AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಬಿಕಾನೇರ್​ನಲ್ಲಿ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು

ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ, ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ರಾಜಸ್ಥಾನದ ಬಿಕಾನೇರ್​ನಲ್ಲಿ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು
ಕಾರುImage Credit source: Patrika.com
ನಯನಾ ರಾಜೀವ್
|

Updated on: Jul 19, 2024 | 8:45 AM

Share

ರಾಜಸ್ಥಾನದ ಬಿಕಾನೇರ್​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಬಿಕಾನೇರ್​ನ ಮಹಾಜನ್​ನ ಜೈತ್​ಪುರ ಟೋಲ್​ ಬಳಿ ಅಪಘಾತ ಸಂಭವಿಸಿದೆ. ಅವರು ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಕ್ಕಿಬಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಡಬೇಕಾಯಿತು.

ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಹನುಮಾನ್​ಗಢದಿಂದ ಬಿಕಾನೇರ್​ ಕಡೆಗೆ ಹೋಗುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ, ಆ ರಭಸಕ್ಕೆ ಕಾರು ಹಾರಿ ಹೋಗಿತ್ತು.

ಮತ್ತಷ್ಟು ಓದಿ: ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ

ಮಹಾಜನ್ ಪೊಲೀಸರು, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರು ವೇಗವಾಗಿತ್ತು ಅಷ್ಟೇ ಅಲ್ಲದೆ ರಾತ್ರಿಯಾಗಿತ್ತು, ಚಾಲಕನಿಗೆ ಟ್ರಕ್ ಮುಂದೆ ಹೋಗುತ್ತಿರುವುದು ಕಾಣಿಸಿರಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ. ಕುಡಲೇ ಅಂಬ್ಯುಲೆನ್ಸ್​ ಅಲ್ಲಿಗೆ ತಲುಪಿತ್ತು ಈ ಅಪಘಾತವು ಎಷ್ಟು ತೀವ್ರವಾಗಿತ್ತು ಎಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದವರನ್ನು ಕ್ರೇನ್ ಬಳಸಿ ಹೊರತೆಗೆದಾಗ ಒಬ್ಬ ಬಾಲಕಿ ಹೊರತುಪಡಿಸಿ ಎಲ್ಲರೂ ಸಾವನ್ನಪ್ಪಿದ್ದರು. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯೂ ಬರುವಷ್ಟರಲ್ಲಿ ಮೃತಪಟ್ಟಿದ್ದಾಳೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ದಬ್ವಾಲಿ ತಹಸಿಲ್ ನಿವಾಸಿಗಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​