AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುಗಳಿಗೆ ಸರಪಳಿ, ಕೈಗಳಿಗೆ ಕೋಳ, ಅಕ್ರಮ ವಲಸಿಗರನ್ನು ಭಾರತಕ್ಕೆ ಅಮೆರಿಕ ಗಡಿಪಾರು ಮಾಡಿದ್ದು ಹೀಗೆ

ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಬಂದ ಬೆನ್ನಲ್ಲೇ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಬೃಹತ್ ಕಾರ್ಯಾಚರಣೆ ಭರದಿಂದ ಸಾಗಿದೆ. ಅಕ್ರಮ ವಲಸಿಗರ ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸರ್ಕಾರ ತನ್ನ ಮಿಲಿಟರಿ ವಿಮಾನಗಳನ್ನು ಬಳಕೆ ಮಾಡುತ್ತಿದೆ. ಹಾಗೆಯೇ ಭಾರತೀಯರ ಕೈಗಳಿಗೆ ಕೋಳ ಹಾಕಿ, ಕಾಲುಗಳನ್ನು ಚೈನ್​ಗಳಿಂದ ಕಟ್ಟಿ ಭಾರತಕ್ಕೆ ಕರೆತರಲಾಗುತ್ತಿದೆ. ಈ ಕುರಿತು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲುಗಳಿಗೆ ಸರಪಳಿ, ಕೈಗಳಿಗೆ ಕೋಳ, ಅಕ್ರಮ ವಲಸಿಗರನ್ನು ಭಾರತಕ್ಕೆ ಅಮೆರಿಕ ಗಡಿಪಾರು ಮಾಡಿದ್ದು ಹೀಗೆ
ಪಂಜಾಬ್ Image Credit source: India Today
ನಯನಾ ರಾಜೀವ್
|

Updated on: Feb 06, 2025 | 7:40 AM

Share

ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್​ ಟ್ರಂಪ್ ಎರಡನೇ ಬಾರಿ ಗದ್ದುಗೆ ಏರುತ್ತಿದ್ದಂತೆ ಮೊದಲನೆಯದಾಗಿ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ ಭಾರತೀಯರನ್ನು ಗಡಿಪಾರು ಮಾಡಿದ್ದಾರೆ. ಅಮೆರಿಕದ ಮಿಲಿಟರಿ ವಿಮಾನದಲ್ಲಿ ತಮಗಾದ ಕಹಿ ಅನುಭವವನ್ನು ಜಸ್ಪಾಲ್ ಸಿಂಗ್ ಎಂಬುವವರು ಬಿಚ್ಚಿಟ್ಟಿದ್ದಾರೆ. ಕಾಲುಗಳಿಗೆ ಸರಪಳಿ ಹಾಕಲಾಗಿತ್ತು, ಕೈಗಳಿಗೆ ಕೋಳ ತೊಡಿಸಲಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮಾನವು 205 ಅಕ್ರಮ ವಲಸಿಗರನ್ನು ಕರೆದೊಯ್ಯುತ್ತಿತ್ತು, ಮುಖ್ಯವಾಗಿ ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದವರಾಗಿದ್ದು, ಅವರ ಕೈ ಮತ್ತು ಕಾಲುಗಳಿಗೆ ಕೋಳ ಹಾಕಲಾಗಿತ್ತು. ಗಡೀಪಾರು ಮಾಡಲಾದವರಲ್ಲಿ 79 ಪುರುಷರು, 25 ಮಹಿಳೆಯರು ಮತ್ತು 13 ಮಕ್ಕಳು ಸೇರಿದ್ದಾರೆ.

ಮನೆಗೆ ವಾಪಸ್ ಕಳುಹಿಸುವ ಮೊದಲು 11 ದಿನಗಳ ಕಾಲ ತನ್ನನ್ನು ಕಸ್ಟಡಿಯಲ್ಲಿ ಇರಿಸಲಾಗಿತ್ತು ಎಂದರು. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬ ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ಕೈಗಳಿಗೆ ಕೋಳ ಹಾಕಲಾಯಿತು, ಮತ್ತು ನಮ್ಮ ಕಾಲುಗಳಿಗೆ ಸರಪಳಿ ಹಾಕಲಾಯಿತು. ಅಮೃತಸರ ವಿಮಾನ ನಿಲ್ದಾಣದಲ್ಲಿ ತೆಗೆಯಲಾಯಿತು ಎಂದು ಹೇಳಿದ್ದಾರೆ.

ಪಂಜಾಬ್‌ನ ಸಚಿವ ಕುಲದೀಪ್ ಸಿಂಗ್ ಧಲಿವಾಲ್, ಅಮೆರಿಕ ಸರ್ಕಾರ ಅವರನ್ನು ಗಡೀಪಾರು ಮಾಡುವ ನಿರ್ಧಾರದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದು, ದೇಶದ ಆರ್ಥಿಕತೆಗೆ ಕೊಡುಗೆ ನೀಡಿರುವ ಈ ವ್ಯಕ್ತಿಗಳಿಗೆ ಶಾಶ್ವತ ನಿವಾಸವನ್ನು ನೀಡಬೇಕಾಗಿತ್ತು ಎಂದು ಹೇಳಿದರು.

ಮತ್ತಷ್ಟು ಓದಿ: ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್

ಅನೇಕ ಭಾರತೀಯರು ಕೆಲಸದ ಪರವಾನಗಿಯ ಮೇಲೆ ಅಮೆರಿಕವನ್ನು ಪ್ರವೇಶಿಸಿದರು, ನಂತರ ಅದು ಅವಧಿ ಮೀರಿತು, ಇದರಿಂದಾಗಿ ಅವರು ಅಕ್ರಮ ವಲಸಿಗರಾದರು ಎಂದು ಅವರು ಹೇಳಿದರು. ಕಳೆದ ತಿಂಗಳು ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ, ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ಕಾನೂನು ಜಾರಿ ಸಂಸ್ಥೆಗಳು ತನ್ನ ಕಠಿಣ ಕ್ರಮವನ್ನು ಹೆಚ್ಚಿಸಿವೆ.

ಮೂಲಗಳ ಪ್ರಕಾರ ಗಡಿಪಾರು ಮಾಡಿದವರಲ್ಲಿ 33 ಮಂದಿ ಹರಿಯಾಣ ಮತ್ತು ಗುಜರಾತ್‌ನವರು, 30 ಮಂದಿ ಪಂಜಾಬ್‌ನಿಂದ ಮತ್ತು ವಿವಿಧ ರಾಜ್ಯಗಳಿಂದ ಬಂದವರು ಎನ್ನಲಾಗಿದೆ. ನಾವು ಪ್ರತಿಯೊಂದು ದೇಶದ ಜೊತೆಗೂ ಈ ಕಾನೂನು ನೀತಿ ಹೊಂದಿದ್ದೇವೆ. ಇದಕ್ಕೆ ಅಮೆರಿಕವೂ ಹೊರತಾಗಿಲ್ಲ.

ನಮ್ಮ ಪ್ರಜೆಗಳು ಯಾರಾದರೂ ಕಾನೂನು ಬದ್ಧವಾಗಿ ಅಮೆರಿಕದಲ್ಲಿ ಇಲ್ಲದಿದ್ದರೆ, ಅವರು ನಮ್ಮ ಪ್ರಜೆ ಎಂಬುದು ನಮಗೆ ದೃಢವಾದರೆ ಅವರು ಭಾರತಕ್ಕೆ ಕಾನೂನುಬದ್ಧವಾಗಿ ಮರಳಲು ಮುಕ್ತರಾಗಿದ್ದಾರೆ ಎಂಬ ಅಭಿಪ್ರಾಯವನ್ನು ಈ ಹಿಂದೆಯೇ ವ್ಯಕ್ತಪಡಿಸಿರುವುದಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಹೇಳಿದ್ದರು.

ಅಕ್ರಮ ವಲಸಿಗರ ಗಡಿಪಾರು ಆದೇಶದ ಜೊತೆಗೆ ಅಮೆರಿಕ-ಮೆಕ್ಸಿಕೋ ಗಡಿ ಭಾಗಕ್ಕೆ ಅಮೆರಿಕ ಸೇನಾಪಡೆಯನ್ನು ರವಾನಿಸಿದೆ. ಈ ನೂತನದ ಆದೇಶದಿಂದಾಗಿ ಅಮೆರಿಕದಲ್ಲಿ ಕಾನೂನು ಬಾಹಿರವಾಗಿ ವಾಸವಾಗಿರುವ ಸಾವಿರಾರು ಭಾರತೀಯ ಪ್ರಜೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ವರದಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ