AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ಸರ್ವರ್​ ಹ್ಯಾಕ್​; 128 ಖಾತೆಗಳಿಗೆ 12 ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡ ವಂಚಕರು

ಹೈದ್ರಾಬಾದ್​ನ ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್​ಅನ್ನು ಸೈಬರ್​ ವಂಚಕರು ಹ್ಯಾಕ್​ ಮಾಡಿದ್ದು 12.90 ಕೋಟಿ ರೂಗಳನ್ನು ದೇಶದ ವಿವಿಧ ಬ್ಯಾಂಕ್​ಗಳ 128 ಖಾತೆಗಳಿಗೆ ವರ್ಗಾಯಿಸಿದ ಘಟನೆ ನಡೆದಿದೆ.

ಬ್ಯಾಂಕ್​ ಸರ್ವರ್​ ಹ್ಯಾಕ್​; 128 ಖಾತೆಗಳಿಗೆ 12 ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡ ವಂಚಕರು
ಪ್ರಾತಿನಿಧಿಕ ಚಿತ್ರ
TV9 Web
| Updated By: Digi Tech Desk|

Updated on:Jan 26, 2022 | 2:23 PM

Share

ಹೈದ್ರಾಬಾದ್​ನ ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್ ( Mahesh Co-Operative Urban Bank )​ ಅನ್ನು ಸೈಬರ್​ ವಂಚಕರು ಹ್ಯಾಕ್ (Hack)​ ಮಾಡಿದ್ದು 12.90 ಕೋಟಿ ರೂಗಳನ್ನು ದೇಶದ ವಿವಿಧ ಬ್ಯಾಂಕ್​ಗಳ 128 ಖಾತೆಗಳಿಗೆ ವರ್ಗಾಯಿಸಿದ ಘಟನೆ ನಡೆದಿದೆ. ಒಂದೇ ಬ್ಯಾಂಕ್​ನ ಮೂರು ಖಾತೆಗಳನ್ನು ಹ್ಯಾಕ್​ ಮಾಡಿದ್ದು ಒಂದೇ ದಿನದಲ್ಲಿ 12 ಕೋಟಿಗೂ ಹೆಚ್ಚು ಹಣಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಈ ಕುರಿತು ಮಹೇಶ್​ ಕೋ ಆಪರೇಟಿವ್​ ಅರ್ಬನ್​ ಬ್ಯಾಂಕ್​ನ ಐಟಿ ಹೆಡ್​ ಕೆ ಬದ್ರಿನಾಥ್​ ಮಾಹಿತಿ ನೀಡಿದ್ದು, ಬ್ಯಾಂಕ್ ಗ್ರಾಹಕರ ಖಾತೆಗಳಲ್ಲಿನ ಹಣ ಸುರಕ್ಷಿತವಾಗಿದೆ. ಹ್ಯಾಕರ್ಸ್​​ಗಳು  ಬ್ಯಾಂಕ್​ನ ರೆಮಿಟನ್ಸ್​​ ಫಂಡ್ (Remittance Funds) (ರವಾನೆ ಮಾಡುವ ಹಣ)ನ ಖಾತೆಯನ್ನು ಹ್ಯಾಕ್​ ಮಾಡಿ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. ಗಮನಕ್ಕೆ ಬಂದ ತಕ್ಷಣ ಹಣ ವರ್ಗಾವಣೆಯಾಗುವುದನ್ನು ತಡೆಯಲಾಗಿದೆ. ಆದರೂ 12.90 ಕೋಟಿರೂಗಳನ್ನು ವಂಚಕರು ದೋಚಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಣ ದೋಚಿದ್ದರ ಕುರಿತು ಬ್ಯಾಂಕ್​ ಕಡೆಯಿಂದ ಸೈಬರ್​ ಕ್ರೈಮ್​ ಪೊಲೀಸರಿಗೆ ದುರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ  ಸೈಬರ್​ ಕ್ರೈಮ್​ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಒಂದು ಖಾತೆಯನ್ನು ಪತ್ತೆ ಮಾಡಲಾಗಿದೆ. ಬ್ಯಾಂಕ್​ನಲ್ಲಿ ಎಲ್ಲಾ ರೀತಿಯ ಸುರಕ್ಷತೆಗಳಿವೆ ಆದರೂ ಇದೇ  ಮೊದಲ ಬಾರಿಗೆ ಹ್ಯಾಕ್​ ಆಗಿದೆ.  ಹೇಗೆ ಹ್ಯಾಕ್​ ಮಾಡಲಾಗಿದೆ ಎಂದು ತಿಳಿಯಲು ಟೆಕ್ನಿಕಲ್​ ಎಕ್ಸ್​ಪರ್ಟ್ಸ್​​ಗಳನ್ನು ನೇಮಕ ಮಾಡಲಾಗಿದೆ ಎಂದು ಬ್ಯಾಂಕ್​​ನ ಐಟಿ ತಜ್ಞರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯಾ.ಕಾಂ ವರದಿ ಮಾಡಿದೆ.

ಬ್ಯಾಂಕ್​ಗೆ ಈಗಾಗಲೇ ಸೈಬರ್​ ಕ್ರೈಮ್​ ವಿರುದ್ಧ ಇನ್ಸುರೆನ್ಸ್​ ಮಾಡಿಸಲಾಗಿದೆ. ಸೈಬರ್​ ಕ್ರೈಮ್​ ಅಧಿಕಾರಿಗಳೂ ಕೂಡ ತನಿಖೆಯನ್ನು ಆರಂಭಿಸಿದ್ದಾರೆ. ತನಿಖೆಯ ಬಳಿಕ ಹಣ ವರ್ಗಾವಣೆಯಾಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಹೇಳಿದ್ದಾರೆ. ​​ಹಣ ದೋಚಿದ ವಂಚಕರು ದೆಹಲಿ, ಬಿಹಾರ್​ ಸೇರಿದಂತೆ ಒಟ್ಟು ದೇಶದ ವಿವಿಧ ರಾಜ್ಯಗಳ 128 ಬ್ಯಾಂಕ್​ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರಲ್ಲಿ ಮನೆ ಮುಂದಿನ ಹೂಕುಂಡಗಳನ್ನೂ ಕದಿಯುತ್ತಿದ್ದಾರೆ! ಕಾರಿನಲ್ಲಿ ಬಂದ ಯುವತಿಯಿಂದ ಕುಕೃತ್ಯ

Published On - 11:58 am, Wed, 26 January 22

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ