AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 13-15ರವರೆಗೆ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ದೇಶದ ಜನರಿಗೆ ಮೋದಿ ಕರೆ

ಈ ವರ್ಷ ನಾವು ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಿಸುತ್ತಿದ್ದೇವೆ. ಹರ್ ಘರ್ ತಿರಂಗಾ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13ರಿಂದ 15ರವರೆಗೆ ನಿಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ...

ಆಗಸ್ಟ್  13-15ರವರೆಗೆ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ದೇಶದ ಜನರಿಗೆ ಮೋದಿ ಕರೆ
ನರೇಂದ್ರ ಮೋದಿ
TV9 Web
| Edited By: |

Updated on:Jul 22, 2022 | 12:59 PM

Share

ದೆಹಲಿ: ಆಗಸ್ಟ್ 13-15ರವರೆಗೆ ಪ್ರತಿ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಅಥವಾ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನಕ್ಕೆ ಕೈಜೋಡಿಸಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi)ಶುಕ್ರವಾರ ಕರೆ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಮೋದಿ, 1947 ಜುಲೈ 22ಕ್ಕೆ ರಾಷ್ಟ್ರಧ್ವಜವನ್ನು ಅಳವಡಿಸಿಕೊಳ್ಳಲಾಯಿತು ಎಂದಿದ್ದಾರೆ. ವಸಾಹತುಶಾಹಿ ಆಡಳಿತ ವಿರುದ್ಧ ನಾವು ಹೋರಾಡುತ್ತಿದಾಗ ಸ್ವತಂತ್ರ ಭಾರತಕ್ಕೊಂದು ಧ್ವಜ ಬೇಕು ಎಂದು ಕನಸು ಕಂಡು ಅದಕ್ಕಾಗಿ ಪ್ರಯತ್ನಿಸಿದ, ಆ ಧೈರ್ಯವನ್ನು ನಾವು ಇಂದು ನೆನಸಿಕೊಳ್ಳುತ್ತಿದ್ದೇವೆ. ನಾವು ಅವರು ಕಂಡ ಕನಸಿನ ಭಾರತವನ್ನು ಸಾಕಾರಗೊಳಿಸಲು ಬದ್ಧರಾಗಿದ್ದೇವೆ ಎಂದು ಮೋದಿ ಹೇಳಿದ್ದಾರೆ. ಈ ವರ್ಷ ನಾವು ಆಜಾದಿ ಕಾ ಅಮೃತ್ ಮಹೋತ್ಸವ್ (Azadi Ka Amrit Mahotsav ) ಆಚರಿಸುತ್ತಿದ್ದೇವೆ. ಹರ್ ಘರ್ ತಿರಂಗಾ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13ರಿಂದ 15ರವರೆಗೆ ನಿಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ಅಥವಾ ಪ್ರದರ್ಶಿಸಿ. ಇದು ನಮ್ಮ ರಾಷ್ಟ್ರಧ್ವಜದೊಂದಿಗೆ ಇರುವ ಸಂಬಂಧವನ್ನು ಗಟ್ಟಿಗೊಳಿಸಿತ್ತದೆ ಎಂದು ಟ್ವೀಟ್​​ನಲ್ಲಿ ಮೋದಿ ಹೇಳಿದ್ದಾರೆ.

ರಾಷ್ಟ್ರಧ್ವಜವನ್ನು ಅಳವಡಿಸುವುದರ ಬಗ್ಗೆ ಅಧಿಕೃತ ಸಂವಾದ ನಡೆದಿರುವ ಮಾಹಿತಿಯನ್ನೂ ಮೋದಿ ಉಲ್ಲೇಖಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಮೊದಲ ಬಾರಿ ತ್ರಿವರ್ಣ ಧ್ವಜ ಹಾರಿಸಿರುವ ಫೋಟೊವನ್ನು ಮೋದಿ ಟ್ವೀಟ್ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ದಿನದ 75ನೇ ವರ್ಷದ ಆಚರಣೆಯಾದ ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದೆ.

ಹರ್ ಘರ್ ತಿರಂಗಾ ಅಭಿಯಾನದ ಪ್ರಚಾರಕ್ಕಾಗಿ ಸರ್ಕಾರ https://harghartiranga.com/ ಎಂಬ ವೆಬ್ ಸೈಟ್ ನ್ನು ಕೂಡಾ ಆರಂಭಿಸಿದೆ. ಈ ವೆಬ್ ಸೈಟ್ ಮೂಲಕ ಭಾರತೀಯರು ತಮ್ಮ ಮನೆಯಲ್ಲಿ ಧ್ವಜ ಹಾರಿಸಬಹುದು. ಇಲ್ಲಿ ವರ್ಚುವಲ್ ಆಗಿ ಪಿನ್ ಎ ಫ್ಲಾಗ್ ಮಾಡಬಹುದು ಮತ್ತು ಸೆಲ್ಫಿ ವಿತ್ ಫ್ಲಾಗ್ ಫೋಸ್ಟ್ ಮಾಡಬಹುದು.

Published On - 12:44 pm, Fri, 22 July 22

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ