AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಐಎಸ್‌ಐ ಜೊತೆ ಮಿಲಿಟರಿ ಮಾಹಿತಿ ಹಂಚಿಕೊಂಡ ಹರಿಯಾಣದ ಕಾಲೇಜು ವಿದ್ಯಾರ್ಥಿ ಬಂಧನ

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ನಡುವೆ ಭಾರತೀಯ ಮಿಲಿಟರಿಗೆ ಸಂಬಂಧಿಸಿದ ಕೆಲವು ರಹಸ್ಯ ವಿಷಯಗಳನ್ನು ಭಾರತದ ವಿದ್ಯಾರ್ಥಿಯೊಬ್ಬರು ಭಯೋತ್ಪಾದನಾ ಸಂಘಟನೆಯ ಜೊತೆ ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹರಿಯಾಣದ ಕೈಥಾಲ್‌ನಲ್ಲಿ 25 ವರ್ಷದ ರಾಜಕೀಯ ವಿಜ್ಞಾನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವಾರದಲ್ಲಿ ಇದು ಎರಡನೇ ಬಂಧನವಾಗಿದೆ.

ಪಾಕಿಸ್ತಾನದ ಐಎಸ್‌ಐ ಜೊತೆ ಮಿಲಿಟರಿ ಮಾಹಿತಿ ಹಂಚಿಕೊಂಡ ಹರಿಯಾಣದ ಕಾಲೇಜು ವಿದ್ಯಾರ್ಥಿ ಬಂಧನ
India Pakistan
ಸುಷ್ಮಾ ಚಕ್ರೆ
|

Updated on: May 17, 2025 | 3:44 PM

Share

ನವದೆಹಲಿ, ಮೇ 17: ಪಾಕಿಸ್ತಾನದ (Pakistan) ಐಎಸ್‌ಐ ಜೊತೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಹರಿಯಾಣದ (Haryana) ಕೈಥಾಲ್ ಜಿಲ್ಲೆಯಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಪಟಿಯಾಲ ಕಾಲೇಜಿನಲ್ಲಿ ರಾಜಕೀಯ ವಿಜ್ಞಾನ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಮೇ 12ರಂದು ವಶಕ್ಕೆ ಪಡೆಯಲಾಯಿತು. ಅವನು ತನ್ನ ಫೇಸ್‌ಬುಕ್ ಪ್ರೊಫೈಲ್‌ಗೆ ಭಾರತೀಯ ಮಿಲಿಟರಿಯ ಬಂದೂಕುಗಳು ಮತ್ತು ಪಿಸ್ತೂಲ್‌ಗಳ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದನು.

ಈ ಬಗ್ಗೆ ವಿಚಾರಣೆಯ ಸಮಯದಲ್ಲಿ ಆ ವಿದ್ಯಾರ್ಥಿ ಕಳೆದ ವರ್ಷ ನವೆಂಬರ್‌ನಲ್ಲಿ ಕರ್ತಾರ್‌ಪುರ ಕಾರಿಡಾರ್ ಮೂಲಕ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ಎಂದು ತಿಳಿದುಬಂದಿದೆ. ನಂತರ ಅವನು ಐಎಸ್‌ಐ ಕಾರ್ಯಕರ್ತರೊಂದಿಗೆ ಸಂವಹನ ನಡೆಸಲು ಪ್ರಾರಂಭಿಸಿದ್ದನು. ಅವರು ಆತ ನೀಡುವ ಮಾಹಿತಿಗೆ ಬದಲಾಗಿ ಅವನಿಗೆ ಹಣವನ್ನು ನೀಡುತ್ತಿದ್ದರು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಶೇ.82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಮಾಜಿ ಸಂಸದೆ

ಪೊಲೀಸರ ಪ್ರಕಾರ, ಆ ವಿದ್ಯಾರ್ಥಿ ಪಟಿಯಾಲ ಮಿಲಿಟರಿ ಕಂಟೋನ್ಮೆಂಟ್‌ನ ಫೋಟೋಗಳನ್ನು ಹಂಚಿಕೊಂಡಿದ್ದನು. ಅವನ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಅವನ ಬ್ಯಾಂಕ್ ವಹಿವಾಟುಗಳನ್ನು ಸಹ ಪರಿಶೀಲನೆಗೆ ಒಳಪಡಿಸಲಾಗಿದೆ. ಒಂದು ವಾರದೊಳಗೆ ಹರಿಯಾಣ ರಾಜ್ಯದಲ್ಲಿ ಇದು ಎರಡನೇ ಬಂಧನವಾಗಿದೆ. ಮೇ 10ರಂದು ಕದನ ವಿರಾಮದೊಂದಿಗೆ ಕೊನೆಗೊಂಡ ಭಾರತ-ಪಾಕಿಸ್ತಾನ ಸಂಘರ್ಷದ ನಂತರ ಈ ಬಂಧನಗಳು ನಡೆದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ