AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
Follow us
ಸಾಧು ಶ್ರೀನಾಥ್​
|

Updated on: Jul 06, 2023 | 11:06 AM

ಕುಷಾಯಿಗೂಡ: ಪತ್ನಿ ಹಾಗೂ ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಪತಿ (Husband) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಕುಷಾಯಿಗೂಡ ಪೊಲೀಸ್​ ಸಬ್​​​ಇನ್ಸ್​​​ಪೆಕ್ಟರ್​​​​ (ಪಿಎಸ್‌ಐ) ಷೇಕ್​ಷಫಿ ಹೇಳಿದ್ದಾರೆ. ಮೊಲುಗು ವೆಂಕಟ್ ರೆಡ್ಡಿ (38) ತನ್ನ ತಾಯಿ, ಪತ್ನಿ ಕಲ್ಯಾಣಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಹೈದರಾಬಾದ್ ನ ಕುಷಾಯಿಗೂಡ ಪೋಚಮ್ಮಗುಡಿಯಲ್ಲಿ ವಾಸಿಸುತ್ತಿದ್ದರು. ಖಾಸಗಿ ಉದ್ಯೋಗಿಯಾಗಿರುವ ವೆಂಕಟ್ ರೆಡ್ಡಿ ಜತೆ ತಾಯಿ ಇರುವುದು ಪತ್ನಿ ಹಾಗೂ ಅತ್ತೆಯವರಿಗೆ ಇಷ್ಟವಿರಲಿಲ್ಲ. ಇದರಿಂದಾಗಿ ಮತ್ತೊಂದು ಮನೆ ಮಾಡುವಂತೆ ಪೀಡಿಸುತ್ತಿದ್ದರು. ಇದರಿಂದ ದಂಪತಿ ನಡುವೆ ಕಲಹ ಉಂಟಾಗಿ ಎರಡು ತಿಂಗಳ ಹಿಂದೆ ವೆಂಕಟ್ ಪತ್ನಿ (Wife) ತಮ್ಮ ಮಕ್ಕಳನ್ನು ಕರೆದುಕೊಂಡು ವರಂಗಲ್‌ನಲ್ಲಿರುವ ಹುಟ್ಟೂರಿಗೆ ಹೋಗಿದ್ದರು.

ಹೀಗಿರುವಾಗ ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಕೂಡಲೇ ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಮೇಲಾಗಿ ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಮನೆ ಮಾನ ಮರ್ಯಾದೆ ಹೋಗುತ್ತದೆ ಎಂದು ಪತಿ ವೆಂಕಟ್ ಎಷ್ಟು ಹೇಳಿದರೂ ತನ್ನ ಪತ್ನಿ ಕಲ್ಯಾಣಿ ಕೇಳಲಿಲ್ಲ. ನೀವು ನಾಟಕ ಮಾಡ್ತಿದ್ದೀರಿ ಎಂದು ಗಂಡನ ಮನೆಯವರ ಬಗ್ಗೆ ಕಟಕಿಯಾಡಿದ್ದಾಳೆ. ಇದರಿಂದ ತೀವ್ರ ಮನನೊಂದ ವೆಂಕಟ್ ರೆಡ್ಡಿ ಅದೇ ದಿನ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ತಾಯಿ ಕೂಡಲೇ ಮಗನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೆಂಕಟ್​​, ಬುಧವಾರ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಕುಷಾಯಿಗೂಡ ಎಸ್‌ಐ ಷೇಕ್​ಷಫಿ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್