AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಬಿಕಾನೇರ್​ನಲ್ಲಿ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು

ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ, ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ರಾಜಸ್ಥಾನದ ಬಿಕಾನೇರ್​ನಲ್ಲಿ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು
ಕಾರುImage Credit source: Patrika.com
ನಯನಾ ರಾಜೀವ್
|

Updated on: Jul 19, 2024 | 8:45 AM

Share

ರಾಜಸ್ಥಾನದ ಬಿಕಾನೇರ್​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಬಿಕಾನೇರ್​ನ ಮಹಾಜನ್​ನ ಜೈತ್​ಪುರ ಟೋಲ್​ ಬಳಿ ಅಪಘಾತ ಸಂಭವಿಸಿದೆ. ಅವರು ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಕ್ಕಿಬಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಡಬೇಕಾಯಿತು.

ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಹನುಮಾನ್​ಗಢದಿಂದ ಬಿಕಾನೇರ್​ ಕಡೆಗೆ ಹೋಗುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ, ಆ ರಭಸಕ್ಕೆ ಕಾರು ಹಾರಿ ಹೋಗಿತ್ತು.

ಮತ್ತಷ್ಟು ಓದಿ: ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ

ಮಹಾಜನ್ ಪೊಲೀಸರು, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರು ವೇಗವಾಗಿತ್ತು ಅಷ್ಟೇ ಅಲ್ಲದೆ ರಾತ್ರಿಯಾಗಿತ್ತು, ಚಾಲಕನಿಗೆ ಟ್ರಕ್ ಮುಂದೆ ಹೋಗುತ್ತಿರುವುದು ಕಾಣಿಸಿರಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ. ಕುಡಲೇ ಅಂಬ್ಯುಲೆನ್ಸ್​ ಅಲ್ಲಿಗೆ ತಲುಪಿತ್ತು ಈ ಅಪಘಾತವು ಎಷ್ಟು ತೀವ್ರವಾಗಿತ್ತು ಎಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದವರನ್ನು ಕ್ರೇನ್ ಬಳಸಿ ಹೊರತೆಗೆದಾಗ ಒಬ್ಬ ಬಾಲಕಿ ಹೊರತುಪಡಿಸಿ ಎಲ್ಲರೂ ಸಾವನ್ನಪ್ಪಿದ್ದರು. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯೂ ಬರುವಷ್ಟರಲ್ಲಿ ಮೃತಪಟ್ಟಿದ್ದಾಳೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ದಬ್ವಾಲಿ ತಹಸಿಲ್ ನಿವಾಸಿಗಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ