AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ಸರ್ವರ್​ ಹ್ಯಾಕ್​; 128 ಖಾತೆಗಳಿಗೆ 12 ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡ ವಂಚಕರು

ಹೈದ್ರಾಬಾದ್​ನ ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್​ಅನ್ನು ಸೈಬರ್​ ವಂಚಕರು ಹ್ಯಾಕ್​ ಮಾಡಿದ್ದು 12.90 ಕೋಟಿ ರೂಗಳನ್ನು ದೇಶದ ವಿವಿಧ ಬ್ಯಾಂಕ್​ಗಳ 128 ಖಾತೆಗಳಿಗೆ ವರ್ಗಾಯಿಸಿದ ಘಟನೆ ನಡೆದಿದೆ.

ಬ್ಯಾಂಕ್​ ಸರ್ವರ್​ ಹ್ಯಾಕ್​; 128 ಖಾತೆಗಳಿಗೆ 12 ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡ ವಂಚಕರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 26, 2022 | 2:23 PM

Share

ಹೈದ್ರಾಬಾದ್​ನ ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್ ( Mahesh Co-Operative Urban Bank )​ ಅನ್ನು ಸೈಬರ್​ ವಂಚಕರು ಹ್ಯಾಕ್ (Hack)​ ಮಾಡಿದ್ದು 12.90 ಕೋಟಿ ರೂಗಳನ್ನು ದೇಶದ ವಿವಿಧ ಬ್ಯಾಂಕ್​ಗಳ 128 ಖಾತೆಗಳಿಗೆ ವರ್ಗಾಯಿಸಿದ ಘಟನೆ ನಡೆದಿದೆ. ಒಂದೇ ಬ್ಯಾಂಕ್​ನ ಮೂರು ಖಾತೆಗಳನ್ನು ಹ್ಯಾಕ್​ ಮಾಡಿದ್ದು ಒಂದೇ ದಿನದಲ್ಲಿ 12 ಕೋಟಿಗೂ ಹೆಚ್ಚು ಹಣಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಈ ಕುರಿತು ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್​ನ ಐಟಿ ಹೆಡ್​ ಕೆ ಬದ್ರಿನಾಥ್​ ಮಾಹಿತಿ ನೀಡಿದ್ದು, ಬ್ಯಾಂಕ್ ಗ್ರಾಹಕರ ಖಾತೆಗಳಲ್ಲಿನ ಹಣ ಸುರಕ್ಷಿತವಾಗಿದೆ. ಹ್ಯಾಕರ್ಸ್​​ಗಳು  ಬ್ಯಾಂಕ್​ನ ರೆಮಿಟನ್ಸ್​​ ಫಂಡ್ (Remittance Funds) (ರವಾನೆ ಮಾಡುವ ಹಣ)ನ ಖಾತೆಯನ್ನು ಹ್ಯಾಕ್​ ಮಾಡಿ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. ಗಮನಕ್ಕೆ ಬಂದ ತಕ್ಷಣ ಹಣ ವರ್ಗಾವಣೆಯಾಗುವುದನ್ನು ತಡೆಯಲಾಗಿದೆ. ಆದರೂ 12.90 ಕೋಟಿರೂಗಳನ್ನು ವಂಚಕರು ದೋಚಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಣ ದೋಚಿದ್ದರ ಕುರಿತು ಬ್ಯಾಂಕ್​ ಕಡೆಯಿಂದ ಸೈಬರ್​ ಕ್ರೈಮ್​ ಪೊಲೀಸರಿಗೆ ದುರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ  ಸೈಬರ್​ ಕ್ರೈಮ್​ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಒಂದು ಖಾತೆಯನ್ನು ಪತ್ತೆ ಮಾಡಲಾಗಿದೆ. ಬ್ಯಾಂಕ್​ನಲ್ಲಿ ಎಲ್ಲಾ ರೀತಿಯ ಸುರಕ್ಷತೆಗಳಿವೆ ಆದರೂ ಇದೇ  ಮೊದಲ ಬಾರಿಗೆ ಹ್ಯಾಕ್​ ಆಗಿದೆ.  ಹೇಗೆ ಹ್ಯಾಕ್​ ಮಾಡಲಾಗಿದೆ ಎಂದು ತಿಳಿಯಲು ಟೆಕ್ನಿಕಲ್​ ಎಕ್ಸ್​ಪರ್ಟ್ಸ್​​ಗಳನ್ನು ನೇಮಕ ಮಾಡಲಾಗಿದೆ ಎಂದು ಬ್ಯಾಂಕ್​​ನ ಐಟಿ ತಜ್ಞರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯಾ.ಕಾಂ ವರದಿ ಮಾಡಿದೆ.

ಬ್ಯಾಂಕ್​ಗೆ ಈಗಾಗಲೇ ಸೈಬರ್​ ಕ್ರೈಮ್​ ವಿರುದ್ಧ ಇನ್ಸುರೆನ್ಸ್​ ಮಾಡಿಸಲಾಗಿದೆ. ಸೈಬರ್​ ಕ್ರೈಮ್​ ಅಧಿಕಾರಿಗಳೂ ಕೂಡ ತನಿಖೆಯನ್ನು ಆರಂಭಿಸಿದ್ದಾರೆ. ತನಿಖೆಯ ಬಳಿಕ ಹಣ ವರ್ಗಾವಣೆಯಾಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಹೇಳಿದ್ದಾರೆ. ​​ಹಣ ದೋಚಿದ ವಂಚಕರು ದೆಹಲಿ, ಬಿಹಾರ್​ ಸೇರಿದಂತೆ ಒಟ್ಟು ದೇಶದ ವಿವಿಧ ರಾಜ್ಯಗಳ 128 ಬ್ಯಾಂಕ್​ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರಲ್ಲಿ ಮನೆ ಮುಂದಿನ ಹೂಕುಂಡಗಳನ್ನೂ ಕದಿಯುತ್ತಿದ್ದಾರೆ! ಕಾರಿನಲ್ಲಿ ಬಂದ ಯುವತಿಯಿಂದ ಕುಕೃತ್ಯ

Published On - 11:58 am, Wed, 26 January 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!