AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಟ್ಟ ಮಂಜು: ಹರ್ಯಾಣದಲ್ಲಿ ಕಾಲುವೆಗೆ ಉರುಳಿದ ಕ್ರೂಸರ್, ಹತ್ತು ಮಂದಿ ನಾಪತ್ತೆ

ದಟ್ಟ ಮಂಜಿನಿಂದಾಗಿ ಕ್ರೂಸರ್ ಕಾಲುವೆಗೆ ಉರುಳಿರುವ ಘಟನೆ ಹರ್ಯಾಣದ ಫತೇಹಾಬಾದ್​ನಲ್ಲಿ ನಡೆದಿದೆ. ಕ್ರೂಸರ್​ನಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು. 10 ಮಂದಿ ನಾಪತ್ತೆಯಾಗಿದ್ದಾರೆ. 10 ವರ್ಷದ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 55 ವರ್ಷ ವಯಸ್ಸಿನ ವ್ಯಕ್ತಿಯ ದೇಹ ಸಿಕ್ಕಿದೆ. ಪಂಜಾಬ್‌ನಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಪ್ರಯಾಣಿಕರು ಹಿಂತಿರುಗುತ್ತಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಸರ್ದಾರೆವಾಲಾ ಗ್ರಾಮದ ಬಳಿ ಸೇತುವೆ ದಾಟುತ್ತಿದ್ದಾಗ ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ವಾಹನ ಸೇತುವೆಯಿಂದ ಆಯತಪ್ಪಿ ಕಾಲುವೆಗೆ ಬಿದ್ದಿದೆ

ದಟ್ಟ ಮಂಜು: ಹರ್ಯಾಣದಲ್ಲಿ ಕಾಲುವೆಗೆ ಉರುಳಿದ ಕ್ರೂಸರ್, ಹತ್ತು ಮಂದಿ ನಾಪತ್ತೆ
ಕ್ರೂಸರ್Image Credit source: India Today
ನಯನಾ ರಾಜೀವ್
|

Updated on: Feb 01, 2025 | 3:31 PM

Share

ದಟ್ಟ ಮಂಜಿನಿಂದಾಗಿ ಕ್ರೂಸರ್ ಕಾಲುವೆಗೆ ಉರುಳಿರುವ ಘಟನೆ ಹರ್ಯಾಣದ ಫತೇಹಾಬಾದ್​ನಲ್ಲಿ ನಡೆದಿದೆ. ಕ್ರೂಸರ್​ನಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು. 10 ಮಂದಿ ನಾಪತ್ತೆಯಾಗಿದ್ದಾರೆ. 10 ವರ್ಷದ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 55 ವರ್ಷ ವಯಸ್ಸಿನ ವ್ಯಕ್ತಿಯ ದೇಹ ಸಿಕ್ಕಿದೆ.

ಪಂಜಾಬ್‌ನಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಪ್ರಯಾಣಿಕರು ಹಿಂತಿರುಗುತ್ತಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಸರ್ದಾರೆವಾಲಾ ಗ್ರಾಮದ ಬಳಿ ಸೇತುವೆ ದಾಟುತ್ತಿದ್ದಾಗ ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ವಾಹನ ಸೇತುವೆಯಿಂದ ಆಯತಪ್ಪಿ ಕಾಲುವೆಗೆ ಬಿದ್ದಿದೆ.

ವಾಹನದ ಚಾಲಕನನ್ನು ಜರ್ನೈಲ್ ಸಿಂಗ್ ಎಂದು ಗುರುತಿಸಲಾಗಿದ್ದು, ವಾಹನವು ನೀರಿನಲ್ಲಿ ಮುಳುಗುವ ಮುನ್ನವೇ ವಾಹನದಿಂದ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾಲುವೆಗೆ ಬಿದ್ದಾಗ ಇತರ 12 ಪ್ರಯಾಣಿಕರು ವಾಹನದೊಳಗೆ ಇದ್ದರು. ರಕ್ಷಣಾ ತಂಡಗಳು 10 ವರ್ಷದ ಅರ್ಮಾನ್‌ನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 55 ವರ್ಷದ ಬಲ್ಬೀರ್ ಸಿಂಗ್ ಅವರ ದೇಹವನ್ನು ಕಾಲುವೆಯಿಂದ ಹೊರತೆಗೆಯಲಾಯಿತು.

ಮತ್ತಷ್ಟು ಓದಿ: ಬೆಂಗಳೂರು ಏರ್ಪೋಟ್ ಬಳಿ ಭೀಕರ ಅಪಘಾತ: ಸಹೋದರರಿಬ್ಬರು ಸೇರಿ ಮೂವರ ಸಾವು

ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು. ಮುಳುಗುಗಾರರು ಮತ್ತು ರಕ್ಷಣಾ ಸಿಬ್ಬಂದಿ ರಾತ್ರಿಯಿಡೀ ಶೋಧ ಮುಂದುವರೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ