AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ
ಉಚ್ಚಾಟಿತ ಸಚಿವ ಹರಕ್​ ಸಿಂಗ್​ ರಾವತ್​
TV9 Web
| Edited By: |

Updated on:Jan 17, 2022 | 9:21 AM

Share

ಉತ್ತರಾಖಂಡ್​ ಬಿಜೆಪಿ ಸರ್ಕಾರದ ಅರಣ್ಯ ಸಚಿವ ಹರಕ್​ ಸಿಂಗ್​ ರಾವತ್​​ರನ್ನು ಅವರ ಹುದ್ದೆಯಿಂದ ವಜಾಗೊಳಿಸಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲ, ಅವರನ್ನು ಬಿಜೆಪಿ ಪಕ್ಷದಿಂದಲೇ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ ಎಂದೂ ಅಲ್ಲಿನ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. ಹರಕ್​ ಸಿಂಗ್​ ಅವರು ಬಿಜೆಪಿಯಲ್ಲಿದ್ದುಕೊಂಡೇ ಕಾಂಗ್ರೆಸ್​ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇಂಥ ಹಲವು ಪಕ್ಷ ವಿರೋಧಿ ನಡವಳಿಕೆ ತೋರಿದ್ದಕ್ಕಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾಗಿ ಹೇಳಲಾಗಿದೆ.  

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಹರಕ್​ ಸಿಂಗ್ ವಜಾಗೊಂಡಿದ್ದಾರೆ.  ಹರಕ್​ ಸಿಂಗ್ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್​ ನಾಯಕ ಹರೀಶ್​ ರಾವತ್​ ಮತ್ತು ಇತರ ನಾಯಕರ ಸಮ್ಮುಖದಲ್ಲಿ  ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಹರಕ್​ ಸಿಂಗ್​ ಜತೆ ಬಿಜೆಪಿಯ ಇನ್ನಿಬ್ಬರು ಶಾಸಕರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದೂ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹರಕ್​ ಸಿಂಗ್​ ಕಾಂಗ್ರೆಸ್​ನಲ್ಲಿ ಇದ್ದವರೇ ಆಗಿತ್ತು. 2016ರಲ್ಲಿ ಪಕ್ಷದ ವಿರುದ್ಧ ಅಸಮಾಧಾನಗೊಂಡು ಒಟ್ಟು 10 ಶಾಸಕರು ಬಿಜೆಪಿ ಸೇರಿದ್ದರು. ಅವರಲ್ಲಿ ಈ ಹರಕ್​ ಸಿಂಗ್ ಕೂಡ ಒಬ್ಬರು.

ಉತ್ತರಾಖಂಡ್​ ವಿಧಾನಸಭೆ ಚುನಾವಣೆ ಫೆಬ್ರವರಿ 14ರಂದು ನಡೆಯಲಿದೆ. 70 ವಿಧಾನಸಭಾ ಕ್ಷೇತ್ರಗಳಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.  2017ರಲ್ಲಿ ಬಿಜೆಪಿ ಒಟ್ಟು 57 ಕ್ಷೇತ್ರಗಳನ್ನು ಗೆದ್ದು, ಅಧಿಕಾರ ಗದ್ದುಗೆ ಏರಿತ್ತು. ಈ ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್​ ಮತ್ತು ಅರವಿಂದ್ ಕೇಜ್ರಿವಾಲ್​ನ ಆಮ್​ ಆದ್ಮಿ ಪಕ್ಷದ ನಡುವೆ ನೇರ ಸ್ಪರ್ಧೆಯಿದೆ.

ಇದನ್ನೂ ಓದಿ: ನೈಟ್​ ಕರ್ಫ್ಯೂ ಇದ್ರೂ ನಡೀತಿತ್ತು ಸೀರಿಯಲ್​ ಶೂಟಿಂಗ್​; ಸ್ಥಳಕ್ಕೆ ಬಂದ ಪೊಲೀಸರು ಮಾಡಿದ್ದೇನು?

Published On - 9:21 am, Mon, 17 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ