AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ
ಉಚ್ಚಾಟಿತ ಸಚಿವ ಹರಕ್​ ಸಿಂಗ್​ ರಾವತ್​
TV9 Web
| Edited By: |

Updated on:Jan 17, 2022 | 9:21 AM

Share

ಉತ್ತರಾಖಂಡ್​ ಬಿಜೆಪಿ ಸರ್ಕಾರದ ಅರಣ್ಯ ಸಚಿವ ಹರಕ್​ ಸಿಂಗ್​ ರಾವತ್​​ರನ್ನು ಅವರ ಹುದ್ದೆಯಿಂದ ವಜಾಗೊಳಿಸಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲ, ಅವರನ್ನು ಬಿಜೆಪಿ ಪಕ್ಷದಿಂದಲೇ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ ಎಂದೂ ಅಲ್ಲಿನ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. ಹರಕ್​ ಸಿಂಗ್​ ಅವರು ಬಿಜೆಪಿಯಲ್ಲಿದ್ದುಕೊಂಡೇ ಕಾಂಗ್ರೆಸ್​ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇಂಥ ಹಲವು ಪಕ್ಷ ವಿರೋಧಿ ನಡವಳಿಕೆ ತೋರಿದ್ದಕ್ಕಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾಗಿ ಹೇಳಲಾಗಿದೆ.  

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಹರಕ್​ ಸಿಂಗ್ ವಜಾಗೊಂಡಿದ್ದಾರೆ.  ಹರಕ್​ ಸಿಂಗ್ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್​ ನಾಯಕ ಹರೀಶ್​ ರಾವತ್​ ಮತ್ತು ಇತರ ನಾಯಕರ ಸಮ್ಮುಖದಲ್ಲಿ  ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಹರಕ್​ ಸಿಂಗ್​ ಜತೆ ಬಿಜೆಪಿಯ ಇನ್ನಿಬ್ಬರು ಶಾಸಕರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದೂ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹರಕ್​ ಸಿಂಗ್​ ಕಾಂಗ್ರೆಸ್​ನಲ್ಲಿ ಇದ್ದವರೇ ಆಗಿತ್ತು. 2016ರಲ್ಲಿ ಪಕ್ಷದ ವಿರುದ್ಧ ಅಸಮಾಧಾನಗೊಂಡು ಒಟ್ಟು 10 ಶಾಸಕರು ಬಿಜೆಪಿ ಸೇರಿದ್ದರು. ಅವರಲ್ಲಿ ಈ ಹರಕ್​ ಸಿಂಗ್ ಕೂಡ ಒಬ್ಬರು.

ಉತ್ತರಾಖಂಡ್​ ವಿಧಾನಸಭೆ ಚುನಾವಣೆ ಫೆಬ್ರವರಿ 14ರಂದು ನಡೆಯಲಿದೆ. 70 ವಿಧಾನಸಭಾ ಕ್ಷೇತ್ರಗಳಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.  2017ರಲ್ಲಿ ಬಿಜೆಪಿ ಒಟ್ಟು 57 ಕ್ಷೇತ್ರಗಳನ್ನು ಗೆದ್ದು, ಅಧಿಕಾರ ಗದ್ದುಗೆ ಏರಿತ್ತು. ಈ ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್​ ಮತ್ತು ಅರವಿಂದ್ ಕೇಜ್ರಿವಾಲ್​ನ ಆಮ್​ ಆದ್ಮಿ ಪಕ್ಷದ ನಡುವೆ ನೇರ ಸ್ಪರ್ಧೆಯಿದೆ.

ಇದನ್ನೂ ಓದಿ: ನೈಟ್​ ಕರ್ಫ್ಯೂ ಇದ್ರೂ ನಡೀತಿತ್ತು ಸೀರಿಯಲ್​ ಶೂಟಿಂಗ್​; ಸ್ಥಳಕ್ಕೆ ಬಂದ ಪೊಲೀಸರು ಮಾಡಿದ್ದೇನು?

Published On - 9:21 am, Mon, 17 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ