AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 06, 2023 | 11:06 AM

Share

ಕುಷಾಯಿಗೂಡ: ಪತ್ನಿ ಹಾಗೂ ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಪತಿ (Husband) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಕುಷಾಯಿಗೂಡ ಪೊಲೀಸ್​ ಸಬ್​​​ಇನ್ಸ್​​​ಪೆಕ್ಟರ್​​​​ (ಪಿಎಸ್‌ಐ) ಷೇಕ್​ಷಫಿ ಹೇಳಿದ್ದಾರೆ. ಮೊಲುಗು ವೆಂಕಟ್ ರೆಡ್ಡಿ (38) ತನ್ನ ತಾಯಿ, ಪತ್ನಿ ಕಲ್ಯಾಣಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಹೈದರಾಬಾದ್ ನ ಕುಷಾಯಿಗೂಡ ಪೋಚಮ್ಮಗುಡಿಯಲ್ಲಿ ವಾಸಿಸುತ್ತಿದ್ದರು. ಖಾಸಗಿ ಉದ್ಯೋಗಿಯಾಗಿರುವ ವೆಂಕಟ್ ರೆಡ್ಡಿ ಜತೆ ತಾಯಿ ಇರುವುದು ಪತ್ನಿ ಹಾಗೂ ಅತ್ತೆಯವರಿಗೆ ಇಷ್ಟವಿರಲಿಲ್ಲ. ಇದರಿಂದಾಗಿ ಮತ್ತೊಂದು ಮನೆ ಮಾಡುವಂತೆ ಪೀಡಿಸುತ್ತಿದ್ದರು. ಇದರಿಂದ ದಂಪತಿ ನಡುವೆ ಕಲಹ ಉಂಟಾಗಿ ಎರಡು ತಿಂಗಳ ಹಿಂದೆ ವೆಂಕಟ್ ಪತ್ನಿ (Wife) ತಮ್ಮ ಮಕ್ಕಳನ್ನು ಕರೆದುಕೊಂಡು ವರಂಗಲ್‌ನಲ್ಲಿರುವ ಹುಟ್ಟೂರಿಗೆ ಹೋಗಿದ್ದರು.

ಹೀಗಿರುವಾಗ ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಕೂಡಲೇ ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಮೇಲಾಗಿ ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಮನೆ ಮಾನ ಮರ್ಯಾದೆ ಹೋಗುತ್ತದೆ ಎಂದು ಪತಿ ವೆಂಕಟ್ ಎಷ್ಟು ಹೇಳಿದರೂ ತನ್ನ ಪತ್ನಿ ಕಲ್ಯಾಣಿ ಕೇಳಲಿಲ್ಲ. ನೀವು ನಾಟಕ ಮಾಡ್ತಿದ್ದೀರಿ ಎಂದು ಗಂಡನ ಮನೆಯವರ ಬಗ್ಗೆ ಕಟಕಿಯಾಡಿದ್ದಾಳೆ. ಇದರಿಂದ ತೀವ್ರ ಮನನೊಂದ ವೆಂಕಟ್ ರೆಡ್ಡಿ ಅದೇ ದಿನ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ತಾಯಿ ಕೂಡಲೇ ಮಗನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೆಂಕಟ್​​, ಬುಧವಾರ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಕುಷಾಯಿಗೂಡ ಎಸ್‌ಐ ಷೇಕ್​ಷಫಿ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ