AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಸಾಧು ಶ್ರೀನಾಥ್​
|

Updated on: Jul 06, 2023 | 11:06 AM

Share

ಕುಷಾಯಿಗೂಡ: ಪತ್ನಿ ಹಾಗೂ ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಪತಿ (Husband) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಕುಷಾಯಿಗೂಡ ಪೊಲೀಸ್​ ಸಬ್​​​ಇನ್ಸ್​​​ಪೆಕ್ಟರ್​​​​ (ಪಿಎಸ್‌ಐ) ಷೇಕ್​ಷಫಿ ಹೇಳಿದ್ದಾರೆ. ಮೊಲುಗು ವೆಂಕಟ್ ರೆಡ್ಡಿ (38) ತನ್ನ ತಾಯಿ, ಪತ್ನಿ ಕಲ್ಯಾಣಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಹೈದರಾಬಾದ್ ನ ಕುಷಾಯಿಗೂಡ ಪೋಚಮ್ಮಗುಡಿಯಲ್ಲಿ ವಾಸಿಸುತ್ತಿದ್ದರು. ಖಾಸಗಿ ಉದ್ಯೋಗಿಯಾಗಿರುವ ವೆಂಕಟ್ ರೆಡ್ಡಿ ಜತೆ ತಾಯಿ ಇರುವುದು ಪತ್ನಿ ಹಾಗೂ ಅತ್ತೆಯವರಿಗೆ ಇಷ್ಟವಿರಲಿಲ್ಲ. ಇದರಿಂದಾಗಿ ಮತ್ತೊಂದು ಮನೆ ಮಾಡುವಂತೆ ಪೀಡಿಸುತ್ತಿದ್ದರು. ಇದರಿಂದ ದಂಪತಿ ನಡುವೆ ಕಲಹ ಉಂಟಾಗಿ ಎರಡು ತಿಂಗಳ ಹಿಂದೆ ವೆಂಕಟ್ ಪತ್ನಿ (Wife) ತಮ್ಮ ಮಕ್ಕಳನ್ನು ಕರೆದುಕೊಂಡು ವರಂಗಲ್‌ನಲ್ಲಿರುವ ಹುಟ್ಟೂರಿಗೆ ಹೋಗಿದ್ದರು.

ಹೀಗಿರುವಾಗ ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಕೂಡಲೇ ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಮೇಲಾಗಿ ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಮನೆ ಮಾನ ಮರ್ಯಾದೆ ಹೋಗುತ್ತದೆ ಎಂದು ಪತಿ ವೆಂಕಟ್ ಎಷ್ಟು ಹೇಳಿದರೂ ತನ್ನ ಪತ್ನಿ ಕಲ್ಯಾಣಿ ಕೇಳಲಿಲ್ಲ. ನೀವು ನಾಟಕ ಮಾಡ್ತಿದ್ದೀರಿ ಎಂದು ಗಂಡನ ಮನೆಯವರ ಬಗ್ಗೆ ಕಟಕಿಯಾಡಿದ್ದಾಳೆ. ಇದರಿಂದ ತೀವ್ರ ಮನನೊಂದ ವೆಂಕಟ್ ರೆಡ್ಡಿ ಅದೇ ದಿನ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ತಾಯಿ ಕೂಡಲೇ ಮಗನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೆಂಕಟ್​​, ಬುಧವಾರ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಕುಷಾಯಿಗೂಡ ಎಸ್‌ಐ ಷೇಕ್​ಷಫಿ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ