AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛತಾ ಕೈಂಕರ್ಯ: ದೆಹಲಿಯ ಪ್ರಿನ್ಸಸ್ ಪಾರ್ಕ್​ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಯಿಂದ ಶ್ರಮದಾನ

Swachhata Hi Seva: ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯ ಮೇರೆಗೆ ಕೇಂದ್ರದ ಎಲ್ಲಾ ಸಚಿವರೂ ವಿವಿಧೆಡೆ ಒಂದು ಗಂಟೆ ಕಾಲ ಸ್ವಚ್ಛತಾ ಕಾರ್ಯಗಳಲ್ಲಿ ಶ್ರಮದಾನ ಮಾಡಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ದೆಹಲಿಯ ಕೋಪರ್ನಿಕಸ್ ಮಾರ್ಗ್ ರಸ್ತೆಯಲ್ಲಿರುವ ಪ್ರಿನ್ಸಸ್ ಪಾರ್ಕ್ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕೆಲಸದಲ್ಲಿ ತೊಡಗಿದರು. ಅವರ ಸಚಿವಾಲಯದ ಹಿರಿಯ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಸಚಿವರ ಜೊತೆಗಿದ್ದು ಕೆಲಸ ಮಾಡಿದರು.

ಸ್ವಚ್ಛತಾ ಕೈಂಕರ್ಯ: ದೆಹಲಿಯ ಪ್ರಿನ್ಸಸ್ ಪಾರ್ಕ್​ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಯಿಂದ ಶ್ರಮದಾನ
ಹರ್ದೀಪ್ ಸಿಂಗ್ ಪುರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 01, 2023 | 6:30 PM

Share

ನವದೆಹಲಿ, ಅಕ್ಟೋಬರ್ 1: ಗಾಂಧಿ ಜಯಂತಿಗೆ ಒಂದು ದಿನ ಇರುವಂತೆ ದೇಶಾದ್ಯಂತ ಸ್ವಚ್ಛಾತಾ ಅಭಿಯಾನಕ್ಕೆ (cleanliness drive) ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಲ್ಲೇ ಸಾಕಷ್ಟು ಮಂದಿ ಕೇಂದ್ರ ಸಚಿವರು ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿ ಅನಿಲ ಖಾತೆ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡ ‘ಸ್ವಚ್ಛತಾ ಹೀ ಸೇವಾ’ (swachchata hi sewa) ಅಭಿಯಾನದಲ್ಲಿ ಪಾಲ್ಗೊಂಡು ಶ್ರಮದಾನ ಮಾಡಿದರು. ರಾಷ್ಟ್ರರಾಜಧಾನಿಯಲ್ಲಿನ ಕೋಪರ್​ನಿಕಸ್ ಮಾರ್ಗ್ ರಸ್ತೆಯಲ್ಲಿರುವ ಪ್ರಿನ್ಸಸ್ ಪಾರ್ಕ್ ಬಳಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಅವರ ಸಚಿವಾಲದಯ ಹಿರಿಯ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು, ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮೊದಲಾದವರು ಪಾರ್ಕ್ ಪ್ರದೇಶವನ್ನು ಸ್ವಚ್ಛಗೊಳಿಸಲು ಕೇಂದ್ರ ಸಚಿವರ ಜೊತೆಗಿದ್ದರು.

ನರೇಂದ್ರ ಮೋದಿ ಮಾಡಿದ್ದ ಕರೆ…

ಪ್ರಧಾನಿ ನರೇಂದ್ರ ಮೋದಿ ತಮ್ಮ 105ನೇ ಮನ್ ಕೀ ಬಾತ್ (mann ki baat) ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಈ ಬಾರಿಯ ಗಾಂಧಿ ಜಯಂತಿಯಂದು ಮಹಾತ್ಮ ಗಾಂಧಿಗೆ ಗೌರವಾರ್ಥ ಸ್ವಚ್ಛಾಂಜಲಿ ಸಲ್ಲಿಸಬೇಕೆಂದು ಕರೆಕೊಟ್ಟಿದ್ದರು. ಅದರಂತೆ ಅಕ್ಟೋಬರ್ 1ರಂದು ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಅಭಿಯಾನದಲ್ಲಿ ಎಲ್ಲಾ ಸಾರ್ವಜನಿಕರು ಒಂದು ಗಂಟೆ ಕಾಲ ಸ್ವಚ್ಛಾತಾ ಕಾರ್ಯದಲ್ಲಿ ಭಾಗಿಯಾಗಬೇಕೆಂದು ಪ್ರಧಾನಿಗಳು ಕೋರಿದ್ದರು. ಅದರಂತೆ ದೇಶಾದ್ಯಂತ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಸ್ವಚ್ಛತಾ ಕಾರ್ಯಗಳಲ್ಲಿ ಗಣ್ಯರು, ಸಚಿವರು ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ಸ್ವಚ್ಛ, ಸುಂದರ, ಉತ್ತಮ ಭಾರತಕ್ಕಾಗಿ ಒಟ್ಟಿಗೆ ಒಂದು ಪ್ರಯತ್ನ: ದೆಹಲಿಯಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್

ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ಅನುರಾಗ್ ಠಾಕೂರ್ ಸೇರಿದಂತೆ ವಿವಿಧ ಕೇಂದ್ರ ಸಚಿವರು ಸ್ವಚ್ಛತಾ ಹೀ ಸೇವಾ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದರು.

ಕರ್ನಾಟಕದಲ್ಲಿ ಸಚಿವ ಎಚ್ ಕೆ ಪಾಟೀಲ್ ಶ್ರಮದಾನ

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಅವರು ಗದಗ್ ನಗರದ ಭೀಷ್ಮ ಕೆರೆ ಆವರಣದಲ್ಲಿ ನಡೆದ ಸ್ವಚ್ಛಾತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಕಡೆ ಇಂಥ ಸ್ವಚ್ಛತಾ ಕಾರ್ಯಗಳನ್ನು ನಡೆಸಲಾಯಿತು.

ಇದನ್ನೂ ಓದಿ: Swachhata Hi Seva: ಬನ್ನಿ ದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿಸೋಣ: ಹಮೀಪುರದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಶ್ರಮದಾನ

ಈ ವೇಳೆ ಮಾತನಾಡಿದ ಸಚಿವರು, ಸ್ವಚ್ಛತಾ ಕಾರ್ಯವು ಒಂದು ದಿನಕ್ಕೆ ಸೀಮಿತವಾಗದೇ ವರ್ಷದ ಎಲ್ಲಾ ದಿನವೂ ನಡೆಯುತ್ತಿರಬೇಕು ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Sun, 1 October 23

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್