AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haldwani violence: ಹಲ್ದ್ವಾನಿ ಹಿಂಸಾಚಾರ ಪೂರ್ವ ಯೋಜಿತ: ಜಿಲ್ಲಾ ಮೆಜಿಸ್ಟ್ರೇಟ್

ದಾಳಿಕೋರರು ಪೆಟ್ರೋಲ್ ಬಾಂಬ್‌ಗಳನ್ನು ಬಳಸಿದರು, ಬಂಭುಲ್‌ಪುರ ಪೊಲೀಸ್ ಠಾಣೆಗೆ ಗುಂಡು ಹಾರಿಸಿದರು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದರು. ಅವರು ದಾಳಿಯ ಮೊದಲು ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿದರು ಹಿಂಸಾಚಾರವನ್ನು ಮೊದಲೇ ಯೋಜಿಸಲಾಗಿತ್ತು ಎಂದು ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ ಹೇಳಿದ್ದಾರೆ.

Haldwani violence: ಹಲ್ದ್ವಾನಿ ಹಿಂಸಾಚಾರ ಪೂರ್ವ ಯೋಜಿತ: ಜಿಲ್ಲಾ ಮೆಜಿಸ್ಟ್ರೇಟ್
ವಂದನಾ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Feb 09, 2024 | 1:45 PM

Share

ಹಲ್ದ್ವಾನಿ (ಉತ್ತರಾಖಂಡ) 09ಉತ್ತರಾಖಂಡದ ಹಲ್ದ್ವಾನಿ ಕೋಮು ಹಿಂಸಾಚಾರ (Haldwani violence) ಉಲ್ಬಣಗೊಳ್ಳುತ್ತಿದ್ದಂತೆ, ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ (Vandana Singh) ಅವರು ಈ ಹಿಂಸಾಚಾರ ಪೂರ್ವ ಯೋಜಿತ ಮತ್ತು ಅಪ್ರಚೋದಿತ ಎಂದು ಹೇಳಿದ್ದಾರೆ. “ಅಕ್ರಮವಾಗಿ ನಿರ್ಮಿಸಿದ” ಮದರಸಾವನ್ನು (madrasa) ನೆಲಸಮಗೊಳಿಸಿದ ನಂತರ ಬಂಭೂಲ್ಪುರದಲ್ಲಿ ಸಮಸ್ಯೆ ಆರಂಭವಾಗಿದೆ. ದಾಳಿ ಪ್ರಾರಂಭವಾಗುವ ಮೊದಲು ಆರೋಪಿಗಳು ಛಾವಣಿಯ ಮೇಲೆ ಕಲ್ಲುಗಳನ್ನು ಸಂಗ್ರಹಿಸಿದ್ದರು ಎಂದು ಸಿಂಗ್ ಹೇಳಿದ್ದಾರೆ.

ಮೇಲ್ಛಾವಣಿಯ ಮೇಲಿತ್ತು ಕಲ್ಲು

ದಾಳಿಕೋರರು ಪೆಟ್ರೋಲ್ ಬಾಂಬ್‌ಗಳನ್ನು ಬಳಸಿದರು, ಬಂಭುಲ್‌ಪುರ ಪೊಲೀಸ್ ಠಾಣೆಗೆ ಗುಂಡು ಹಾರಿಸಿದರು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದರು. ಅವರು ದಾಳಿಯ ಮೊದಲು ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿದರು ಹಿಂಸಾಚಾರವನ್ನು ಮೊದಲೇ ಯೋಜಿಸಲಾಗಿತ್ತು. ಜನಸಮೂಹವು ಮದರಸಾವನ್ನು ಉಳಿಸಲು ಪ್ರಯತ್ನಿಸಲಿಲ್ಲ. ಅವರು ಸರ್ಕಾರಿ ಆಸ್ತಿಗಳ  ಮೇಲೆ ದಾಳಿ ಮಾಡಿದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದರು.  ಸಿಂಗ್ ಪ್ರಕಾರ, ಮುನ್ಸಿಪಲ್ ಕಾರ್ಪೊರೇಷನ್ ತಂಡವು ಮದರಸಾ ಕೆಡವುವ ಕಾರ್ಯ ಶುರು ಮಾಡಿದಾಗ 15-20 ಜನರು ಗುಂಪನ್ನು ಪ್ರಚೋದಿಸಿದರು.

ನಾವು ನೆಲಸಮ ಕಾರ್ಯಾಚರಣೆಯನ್ನು ಮುಂದುವರಿಸಲು ನಿರ್ಧರಿಸಿದ್ದೇವೆ.  ಅತಿಕ್ರಮಣವನ್ನು ತೆಗೆದುಹಾಕಲು ವಿವಿಧ ಸ್ಥಳಗಳಲ್ಲಿ ಕಾನೂನು ಪ್ರಕ್ರಿಯೆ ನಡೆಸಲಾಗುತ್ತಿದೆ ಮತ್ತು ಆದ್ದರಿಂದ ಇಲ್ಲಿಯೂ ಮಾಡಲಾಗಿದೆ ಎಂದಿದ್ದಾರೆ ಡಿಎಂ.

ದಾಳಿಯ ಸಂದರ್ಭದಲ್ಲಿ ಪೊಲೀಸರು ಮತ್ತು ಆಡಳಿತವು ಜೀವ ಅಥವಾ ಆಸ್ತಿಗೆ ಹಾನಿ ಉಂಟುಮಾಡುವ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅವರು ಹೇಳಿದರು. ಡೆಮಾಲಿಷನ್ ಡ್ರೈವ್ ಶಾಂತಿಯುತವಾಗಿ ಪ್ರಾರಂಭವಾಯಿತು. ಸಂಪೂರ್ಣ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಲಾಗಿದ್ದರೂ, ಅರ್ಧ ಗಂಟೆಯೊಳಗೆ ದೊಡ್ಡ ಜನಸಮೂಹವು ನಮ್ಮ ಪುರಸಭೆಯ ಸಹಕಾರ ತಂಡದ ಮೇಲೆ ದಾಳಿ ಮಾಡಿದೆ” ಎಂದು ಅವರು ಹೇಳಿದರು.

ಇಬ್ಬರು ಸಾವು

ಈ ಹಿಂದೆ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಸುದ್ದಿಯಾಗಿತ್ತು ಆದರೆ ಸಾವಿನ ಸಂಖ್ಯೆಯಲ್ಲಿ ಗೊಂದಲ ಆಗಿದ್ದು , ಇಲ್ಲಿಯವರಿಗೆ ಇಬ್ಬರನ್ನು ಬಂಧಿಸಲಾಗಿದೆ. ಆಕೆಯ ಪ್ರಕಾರ ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಹಿಂಸಾಚಾರದ ಕುರಿತು ಒಟ್ಟು ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಹಿಂಸಾಚಾರವನ್ನು ಪ್ರಚೋದಿಸಿದ ಎರಡು ಡಜನ್‌ಗಿಂತಲೂ ಹೆಚ್ಚು ಜನರನ್ನು ಪೊಲೀಸರು ಗುರುತಿಸಿದ್ದಾರೆ ಎಂದು ನೈನಿತಾಲ್ ಹಿರಿಯ ಪೊಲೀಸ್ ಅಧೀಕ್ಷಕ ಪ್ರಹ್ಲಾದ್ ನಾರಾಯಣ ಮೀನಾ ಹೇಳಿದ್ದಾರೆ.

ಗುರುವಾರ ಸಂಜೆ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಪ್ರದೇಶದಲ್ಲಿ “ಕಾನೂನುಬಾಹಿರವಾಗಿ ನಿರ್ಮಿಸಲಾದ” ಮದರಸಾವನ್ನು ಕೆಡವಿದಾಗ ಹಿಂಸಾಚಾರ ಭುಗಿಲೆದ್ದ ನಂತರ ಭಾರೀ ಕೋಮು ಉದ್ವಿಗ್ನತೆ ಉಂಟಾಗಿದೆ. ಮುನ್ಸಿಪಲ್ ಕಮಿಷನರ್ ಪಂಕಜ್ ಉಪಾಧ್ಯಾಯ, ಸಿಟಿ ಮ್ಯಾಜಿಸ್ಟ್ರೇಟ್ ರಿಚಾ ಸಿಂಗ್ ಮತ್ತು ಎಸ್‌ಡಿಎಂ ಪರಿತೋಷ್ ವರ್ಮಾ ಅವರ ಸಮ್ಮುಖದಲ್ಲಿ ನೆಲಸಮ ಕಾರ್ಯ ಮಾಡಲಾಯಿತು.

ಇದನ್ನೂ ಓದಿ: Haldwani Riots: ಹಲ್ದ್ವಾನಿಯಲ್ಲಿ ಮದರಸಾ ನೆಲಸಮ, ಭುಗಿಲೆದ್ದ ಹಿಂಸಾಚಾರ, 4 ಮಂದಿ ಸಾವು, 200 ಜನರಿಗೆ ಗಾಯ

ದಾಳಿಯ ನಂತರ, ಜಿಲ್ಲಾಡಳಿತವು ಹಲ್ದ್ವಾನಿಯಲ್ಲಿ ಕರ್ಫ್ಯೂ ವಿಧಿಸಿದ್ದು , ಗಲಭೆಕೋರರ ವಿರುದ್ಧ ‘ಕಂಡಲ್ಲಿ ಗುಂಡಿಕ್ಕಿ’ ಆದೇಶವನ್ನು ಹೊರಡಿಸಿತು. ಪೊಲೀಸರ ಪ್ರಕಾರ, ಹಿಂಸಾಚಾರದಲ್ಲಿ ಕನಿಷ್ಠ 100 ಜನರು ಗಾಯಗೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ