AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಆರ್ಮಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ಹರ್ಜೋತ್​ ಸಿಂಗ್​; ಸಹಾಯ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ

ತಮ್ಮ ಮಗ ಬದುಕುಳಿದು ಬಂದಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಹರ್ಜೋತ್​ ಸಿಂಗ್ ತಂದೆ ಕೇಸರ್​ ಸಿಂಗ್​, ನನ್ನ ಪುತ್ರನಿಗೆ ಇನ್ನೊಂದು ಅವಕಾಶ ಸಿಕ್ಕಿದೆ. ಖಂಡಿತವಾಗಿಯೂ ಉಕ್ರೇನ್​ಗೆ ಮತ್ತೆ ಓದುವುದಕ್ಕೋಸ್ಕರ ಹೋಗುತ್ತಾನೆ ಎಂದಿದ್ದಾರೆ.

ದೆಹಲಿ ಆರ್ಮಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ಹರ್ಜೋತ್​ ಸಿಂಗ್​; ಸಹಾಯ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ
ಹರ್ಜೋತ್​ ಸಿಂಗ್​
TV9 Web
| Updated By: Lakshmi Hegde|

Updated on: Mar 29, 2022 | 7:18 PM

Share

ಉಕ್ರೇನ್​ನ ಕೀವ್​ನಲ್ಲಿ ರಷ್ಯಾ ಸೈನಿಕರ ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಭಾರತದ ವಿದ್ಯಾರ್ಥಿ ಹರ್ಜೋತ್​ ಸಿಂಗ್​ ಇದೀಗ ಚೇತರಿಸಿಕೊಂಡಿದ್ದು, ದೆಹಲಿಯ ಸೇನಾ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ. ನನ್ನ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಆದರೆ ಮುಂದೆಯೂ ಸ್ವಲ್ಪ ಚಿಕಿತ್ಸೆಯ ಅಗತ್ಯವಿದ್ದು, ಕೇಂದ್ರ ಸರ್ಕಾರ ನನಗೆ ಸಹಾಯ ಮಾಡಬೇಕು ಎಂದು ಹರ್ಜೋತ್​ ಸಿಂಗ್​ ಹೇಳಿದ್ದಾರೆ. ನನ್ನ ಕೈ ಮತ್ತು ಕಾಲು ಪಾದಗಳು ಸರಿಯಾಗಲು ಇನ್ನೂ ಒಂದು ವರ್ಷ ಚಿಕಿತ್ಸೆ ಬೇಕು ಎಂದು ವೈದ್ಯರು ಹೇಳಿದ್ದಾರೆ. ಆದರೆ ನನ್ನ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ತಂದೆಗೂ ನಿವೃತ್ತಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಸಹಾಯ ಮಾಡಬೇಕು ಎಂದು ಅವರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ತಮ್ಮ ಮಗ ಬದುಕುಳಿದು ಬಂದಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಹರ್ಜೋತ್​ ಸಿಂಗ್ ತಂದೆ ಕೇಸರ್​ ಸಿಂಗ್​, ನನ್ನ ಪುತ್ರನಿಗೆ ಇನ್ನೊಂದು ಅವಕಾಶ ಸಿಕ್ಕಿದೆ. ಖಂಡಿತವಾಗಿಯೂ ಉಕ್ರೇನ್​ಗೆ ಮತ್ತೆ ಓದುವುದಕ್ಕೋಸ್ಕರ ಹೋಗುತ್ತಾನೆ. ಮೊದಲು ನನ್ನ ಪುತ್ರ ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕು. ಬಳಿಕ ಮುಂದೇನು ಎಂದು ಯೋಚಿಸಲಿ. ಯಾವುದೇ ದೇಶವೂ ಒಳ್ಳೆಯದೂ ಅಲ್ಲ, ಕೆಟ್ಟದ್ದೂ ಅಲ್ಲ. ಈಗ ನಡೆಯುತ್ತಿರುವ ಯುದ್ಧ ಅಹಂಕಾರಗಳ ನಡುವೆ ನಡೆಯುತ್ತಿದೆ ಹೊರತು ಎರಡು ದೇಶಗಳ ಮಧ್ಯೆ ಅಲ್ಲ ಎಂದು ಹೇಳಿದ್ದಾರೆ. ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಆಂಬುಲೆನ್ಸ್​ ಮೂಲಕ ಪೋಲ್ಯಾಂಡ್​ಗೆ ಕರೆತಂದು ಅಲ್ಲಿಂದ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿತ್ತು.

ಇದನ್ನೂ ಓದಿ: ಇವತ್ತು‌ ಚುನಾವಣೆಗಳು ಪಾರದರ್ಶಕವಾಗಿಲ್ಲ; ಸರ್ಕಾರಿ ಅಧಿಕಾರಿಗಳು ಚುನಾವಣೆಯಲ್ಲಿ ನಿಲ್ಲುವುದಕ್ಕೆ ಸಮಯ ಫಿಕ್ಸ್ ಮಾಡಬೇಕು -ಶಾಸಕ ಲಿಂಗೇಶ್

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?