AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಆರ್ಮಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ಹರ್ಜೋತ್​ ಸಿಂಗ್​; ಸಹಾಯ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ

ತಮ್ಮ ಮಗ ಬದುಕುಳಿದು ಬಂದಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಹರ್ಜೋತ್​ ಸಿಂಗ್ ತಂದೆ ಕೇಸರ್​ ಸಿಂಗ್​, ನನ್ನ ಪುತ್ರನಿಗೆ ಇನ್ನೊಂದು ಅವಕಾಶ ಸಿಕ್ಕಿದೆ. ಖಂಡಿತವಾಗಿಯೂ ಉಕ್ರೇನ್​ಗೆ ಮತ್ತೆ ಓದುವುದಕ್ಕೋಸ್ಕರ ಹೋಗುತ್ತಾನೆ ಎಂದಿದ್ದಾರೆ.

ದೆಹಲಿ ಆರ್ಮಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ಹರ್ಜೋತ್​ ಸಿಂಗ್​; ಸಹಾಯ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ
ಹರ್ಜೋತ್​ ಸಿಂಗ್​
TV9 Web
| Edited By: |

Updated on: Mar 29, 2022 | 7:18 PM

Share

ಉಕ್ರೇನ್​ನ ಕೀವ್​ನಲ್ಲಿ ರಷ್ಯಾ ಸೈನಿಕರ ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಭಾರತದ ವಿದ್ಯಾರ್ಥಿ ಹರ್ಜೋತ್​ ಸಿಂಗ್​ ಇದೀಗ ಚೇತರಿಸಿಕೊಂಡಿದ್ದು, ದೆಹಲಿಯ ಸೇನಾ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ. ನನ್ನ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಆದರೆ ಮುಂದೆಯೂ ಸ್ವಲ್ಪ ಚಿಕಿತ್ಸೆಯ ಅಗತ್ಯವಿದ್ದು, ಕೇಂದ್ರ ಸರ್ಕಾರ ನನಗೆ ಸಹಾಯ ಮಾಡಬೇಕು ಎಂದು ಹರ್ಜೋತ್​ ಸಿಂಗ್​ ಹೇಳಿದ್ದಾರೆ. ನನ್ನ ಕೈ ಮತ್ತು ಕಾಲು ಪಾದಗಳು ಸರಿಯಾಗಲು ಇನ್ನೂ ಒಂದು ವರ್ಷ ಚಿಕಿತ್ಸೆ ಬೇಕು ಎಂದು ವೈದ್ಯರು ಹೇಳಿದ್ದಾರೆ. ಆದರೆ ನನ್ನ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ತಂದೆಗೂ ನಿವೃತ್ತಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಸಹಾಯ ಮಾಡಬೇಕು ಎಂದು ಅವರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ತಮ್ಮ ಮಗ ಬದುಕುಳಿದು ಬಂದಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಹರ್ಜೋತ್​ ಸಿಂಗ್ ತಂದೆ ಕೇಸರ್​ ಸಿಂಗ್​, ನನ್ನ ಪುತ್ರನಿಗೆ ಇನ್ನೊಂದು ಅವಕಾಶ ಸಿಕ್ಕಿದೆ. ಖಂಡಿತವಾಗಿಯೂ ಉಕ್ರೇನ್​ಗೆ ಮತ್ತೆ ಓದುವುದಕ್ಕೋಸ್ಕರ ಹೋಗುತ್ತಾನೆ. ಮೊದಲು ನನ್ನ ಪುತ್ರ ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕು. ಬಳಿಕ ಮುಂದೇನು ಎಂದು ಯೋಚಿಸಲಿ. ಯಾವುದೇ ದೇಶವೂ ಒಳ್ಳೆಯದೂ ಅಲ್ಲ, ಕೆಟ್ಟದ್ದೂ ಅಲ್ಲ. ಈಗ ನಡೆಯುತ್ತಿರುವ ಯುದ್ಧ ಅಹಂಕಾರಗಳ ನಡುವೆ ನಡೆಯುತ್ತಿದೆ ಹೊರತು ಎರಡು ದೇಶಗಳ ಮಧ್ಯೆ ಅಲ್ಲ ಎಂದು ಹೇಳಿದ್ದಾರೆ. ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಆಂಬುಲೆನ್ಸ್​ ಮೂಲಕ ಪೋಲ್ಯಾಂಡ್​ಗೆ ಕರೆತಂದು ಅಲ್ಲಿಂದ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿತ್ತು.

ಇದನ್ನೂ ಓದಿ: ಇವತ್ತು‌ ಚುನಾವಣೆಗಳು ಪಾರದರ್ಶಕವಾಗಿಲ್ಲ; ಸರ್ಕಾರಿ ಅಧಿಕಾರಿಗಳು ಚುನಾವಣೆಯಲ್ಲಿ ನಿಲ್ಲುವುದಕ್ಕೆ ಸಮಯ ಫಿಕ್ಸ್ ಮಾಡಬೇಕು -ಶಾಸಕ ಲಿಂಗೇಶ್

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ