AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಸಾಧು ಶ್ರೀನಾಥ್​
|

Updated on: Jul 06, 2023 | 11:06 AM

Share

ಕುಷಾಯಿಗೂಡ: ಪತ್ನಿ ಹಾಗೂ ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಪತಿ (Husband) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಕುಷಾಯಿಗೂಡ ಪೊಲೀಸ್​ ಸಬ್​​​ಇನ್ಸ್​​​ಪೆಕ್ಟರ್​​​​ (ಪಿಎಸ್‌ಐ) ಷೇಕ್​ಷಫಿ ಹೇಳಿದ್ದಾರೆ. ಮೊಲುಗು ವೆಂಕಟ್ ರೆಡ್ಡಿ (38) ತನ್ನ ತಾಯಿ, ಪತ್ನಿ ಕಲ್ಯಾಣಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಹೈದರಾಬಾದ್ ನ ಕುಷಾಯಿಗೂಡ ಪೋಚಮ್ಮಗುಡಿಯಲ್ಲಿ ವಾಸಿಸುತ್ತಿದ್ದರು. ಖಾಸಗಿ ಉದ್ಯೋಗಿಯಾಗಿರುವ ವೆಂಕಟ್ ರೆಡ್ಡಿ ಜತೆ ತಾಯಿ ಇರುವುದು ಪತ್ನಿ ಹಾಗೂ ಅತ್ತೆಯವರಿಗೆ ಇಷ್ಟವಿರಲಿಲ್ಲ. ಇದರಿಂದಾಗಿ ಮತ್ತೊಂದು ಮನೆ ಮಾಡುವಂತೆ ಪೀಡಿಸುತ್ತಿದ್ದರು. ಇದರಿಂದ ದಂಪತಿ ನಡುವೆ ಕಲಹ ಉಂಟಾಗಿ ಎರಡು ತಿಂಗಳ ಹಿಂದೆ ವೆಂಕಟ್ ಪತ್ನಿ (Wife) ತಮ್ಮ ಮಕ್ಕಳನ್ನು ಕರೆದುಕೊಂಡು ವರಂಗಲ್‌ನಲ್ಲಿರುವ ಹುಟ್ಟೂರಿಗೆ ಹೋಗಿದ್ದರು.

ಹೀಗಿರುವಾಗ ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಕೂಡಲೇ ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಮೇಲಾಗಿ ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಮನೆ ಮಾನ ಮರ್ಯಾದೆ ಹೋಗುತ್ತದೆ ಎಂದು ಪತಿ ವೆಂಕಟ್ ಎಷ್ಟು ಹೇಳಿದರೂ ತನ್ನ ಪತ್ನಿ ಕಲ್ಯಾಣಿ ಕೇಳಲಿಲ್ಲ. ನೀವು ನಾಟಕ ಮಾಡ್ತಿದ್ದೀರಿ ಎಂದು ಗಂಡನ ಮನೆಯವರ ಬಗ್ಗೆ ಕಟಕಿಯಾಡಿದ್ದಾಳೆ. ಇದರಿಂದ ತೀವ್ರ ಮನನೊಂದ ವೆಂಕಟ್ ರೆಡ್ಡಿ ಅದೇ ದಿನ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ತಾಯಿ ಕೂಡಲೇ ಮಗನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೆಂಕಟ್​​, ಬುಧವಾರ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಕುಷಾಯಿಗೂಡ ಎಸ್‌ಐ ಷೇಕ್​ಷಫಿ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ