AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿತಸ್ಥರನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ಬಿಹಾರದ ಮಾಜಿ ಸಂಸದ ಆನಂದ್ ಮೋಹನ್ ಸಿಂಗ್

ನಿತೀಶ್ ಕುಮಾರ್ ಸರ್ಕಾರ ಜೈಲು ನಿಯಮಗಳನ್ನು ತಿದ್ದುಪಡಿ ಮಾಡಿದ ನಂತರ ಮಾಜಿ ಸಂಸದ ಜೈಲಿನಿಂದ ಬಿಡುಗಡೆಯಾಗಿದ್ದರು.. ಈ ಹಿಂದೆ, ಕರ್ತವ್ಯದಲ್ಲಿದ್ದ ಸಾರ್ವಜನಿಕ ನೌಕರನ ಹತ್ಯೆಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದವಪು ಶಿಕ್ಷೆಯ ವಿನಾಯಿತಿಗೆ ಅರ್ಹರಾಗಿರಲಿಲ್ಲ. ಇದನ್ನು ಬಿಹಾರ ಸರ್ಕಾರ ಬದಲಿಸಿ, ಸಿಂಗ್ ಸೇರಿದಂತೆ 27 ಅಪರಾಧಿಗಳ ಬಿಡುಗಡೆಗೆ ದಾರಿ ಮಾಡಿಕೊಟ್ಟಿತು.

ತಪ್ಪಿತಸ್ಥರನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ಬಿಹಾರದ ಮಾಜಿ ಸಂಸದ ಆನಂದ್ ಮೋಹನ್ ಸಿಂಗ್
ಆನಂದ್ ಮೋಹನ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: May 12, 2023 | 4:46 PM

Share

ಪಾಟ್ನಾ: 1994ರಲ್ಲಿ ಐಎಎಸ್ ಅಧಿಕಾರಿಯೊಬ್ಬರ ಹತ್ಯೆಗೆ (G Krishnaiah Murder Case) ಕುಮ್ಮಕ್ಕು ನೀಡಿದ ಆರೋಪದಲ್ಲಿ 14 ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿದ್ದ ಬಿಹಾರದ (Bihar) ಮಾಜಿ ಸಂಸದ ಆನಂದ್ ಮೋಹನ್ ಸಿಂಗ್  (Anand Mohan Singh) ಈ ಪ್ರಕರಣದಲ್ಲಿ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಮೊದಲ ಬಾರಿಗೆ ಮಾತನಾಡಿದ ರಾಜಕಾರಣಿ, ಬುಧವಾರ ಬಿಹಾರದ ಅರಾರಿಯಾದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ನಾನು ತಪ್ಪಿತಸ್ಥನೆಂದು ಸಾಬೀತಾದರೆ ಗಲ್ಲು ಶಿಕ್ಷೆಗೆ ಸಿದ್ಧ ಎಂದು ಹೇಳಿದರು. ಈ ದೇಶ ಯಾರ ಸ್ವತ್ತಲ್ಲ, ನಾನು ಕಾನೂನು ಮತ್ತು ಸಂವಿಧಾನವನ್ನು ನಂಬುತ್ತೇನೆ. ಯಾವುದೇ ದೂರುಗಳಿಲ್ಲದೆ 15 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯನ್ನು ಅನುಭವಿಸಿದ್ದೇನೆ. ನಾನು ತಪ್ಪಿತಸ್ಥನೆಂದು ಸರ್ಕಾರ ನಂಬಿದರೆ ನಾನು ಗಲ್ಲಿಗೇರುವುದಕ್ಕೆಲು ಸಿದ್ಧ” ಎಂದು ಮಾಜಿ ಸಂಸದರು ಹೇಳಿದರು.

ಆನಂದ್ ಮೋಹನ್ ಸಿಂಗ್ ಕಳೆದ ತಿಂಗಳು ಜೈಲಿನಿಂದ ಹೊರನಡೆದಿದ್ದು, ಬಿಹಾರ ಸರ್ಕಾರದ ಜೈಲು ನಿಯಮ ಬದಲಾವಣೆಗೆ ಸಂಬಂಧಿಸಿದಂತೆ ಭಾರೀ ಗದ್ದಲದ ನಡುವೆಯೇ ಅವರ ಬಿಡುಗಡೆಗೆ ಹಾದಿ ಸುಗಮವಾಗಿತ್ತು.

ನಿತೀಶ್ ಕುಮಾರ್ ಸರ್ಕಾರ ಜೈಲು ನಿಯಮಗಳನ್ನು ತಿದ್ದುಪಡಿ ಮಾಡಿದ ನಂತರ ಮಾಜಿ ಸಂಸದ ಜೈಲಿನಿಂದ ಬಿಡುಗಡೆಯಾಗಿದ್ದರು.. ಈ ಹಿಂದೆ, ಕರ್ತವ್ಯದಲ್ಲಿದ್ದ ಸಾರ್ವಜನಿಕ ನೌಕರನ ಹತ್ಯೆಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದವಪು ಶಿಕ್ಷೆಯ ವಿನಾಯಿತಿಗೆ ಅರ್ಹರಾಗಿರಲಿಲ್ಲ. ಇದನ್ನು ಬಿಹಾರ ಸರ್ಕಾರ ಬದಲಿಸಿ, ಸಿಂಗ್ ಸೇರಿದಂತೆ 27 ಅಪರಾಧಿಗಳ ಬಿಡುಗಡೆಗೆ ದಾರಿ ಮಾಡಿಕೊಟ್ಟಿತು.

ಹಲವಾರು ಪ್ರಕರಣಗಳನ್ನು ಎದುರಿಸಿದ ಸಿಂಗ್, 1994 ರಲ್ಲಿ ದಲಿತ ಐಎಎಸ್ ಅಧಿಕಾರಿಯಾಗಿದ್ದ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿ ಕೃಷ್ಣಯ್ಯ ಅವರನ್ನು ಹತ್ಯೆಗೈದ ಗುಂಪನ್ನು ಪ್ರಚೋದಿಸಿದ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿತ್ತು.

1994 ರಲ್ಲಿ, ಆನಂದ್ ಮೋಹನ್ ಅವರ ಬಿಪಿಪಿ ಪಕ್ಷದ ಮುಜಾಫರ್‌ಪುರದ ದರೋಡೆಕೋರ-ರಾಜಕಾರಣಿ ಛೋಟಾನ್ ಶುಕ್ಲಾ ಅವರ ಮೃತದೇಹ ಹೊತ್ತು ಗುಂಪೊಂದು ಪ್ರತಿಭಟನೆ ನಡೆಸುತ್ತಿತ್ತು. ಡಿಸೆಂಬರ್ 4 ರಂದು ಮುಜಾಫರ್‌ಪುರದ ಭಗವಾನ್‌ಪುರ್ ಚೌಕ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರ ವಾಹನದ ಮೇಲೆ ಗುಂಡು ಹಾರಿಸಿ ಶುಕ್ಲಾ ಸಾವಿಗೀಡಾಗಿದ್ದರು. ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಹ ಭಾಗಿಯಾಗಿದ್ದಾನೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.

ಛೋಟಾನ್ ಹತ್ಯೆಯಲ್ಲಿ ಪೊಲೀಸರೊಬ್ಬರು ಭಾಗಿಯಾಗಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಆತನ ಬೆಂಬಲಿಗರು ನಗರದಲ್ಲಿ ಆಕ್ರೋಶ ವ್ಯಕ್ತಪಡಿಸಿ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಮರುದಿನ, ಮುಜಫರ್‌ಪುರದಿಂದ ವೈಶಾಲಿಯ ಲಾಲ್‌ಗಂಜ್‌ನಲ್ಲಿರುವ ಅವನ ತಂದೆಯ ಗ್ರಾಮವಾದ ಖಂಜಾಹಚಕ್‌ಗೆ ಛೋಟಾನ್‌ನ ಮೃತದೇಹ ಹೊತ್ತು ಬೆಂಬಲಿಗರು ಹೋಗಿದ್ದರು.

ಇದನ್ನೂ ಓದಿ:  ಗ್ಯಾಂಗ್​ಸ್ಟರ್ ತಿಲ್ಲು ತಾಜ್​ಪುರಿಯಾ ಆಪ್ತನ ಸಹೋದರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಆನಂದ್ ಮೋಹನ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ನೆರೆದಿದ್ದ ಜನರನ್ನುದ್ದೇಶಿಸಿ ಆವೇಶಭರಿತ ಭಾಷಣ ಮಾಡಿದರು. ಆ ಸಮಯದಲ್ಲಿ ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ಜಿ ಕೃಷ್ಣಯ್ಯ ಅವರು ಹಾಜಿಪುರದಿಂದ ಗೋಪಾಲಗಂಜ್‌ಗೆ ಹಿಂತಿರುಗುತ್ತಿದ್ದರು. 1985ರ ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿರುವ ಜಿ ಕೃಷ್ಣಯ್ಯ ತೆಲಂಗಾಣದ ಮಹೆಬೂಬ್‌ನಗರದವರು.

ಕೆಂಪು ದೀಪವಿರುವ ಸರ್ಕಾರಿ ವಾಹನದ ನೋಡಿ ರೊಚ್ಚಿಗೆದ್ದ ಪ್ರತಿಭಟನಾಕಾರರು ಖಬ್ರಾ ಗ್ರಾಮದ ಬಳಿ ಕೃಷ್ಣಯ್ಯ ಅವರನ್ನು ಘೇರಾವ್ ಮಾಡಿ ಕಾರಿಗೆ ಕಲ್ಲು ತೂರಾಟ ಆರಂಭಿಸಿದರು. ಈ ನಡುವೆ ಛೋಟಾನ್ ಸಹೋದರ ಭುತ್ಕುನ್ ಶುಕ್ಲಾ ಕೃಷ್ಣಯ್ಯ ಅವರ ಮೇಲೆ ಗುಂಡು ಹಾರಿಸಿದ್ದು, ಜನರ ಗುಂಪು ಕೃಷ್ಣಯ್ಯ ಅವರನ್ನು ಥಳಿಸಿ ಹತ್ಯೆಗೈದಿದೆ.

ಕೃಷ್ಣಯ್ಯ ಅವರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ. ಐಎಎಸ್ ಅಧಿಕಾರಿಯನ್ನು ಹತ್ಯೆ ಮಾಡಲು ಆನಂದ್ ಮೋಹನ್ ಜನಸಮೂಹವನ್ನು ಪ್ರಚೋದಿಸಿದರು ಎಂದು ಆರೋಪಿಸಲಾಗಿದೆ. 2007 ರಲ್ಲಿ ಆನಂದ್ ಮೋಹನ್ಗೆ ಮರಣದಂಡನೆ ವಿಧಿಸಲಾಯಿತು. ಆದರೆ ನಂತರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಇದಾದ ನಂತರ ಅವರು 15 ವರ್ಷಗಳ ಕಾಲ ಜೈಲಿನಲ್ಲಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ