AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ
ಉಚ್ಚಾಟಿತ ಸಚಿವ ಹರಕ್​ ಸಿಂಗ್​ ರಾವತ್​
TV9 Web
| Edited By: |

Updated on:Jan 17, 2022 | 9:21 AM

Share

ಉತ್ತರಾಖಂಡ್​ ಬಿಜೆಪಿ ಸರ್ಕಾರದ ಅರಣ್ಯ ಸಚಿವ ಹರಕ್​ ಸಿಂಗ್​ ರಾವತ್​​ರನ್ನು ಅವರ ಹುದ್ದೆಯಿಂದ ವಜಾಗೊಳಿಸಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲ, ಅವರನ್ನು ಬಿಜೆಪಿ ಪಕ್ಷದಿಂದಲೇ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ ಎಂದೂ ಅಲ್ಲಿನ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. ಹರಕ್​ ಸಿಂಗ್​ ಅವರು ಬಿಜೆಪಿಯಲ್ಲಿದ್ದುಕೊಂಡೇ ಕಾಂಗ್ರೆಸ್​ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇಂಥ ಹಲವು ಪಕ್ಷ ವಿರೋಧಿ ನಡವಳಿಕೆ ತೋರಿದ್ದಕ್ಕಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾಗಿ ಹೇಳಲಾಗಿದೆ.  

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಹರಕ್​ ಸಿಂಗ್ ವಜಾಗೊಂಡಿದ್ದಾರೆ.  ಹರಕ್​ ಸಿಂಗ್ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್​ ನಾಯಕ ಹರೀಶ್​ ರಾವತ್​ ಮತ್ತು ಇತರ ನಾಯಕರ ಸಮ್ಮುಖದಲ್ಲಿ  ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಹರಕ್​ ಸಿಂಗ್​ ಜತೆ ಬಿಜೆಪಿಯ ಇನ್ನಿಬ್ಬರು ಶಾಸಕರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದೂ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹರಕ್​ ಸಿಂಗ್​ ಕಾಂಗ್ರೆಸ್​ನಲ್ಲಿ ಇದ್ದವರೇ ಆಗಿತ್ತು. 2016ರಲ್ಲಿ ಪಕ್ಷದ ವಿರುದ್ಧ ಅಸಮಾಧಾನಗೊಂಡು ಒಟ್ಟು 10 ಶಾಸಕರು ಬಿಜೆಪಿ ಸೇರಿದ್ದರು. ಅವರಲ್ಲಿ ಈ ಹರಕ್​ ಸಿಂಗ್ ಕೂಡ ಒಬ್ಬರು.

ಉತ್ತರಾಖಂಡ್​ ವಿಧಾನಸಭೆ ಚುನಾವಣೆ ಫೆಬ್ರವರಿ 14ರಂದು ನಡೆಯಲಿದೆ. 70 ವಿಧಾನಸಭಾ ಕ್ಷೇತ್ರಗಳಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.  2017ರಲ್ಲಿ ಬಿಜೆಪಿ ಒಟ್ಟು 57 ಕ್ಷೇತ್ರಗಳನ್ನು ಗೆದ್ದು, ಅಧಿಕಾರ ಗದ್ದುಗೆ ಏರಿತ್ತು. ಈ ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್​ ಮತ್ತು ಅರವಿಂದ್ ಕೇಜ್ರಿವಾಲ್​ನ ಆಮ್​ ಆದ್ಮಿ ಪಕ್ಷದ ನಡುವೆ ನೇರ ಸ್ಪರ್ಧೆಯಿದೆ.

ಇದನ್ನೂ ಓದಿ: ನೈಟ್​ ಕರ್ಫ್ಯೂ ಇದ್ರೂ ನಡೀತಿತ್ತು ಸೀರಿಯಲ್​ ಶೂಟಿಂಗ್​; ಸ್ಥಳಕ್ಕೆ ಬಂದ ಪೊಲೀಸರು ಮಾಡಿದ್ದೇನು?

Published On - 9:21 am, Mon, 17 January 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ