ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಸಾಧು ಶ್ರೀನಾಥ್​

Updated on: Jul 06, 2023 | 11:06 AM

ಕುಷಾಯಿಗೂಡ: ಪತ್ನಿ ಹಾಗೂ ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಪತಿ (Husband) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಕುಷಾಯಿಗೂಡ ಪೊಲೀಸ್​ ಸಬ್​​​ಇನ್ಸ್​​​ಪೆಕ್ಟರ್​​​​ (ಪಿಎಸ್‌ಐ) ಷೇಕ್​ಷಫಿ ಹೇಳಿದ್ದಾರೆ. ಮೊಲುಗು ವೆಂಕಟ್ ರೆಡ್ಡಿ (38) ತನ್ನ ತಾಯಿ, ಪತ್ನಿ ಕಲ್ಯಾಣಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಹೈದರಾಬಾದ್ ನ ಕುಷಾಯಿಗೂಡ ಪೋಚಮ್ಮಗುಡಿಯಲ್ಲಿ ವಾಸಿಸುತ್ತಿದ್ದರು. ಖಾಸಗಿ ಉದ್ಯೋಗಿಯಾಗಿರುವ ವೆಂಕಟ್ ರೆಡ್ಡಿ ಜತೆ ತಾಯಿ ಇರುವುದು ಪತ್ನಿ ಹಾಗೂ ಅತ್ತೆಯವರಿಗೆ ಇಷ್ಟವಿರಲಿಲ್ಲ. ಇದರಿಂದಾಗಿ ಮತ್ತೊಂದು ಮನೆ ಮಾಡುವಂತೆ ಪೀಡಿಸುತ್ತಿದ್ದರು. ಇದರಿಂದ ದಂಪತಿ ನಡುವೆ ಕಲಹ ಉಂಟಾಗಿ ಎರಡು ತಿಂಗಳ ಹಿಂದೆ ವೆಂಕಟ್ ಪತ್ನಿ (Wife) ತಮ್ಮ ಮಕ್ಕಳನ್ನು ಕರೆದುಕೊಂಡು ವರಂಗಲ್‌ನಲ್ಲಿರುವ ಹುಟ್ಟೂರಿಗೆ ಹೋಗಿದ್ದರು.

ಹೀಗಿರುವಾಗ ಜುಲೈ 2ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಕೂಡಲೇ ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ. ಮೇಲಾಗಿ ಇಡೀ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆಸುವಂತೆಯೂ ಆಗ್ರಹಿಸಿದ್ದಾಳೆ.

ಮನೆ ಮಾನ ಮರ್ಯಾದೆ ಹೋಗುತ್ತದೆ ಎಂದು ಪತಿ ವೆಂಕಟ್ ಎಷ್ಟು ಹೇಳಿದರೂ ತನ್ನ ಪತ್ನಿ ಕಲ್ಯಾಣಿ ಕೇಳಲಿಲ್ಲ. ನೀವು ನಾಟಕ ಮಾಡ್ತಿದ್ದೀರಿ ಎಂದು ಗಂಡನ ಮನೆಯವರ ಬಗ್ಗೆ ಕಟಕಿಯಾಡಿದ್ದಾಳೆ. ಇದರಿಂದ ತೀವ್ರ ಮನನೊಂದ ವೆಂಕಟ್ ರೆಡ್ಡಿ ಅದೇ ದಿನ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ತಾಯಿ ಕೂಡಲೇ ಮಗನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೆಂಕಟ್​​, ಬುಧವಾರ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಕುಷಾಯಿಗೂಡ ಎಸ್‌ಐ ಷೇಕ್​ಷಫಿ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us