AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಆಘಾತ: ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್​ಗೆ ಸೇರ್ಪಡೆ

ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್​ಗೆ ಭಾರಿ ಆಘಾತವಾಗಿದೆ. ಲೋಕಸಭೆ ಚುನಾವಣೆಗೆ ಮುನ್ನ, ಹಿಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ರಾಜಕೀಯ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಆಘಾತ: ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್​ಗೆ ಸೇರ್ಪಡೆ
ಬ್ರಿಜೇಂದ್ರ ಸಿಂಗ್
ನಯನಾ ರಾಜೀವ್
|

Updated on: Mar 10, 2024 | 2:13 PM

Share

ಲೋಕಸಭೆ ಚುನಾವಣೆ(Lok Sabha Election)ಗೆ ಮುನ್ನ, ಹಿಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್(Brijendra Singh) ಅವರು ರಾಜಕೀಯ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ರಾಜೀನಾಮೆ ಘೋಷಿಸಿದ ನಂತರ, ಬಿಜೆಪಿ ನಾಯಕ ಬಿರೇಂದರ್ ಸಿಂಗ್ ಅವರ ಪುತ್ರ ಬ್ರಿಜೇಂದ್ರ ಸಿಂಗ್ ಅವರು ನವದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸವನ್ನು ತಲುಪಿ ವಿರೋಧ ಪಕ್ಷಕ್ಕೆ ಸೇರಿದರು.

ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನ ಮಂತ್ರಿ. ನರೇಂದ್ರ ಮೋದಿ ಮತ್ತು ಶಾ ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬ್ರಿಜೇಂದ್ರ ಸಿಂಗ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬ್ರಿಜೇಂದ್ರ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಕೂಡ ಖರ್ಗೆ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಅಧಿಕಾರಶಾಹಿಯಿಂದ ಬದಲಾಗಿರುವ ರಾಜಕಾರಣಿ ಹಿಸಾರ್‌ನಿಂದ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜೇಂದ್ರ ಸಿಂಗ್ ಅವರು ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್‌ನೊಂದಿಗೆ ಇದ್ದ ಭವ್ಯಾ ಬಿಷ್ಣೋಯ್ ಅವರನ್ನು ಸೋಲಿಸಿ ಹಿಸಾರ್ ಲೋಕಸಭಾ ಸ್ಥಾನವನ್ನು ಗೆದ್ದಿದ್ದರು. ಬ್ರಿಜೇಂದ್ರ ಸಿಂಗ್ ಪ್ರಮುಖ ಜಾಟ್ ನಾಯಕ ಸರ್ ಛೋಟು ರಾಮ್ ಅವರ ಮೊಮ್ಮಗ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?