರ್​ ಕ್ರೈಮ್​ ಪೊಲೀಸರಿಗೆ ದುರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ  ಸೈಬರ್​ ಕ್ರೈಮ್​ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಒಂದು ಖಾತೆಯನ್ನು ಪತ್ತೆ ಮಾಡಲಾಗಿದೆ. ಬ್ಯಾಂಕ್​ನಲ್ಲಿ ಎಲ್ಲಾ ರೀತಿಯ ಸುರಕ್ಷತೆಗಳಿವೆ ಆದರೂ ಇದೇ  ಮೊದಲ ಬಾರಿಗೆ ಹ್ಯಾಕ್​ ಆಗಿದೆ.  ಹೇಗೆ ಹ್ಯಾಕ್​ ಮಾಡಲಾಗಿದೆ ಎಂದು ತಿಳಿಯಲು ಟೆಕ್ನಿಕಲ್​ ಎಕ್ಸ್​ಪರ್ಟ್ಸ್​​ಗಳನ್ನು ನೇಮಕ ಮಾಡಲಾಗಿದೆ ಎಂದು ಬ್ಯಾಂಕ್​​ನ ಐಟಿ ತಜ್ಞರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯಾ.ಕಾಂ ವರದಿ ಮಾಡಿದೆ.

ಬ್ಯಾಂಕ್​ಗೆ ಈಗಾಗಲೇ ಸೈಬರ್​ ಕ್ರೈಮ್​ ವಿರುದ್ಧ ಇನ್ಸುರೆನ್ಸ್​ ಮಾಡಿಸಲಾಗಿದೆ. ಸೈಬರ್​ ಕ್ರೈಮ್​ ಅಧಿಕಾರಿಗಳೂ ಕೂಡ ತನಿಖೆಯನ್ನು ಆರಂಭಿಸಿದ್ದಾರೆ. ತನಿಖೆಯ ಬಳಿಕ ಹಣ ವರ್ಗಾವಣೆಯಾಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಹೇಳಿದ್ದಾರೆ. ​​ಹಣ ದೋಚಿದ ವಂಚಕರು ದೆಹಲಿ, ಬಿಹಾರ್​ ಸೇರಿದಂತೆ ಒಟ್ಟು ದೇಶದ ವಿವಿಧ ರಾಜ್ಯಗಳ 128 ಬ್ಯಾಂಕ್​ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರಲ್ಲಿ ಮನೆ ಮುಂದಿನ ಹೂಕುಂಡಗಳನ್ನೂ ಕದಿಯುತ್ತಿದ್ದಾರೆ! ಕಾರಿನಲ್ಲಿ ಬಂದ ಯುವತಿಯಿಂದ ಕುಕೃತ್ಯ

Published On - 11:58 am, Wed, 26 January 22

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ