AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಐಎಸ್‌ಐ ಜೊತೆ ಮಿಲಿಟರಿ ಮಾಹಿತಿ ಹಂಚಿಕೊಂಡ ಹರಿಯಾಣದ ಕಾಲೇಜು ವಿದ್ಯಾರ್ಥಿ ಬಂಧನ

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ನಡುವೆ ಭಾರತೀಯ ಮಿಲಿಟರಿಗೆ ಸಂಬಂಧಿಸಿದ ಕೆಲವು ರಹಸ್ಯ ವಿಷಯಗಳನ್ನು ಭಾರತದ ವಿದ್ಯಾರ್ಥಿಯೊಬ್ಬರು ಭಯೋತ್ಪಾದನಾ ಸಂಘಟನೆಯ ಜೊತೆ ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹರಿಯಾಣದ ಕೈಥಾಲ್‌ನಲ್ಲಿ 25 ವರ್ಷದ ರಾಜಕೀಯ ವಿಜ್ಞಾನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವಾರದಲ್ಲಿ ಇದು ಎರಡನೇ ಬಂಧನವಾಗಿದೆ.

ಪಾಕಿಸ್ತಾನದ ಐಎಸ್‌ಐ ಜೊತೆ ಮಿಲಿಟರಿ ಮಾಹಿತಿ ಹಂಚಿಕೊಂಡ ಹರಿಯಾಣದ ಕಾಲೇಜು ವಿದ್ಯಾರ್ಥಿ ಬಂಧನ
India Pakistan
ಸುಷ್ಮಾ ಚಕ್ರೆ
|

Updated on: May 17, 2025 | 3:44 PM

Share

ನವದೆಹಲಿ, ಮೇ 17: ಪಾಕಿಸ್ತಾನದ (Pakistan) ಐಎಸ್‌ಐ ಜೊತೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಹರಿಯಾಣದ (Haryana) ಕೈಥಾಲ್ ಜಿಲ್ಲೆಯಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಪಟಿಯಾಲ ಕಾಲೇಜಿನಲ್ಲಿ ರಾಜಕೀಯ ವಿಜ್ಞಾನ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಮೇ 12ರಂದು ವಶಕ್ಕೆ ಪಡೆಯಲಾಯಿತು. ಅವನು ತನ್ನ ಫೇಸ್‌ಬುಕ್ ಪ್ರೊಫೈಲ್‌ಗೆ ಭಾರತೀಯ ಮಿಲಿಟರಿಯ ಬಂದೂಕುಗಳು ಮತ್ತು ಪಿಸ್ತೂಲ್‌ಗಳ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದನು.

ಈ ಬಗ್ಗೆ ವಿಚಾರಣೆಯ ಸಮಯದಲ್ಲಿ ಆ ವಿದ್ಯಾರ್ಥಿ ಕಳೆದ ವರ್ಷ ನವೆಂಬರ್‌ನಲ್ಲಿ ಕರ್ತಾರ್‌ಪುರ ಕಾರಿಡಾರ್ ಮೂಲಕ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ಎಂದು ತಿಳಿದುಬಂದಿದೆ. ನಂತರ ಅವನು ಐಎಸ್‌ಐ ಕಾರ್ಯಕರ್ತರೊಂದಿಗೆ ಸಂವಹನ ನಡೆಸಲು ಪ್ರಾರಂಭಿಸಿದ್ದನು. ಅವರು ಆತ ನೀಡುವ ಮಾಹಿತಿಗೆ ಬದಲಾಗಿ ಅವನಿಗೆ ಹಣವನ್ನು ನೀಡುತ್ತಿದ್ದರು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಶೇ.82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಮಾಜಿ ಸಂಸದೆ

ಪೊಲೀಸರ ಪ್ರಕಾರ, ಆ ವಿದ್ಯಾರ್ಥಿ ಪಟಿಯಾಲ ಮಿಲಿಟರಿ ಕಂಟೋನ್ಮೆಂಟ್‌ನ ಫೋಟೋಗಳನ್ನು ಹಂಚಿಕೊಂಡಿದ್ದನು. ಅವನ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಅವನ ಬ್ಯಾಂಕ್ ವಹಿವಾಟುಗಳನ್ನು ಸಹ ಪರಿಶೀಲನೆಗೆ ಒಳಪಡಿಸಲಾಗಿದೆ. ಒಂದು ವಾರದೊಳಗೆ ಹರಿಯಾಣ ರಾಜ್ಯದಲ್ಲಿ ಇದು ಎರಡನೇ ಬಂಧನವಾಗಿದೆ. ಮೇ 10ರಂದು ಕದನ ವಿರಾಮದೊಂದಿಗೆ ಕೊನೆಗೊಂಡ ಭಾರತ-ಪಾಕಿಸ್ತಾನ ಸಂಘರ್ಷದ ನಂತರ ಈ ಬಂಧನಗಳು ನಡೆದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?