AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಬ ಹಂಬ, ರಂಬ ರಂಬ, ಕಂಬ ಕಂಬ..! ಮತ್ತೆ ಟ್ರೋಲ್​ ಆದ ಮಮತಾ ಬ್ಯಾನರ್ಜಿ

ರಾಜ್ಯದ ಮೂಲೆ ಮೂಲೆಗೂ ತೆರಳಿ ಮಮತಾ ಬ್ಯಾನರ್ಜಿ ಪ್ರಚಾರ ಮಾಡುತ್ತಿದ್ದಾರೆ. ಅದೇ ರೀತಿ ಇಂದು ಮುರ್ಷಿದಾಬಾದ್​ನಲ್ಲಿ ಸಾರ್ವಜನಿಕ ಸಮಾವೇಶವನ್ನು ಮಮತಾ ಬ್ಯಾನರ್ಜಿ ಉದ್ಘಾಟನೆ ಮಾಡಿ ಮಾತನಾಡುವಾಗ ಅವರು ಟ್ರೋಲ್​ ಆಗಿದ್ದಾರೆ.

ಹಂಬ ಹಂಬ, ರಂಬ ರಂಬ, ಕಂಬ ಕಂಬ..! ಮತ್ತೆ ಟ್ರೋಲ್​ ಆದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ರಾಜೇಶ್ ದುಗ್ಗುಮನೆ
|

Updated on: Feb 11, 2021 | 6:55 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯಾವಾಗಲೂ ತಮ್ಮ ವಿಚಿತ್ರ ಘೋಷಣೆಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಸಿಎಎ ಕಾಯ್ದೆ ಬಗ್ಗೆ ‘ಸಿಎಎ, ಸಿಎಎ ಛೀ ಛೀ’ ಎಂದು ಹೇಳಿದ್ದ ವಿಡಿಯೋ ಭಾರೀ ವೈರಲ್​ ಆಗಿತ್ತು. ಈಗ ಪಶ್ಚಿಮ ಬಂಗಾಳ ಚುನಾವಣೆ (West Bengal Elections 2021) ಪ್ರಚಾರದಲ್ಲಿರುವ ಮಮತಾ ‘ಹಂಬ ಹಂಬ’ ಎನ್ನುವ ಘೋಷಣೆ ಮೂಲಕ ಮತ್ತೆ ಸುದ್ದಿ ಆಗಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಮಮತಾ ಬ್ಯಾನರ್ಜಿಗೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿ ಗೆದ್ದು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಕೈಗೆತ್ತಿಕೊಳ್ಳಲು ಹವಣಿಸುತ್ತಿರುವ ಬಿಜೆಪಿಯನ್ನು ತುಳಿಯಲು ಮಮತಾ ಬ್ಯಾನರ್ಜಿ ತುದಿಗಾಲಿನಲ್ಲಿದ್ದಾರೆ. ಹೀಗಾಗಿ, ರಾಜ್ಯದ ಮೂಲೆ ಮೂಲೆಗೂ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಅದೇ ರೀತಿ ಇಂದು ಮುರ್ಷಿದಾಬಾದ್​ನಲ್ಲಿ ಸಾರ್ವಜನಿಕ ಸಮಾವೇಶವನ್ನು ಮಮತಾ ಬ್ಯಾನರ್ಜಿ ಉದ್ಘಾಟನೆ ಮಾಡಿ ಮಾತನಾಡಿದ್ದಾರೆ.

ಈ ವೇಳೆ, ತುಂಟ ಹಸುಗಳು ನಮ್ಮ ಪಕ್ಷವನ್ನು ಬಿಟ್ಟು ಬಿಜೆಪಿ ಸೇರಿವೆ. ಈಗ ಅವರು ಹಂಬ ಹಂಬ, ರಂಬ ರಂಬ, ಕಂಬ ಕಂಬ, ಡುಂಬ ಡುಂಬ, ಬೊಂಬ ಬೊಂಬ ಎಂದು ಶಬ್ದ ಮಾಡುತ್ತಿವೆ. ಅವರು ನಮ್ಮ ಪಕ್ಷವನ್ನು ಬೇಗ ಬಿಟ್ಟಿದ್ದು ಒಳ್ಳೆಯದೇ ಆಯಿತು ಎಂದಿದ್ದಾರೆ. ಹಸುಗಳು ಹಂಬ ಹಂಬ ಎಂದು ಶಬ್ದ ಮಾಡುತ್ತವೆ ಎಂಬರ್ಥದಲ್ಲಿ ಈ ಮಾತನ್ನು ಮಮತಾ ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಅನೇಕ ಟ್ರೋಲ್​ಗಳು ಈ ವಿಡಿಯೋ ಕ್ಲಿಪ್​ ಬಗ್ಗೆ ಹರಿದಾಡಿವೆ. ಆ ಕುರಿತ ಕೆಲ ಟ್ರೋಲ್​ಗಳು ಇಲ್ಲಿವೆ.

ಇದನ್ನೂ ಓದಿ: ಚುನಾವಣೆ ಮುಗಿಯುವ ಮುನ್ನ ಮಮತಾ ಬ್ಯಾನರ್ಜಿ ಜೈ ಶ್ರೀರಾಮ್ ಘೋಷಣೆ ಕೂಗಲಿದ್ದಾರೆ: ಅಮಿತ್ ಶಾ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ