AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Chalisa: ಹನುಮಾನ್ ಚಾಲೀಸಾ ಪಠಿಸುವುದಾಗಿ ಹಿಂದೂ ಮಹಾಸಭಾ ಕರೆ; ಮಥುರಾದಲ್ಲಿ ಹೈ ಅಲರ್ಟ್​

ಕೃಷ್ಣನ ನಿಜವಾದ ಜನ್ಮಸ್ಥಳ ಎಂದು ಕರೆಯಲಾಗುವ ಮಥುರಾದಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸುವಂತೆ ಅಖಿಲ ಭಾರತ ಹಿಂದೂ ಮಹಾಸಭಾ (ಎಬಿಎಚ್‌ಎಂ) ನೀಡಿದೆ. ಹೀಗಾಗಿ, ಮಥುರಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Hanuman Chalisa: ಹನುಮಾನ್ ಚಾಲೀಸಾ ಪಠಿಸುವುದಾಗಿ ಹಿಂದೂ ಮಹಾಸಭಾ ಕರೆ; ಮಥುರಾದಲ್ಲಿ ಹೈ ಅಲರ್ಟ್​
ಮಥುರಾ
TV9 Web
| Edited By: |

Updated on: Dec 06, 2022 | 9:20 AM

Share

ನೊಯ್ಡಾ: ಇಂದು (ಡಿಸೆಂಬರ್ 6) ಬಾಬ್ರಿ ಮಸೀದಿ (Babri Masjid) ಧ್ವಂಸವಾಗಿ 30 ವರ್ಷ ಪೂರೈಸುತ್ತದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಅಯೋಧ್ಯೆ ಮಾತ್ರವಲ್ಲದೆ ಮಥುರಾದಲ್ಲೂ (Mathura) ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದರ ನಡುವೆ ಭಗವಾನ್ ಕೃಷ್ಣನ ನಿಜವಾದ ಜನ್ಮಸ್ಥಳ ಎಂದು ಕರೆಯಲಾಗುವ ಮಥುರಾದಲ್ಲಿ ಹನುಮಾನ್ ಚಾಲೀಸಾವನ್ನು (Hanuman Chalisa) ಪಠಿಸುವಂತೆ ಅಖಿಲ ಭಾರತ ಹಿಂದೂ ಮಹಾಸಭಾ (ABHM) ನೀಡಿದೆ. ಹೀಗಾಗಿ, ಮಥುರಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮಥುರಾದಲ್ಲಿ ಬಿಗಿ ಭದ್ರತೆಯ ನಡುವೆ ಡ್ರೋನ್‌ಗಳ ಮೂಲಕ ಕಣ್ಗಾವಲು ನಡೆಸಲಾಗುತ್ತಿದೆ. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ, ಈ ಪ್ರದೇಶದಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ಆಯೋಜಿಸಲು ಆಡಳಿತ ಯಾರಿಗೂ ಅನುಮತಿ ನೀಡಿಲ್ಲ. ಹೊರಗಿನಿಂದ ಬರುವ ವಾಹನಗಳು ಹಾಗೂ ಜನರನ್ನೂ ತಪಾಸಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮಥುರಾದಲ್ಲಿ ಸೂಟ್​​ಕೇಸ್​​ನಲ್ಲಿ ಯುವತಿಯ ಶವ ಪತ್ತೆ ಪ್ರಕರಣಕ್ಕೆ ಹೊಸ ತಿರುವು; ಅಪ್ಪನೇ ಕೊಲೆಗಾರ!

ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಅವರು ಇಡೀ ಮಥುರಾದಲ್ಲಿ ಭದ್ರತೆಯ ಬಗ್ಗೆ ಪ್ರತಿ ಕ್ಷಣದ ಮೇಲೆ ನಿಗಾ ಇಡುವಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಿದ್ದಾರೆ. 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಇಂದು 30ನೇ ವರ್ಷದ ‘ಸನಾತನ ಸಮರ್ಪಣ ದಿವಸ್’ ಆಚರಿಸಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ.

ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪ್ರಸ್ತಾಪಿಸಿದ ಸ್ಥಳದಲ್ಲಿ ‘ಹನುಮಾನ್ ಚಾಲೀಸಾ’ ಪಠಣ ಸೇರಿದಂತೆ ಯಾವುದೇ ಕಾರ್ಯಕ್ರಮವನ್ನು ನಡೆಸಲು ಯಾವುದೇ ಅನುಮತಿ ಕೇಳಿಲ್ಲ. ಅನುಮತಿಯಿಲ್ಲದೆ ಕಾರ್ಯಕ್ರಮ ನಡೆಸಿ, ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಥುರಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶೈಲೇಶ್ ಪಾಂಡೆ ಹೇಳಿದ್ದಾರೆ. ಶ್ರೀಕೃಷ್ಣ ಜನ್ಮಭೂಮಿ ಸಂಕೀರ್ಣ ಮತ್ತು ಶಾಹಿ ಈದ್ಗಾ ಮಸೀದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಾಕಷ್ಟು ರಕ್ಷಣೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್