AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಸಾಧು ಶ್ರೀನಾಥ್​
|

Updated on: Jul 06, 2023 | 11:06 AM

Share

ಕುಷಾಯಿಗೂಡ: ಪತ್ನಿ ಹಾಗೂ ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಪತಿ (Husband) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಕುಷಾಯಿಗೂಡ ಪೊಲೀಸ್​ ಸಬ್​​​ಇನ್ಸ್​​​ಪೆಕ್ಟರ್​​​​ (ಪಿಎಸ್‌ಐ) ಷೇಕ್​ಷಫಿ ಹೇಳಿದ್ದಾರೆ. ಮೊಲುಗು ವೆಂಕಟ್ ರೆಡ್ಡಿ (38) ತನ್ನ ತಾಯಿ, ಪತ್ನಿ ಕಲ್ಯಾಣಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಹೈದರಾಬಾದ್ ನ ಕುಷಾಯಿಗೂಡ ಪೋಚಮ್ಮಗುಡಿಯಲ್ಲಿ ವಾಸಿಸುತ್ತಿದ್ದರು. ಖಾಸಗಿ ಉದ್ಯೋಗಿಯಾಗಿರುವ ವೆಂಕಟ್ ರೆಡ್ಡಿ ಜತೆ ತಾಯಿ ಇರುವುದು ಪತ್ನಿ ಹಾಗೂ ಅತ್ತೆಯವರಿಗೆ ಇಷ್ಟವಿರಲಿಲ್ಲ. ಇದರಿಂದಾಗಿ ಮತ್ತೊಂದು ಮನೆ ಮಾಡುವಂತೆ ಪೀಡಿಸುತ್ತಿದ್ದರು. ಇದರಿಂದ ದಂಪತಿ ನಡುವೆ ಕಲಹ ಉಂಟಾಗಿ ಎರಡು ತಿಂಗಳ ಹಿಂದೆ ವೆಂಕಟ್ ಪತ್ನಿ (Wife) ತಮ್ಮ ಮಕ್ಕಳನ್ನು ಕರೆದುಕೊಂಡು ವರಂಗಲ್‌ನಲ್ಲಿರುವ ಹುಟ್ಟೂರಿಗೆ ಹೋಗಿದ್ದರು.

ಹೀಗಿರುವಾಗ ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಕೂಡಲೇ ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಮೇಲಾಗಿ ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಮನೆ ಮಾನ ಮರ್ಯಾದೆ ಹೋಗುತ್ತದೆ ಎಂದು ಪತಿ ವೆಂಕಟ್ ಎಷ್ಟು ಹೇಳಿದರೂ ತನ್ನ ಪತ್ನಿ ಕಲ್ಯಾಣಿ ಕೇಳಲಿಲ್ಲ. ನೀವು ನಾಟಕ ಮಾಡ್ತಿದ್ದೀರಿ ಎಂದು ಗಂಡನ ಮನೆಯವರ ಬಗ್ಗೆ ಕಟಕಿಯಾಡಿದ್ದಾಳೆ. ಇದರಿಂದ ತೀವ್ರ ಮನನೊಂದ ವೆಂಕಟ್ ರೆಡ್ಡಿ ಅದೇ ದಿನ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ತಾಯಿ ಕೂಡಲೇ ಮಗನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೆಂಕಟ್​​, ಬುಧವಾರ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಕುಷಾಯಿಗೂಡ ಎಸ್‌ಐ ಷೇಕ್​ಷಫಿ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ