AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಕಾರು ಆಟೋಗೆ ಡಿಕ್ಕಿ ಹೊಡೆದು 25 ವರ್ಷದ ಯುವತಿ ಸಾವು

ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 25 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೊದಲು ಆಟೋಗೆ ಕಾರು ಡಿಕ್ಕಿ ಹೊಡೆದಾಗ ಆ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆದರೂ ನಿಲ್ಲಿಸದ ಪೊಲೀಸ್ ಆಕೆಯ ಮೇಲೆ ಕಾರು ಹತ್ತಿಸಿಕೊಂಡು ಹೋಗಿದ್ದಾರೆ. ಇದರಿಂದ ತೀವ್ರ ಗಾಯಗಳಾಗಿ ಆಕೆ ಮೃತಪಟ್ಟಿದ್ದಾರೆ.

ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಕಾರು ಆಟೋಗೆ ಡಿಕ್ಕಿ ಹೊಡೆದು 25 ವರ್ಷದ ಯುವತಿ ಸಾವು
Haryana Police
ಸುಷ್ಮಾ ಚಕ್ರೆ
|

Updated on: Feb 12, 2026 | 6:51 PM

Share

ಅಂಬಾಲ, ಫೆಬ್ರವರಿ 12: ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಹರಿಯಾಣದ ಪೊಲೀಸ್ ಅಧಿಕಾರಿಯೊಬ್ಬರು 25 ವರ್ಷದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸ್ ಅಧಿಕಾರಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ (Car Accident) ಹೊಡೆದ ಪರಿಣಾಮದಿಂದಾಗಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದಿದ್ದು, ನಂತರ ಕಾರು ಆಕೆಯ ಮೇಲೆ ಹರಿದಿದೆ. ಮೃತಳನ್ನು ನಿಕಿತಾ ಎಂದು ಗುರುತಿಸಲಾಗಿದೆ.

ಅಂಬಾಲದ ಕಾಳಿ ಪಲ್ಟನ್ ಸೇತುವೆ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, 9 ಗಂಟೆ ಸುಮಾರಿಗೆ ಆ ಮಹಿಳೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಆಕೆಯ ಮೇಲೆ ಕಾರು ಹಾದುಹೋಯಿತು. ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವನ್ನಪ್ಪಿದರು.

ಇದನ್ನೂ ಓದಿ: ಹೈವೇ ಪಕ್ಕದಲ್ಲಿ ಎಸೆದಿದ್ದ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆ

ಈ ಘಟನೆಯ ಸಮಯದಲ್ಲಿ ಪೊಲೀಸ್ ಅಧಿಕಾರಿ ಕುಡಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಪಘಾತದ ನಂತರ, ಅಲ್ಲಿ ಜಮಾಯಿಸಿದ್ದ ಸ್ಥಳೀಯರು ಅವರನ್ನು ಹಿಡಿದಿದ್ದಾರೆ. ನಂತರ, ಅವರನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಪೊಲೀಸ್ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.

“ನಾನು ಅಂಬಾಲಾ ಕಂಟೋನ್ಮೆಂಟ್‌ನಿಂದ ಇ-ರಿಕ್ಷಾದಲ್ಲಿ ನಾಲ್ವರು ಪ್ರಯಾಣಿಕರೊಂದಿಗೆ ಬರುತ್ತಿದ್ದೆ. ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ನಮ್ಮ ಇ-ರಿಕ್ಷಾಗೆ ಡಿಕ್ಕಿ ಹೊಡೆಯಿತು. ಆಗ ನಮ್ಮ ಆಟೋದಲ್ಲಿದ್ದ ಒಬ್ಬಳು ಹುಡುಗಿ ಅದರಿಂದ ಬಿದ್ದಳು. ನಂತರ, ಪೊಲೀಸ್ ಅಧಿಕಾರಿ ಆ ಹುಡುಗಿಯ ಮೇಲೆ ಕಾರು ಹತ್ತಿಸಿಕೊಂಡು ಹೋದರು. ಆಕೆಯನ್ನು ಆಸ್ಪತ್ರೆಗೆ ಕರೆತರುವಾಗ ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸ್ ಅಧಿಕಾರಿ ಕುಡಿದಿದ್ದರು,” ಎಂದು ಇ-ರಿಕ್ಷಾ ಚಾಲಕ ರವೀಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ