AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿ ರಾಮ್​ ರಹೀಮ್​ ಸಿಂಗ್​ ಭೇಟಿಗೆ, ಅಪರಿಚಿತರಿಗೆ ಅವಕಾಶ ಮಾಡಿಕೊಟ್ಟಿದ್ದ ಡಿಎಸ್​ಪಿ ಅಮಾನತು

ಡಿಎಸ್​ಪಿ ಶಂಶೇರ್​ ಸಿಂಗ್​ ಅಮಾನತುಗೊಂಡ ಪೊಲೀಸ್​ ಅಧಿಕಾರಿಯಾಗಿದ್ದಾರೆ. ಅವರ ಸಸ್ಪೆಂಡ್​ ಆದೇಶದಲ್ಲಿ, ಶಂಶೇರ್​ ಸಿಂಗ್ ಅಮಾನತು ಅವಧಿಯಲ್ಲಿ ತಮ್ಮ ಸ್ವಸ್ಥಾನ ಬಿಟ್ಟು, ಅನುಮತಿ ಇಲ್ಲದೆ ಎಲ್ಲಿಗೂ ಹೋಗುವಂತಿಲ್ಲ ಎಂದೂ ಹೇಳಲಾಗಿದೆ.

ಅತ್ಯಾಚಾರ ಆರೋಪಿ ರಾಮ್​ ರಹೀಮ್​ ಸಿಂಗ್​ ಭೇಟಿಗೆ, ಅಪರಿಚಿತರಿಗೆ ಅವಕಾಶ ಮಾಡಿಕೊಟ್ಟಿದ್ದ ಡಿಎಸ್​ಪಿ ಅಮಾನತು
ಗುರ್ಮಿತ್​ ರಾಮ್​ ರಹೀಮ್​
TV9 Web
| Edited By: |

Updated on:Aug 24, 2021 | 6:13 PM

Share

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಸದ್ಯ ರೊಹ್ಟಕ್ ಜೈಲಿನಲ್ಲಿರುವ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮೀತ್​ ರಾಮ್​ ರಹೀಮ್​ ಸಿಂಗ್​​ನನ್ನು ಭೇಟಿಯಾಗಲು ಒಂದಷ್ಟು ಜನರಿಗೆ ಅನಧಿಕೃತವಾಗಿ ಅವಕಾಶ ಮಾಡಿಕೊಟ್ಟ ಡಿಎಸ್​​ಪಿ (ಪೊಲೀಸ್ ಉಪ ಅಧೀಕ್ಷಕ)ಯನ್ನು ಹರ್ಯಾಣ ಸರ್ಕಾರ ಅಮಾನತುಗಳಿಸಿದೆ. ಈ ರಾಮ್​ ರಹೀಮ್ ಸಿಂಗ್ ಜುಲೈ ತಿಂಗಳಲ್ಲಿ ಆರೋಗ್ಯ ತಪಾಸಣೆಗೆಂದು ದೆಹಲಿಯ ಏಮ್ಸ್​ಗೆ ಹೋಗಿದ್ದರು. ಆ ವೇಳೆ ಕೆಲವು ಮಂದಿ ರಹೀಮ್​ ಸಿಂಗ್​ ಭೇಟಿಗೆ ಆಗಮಿಸಿದ್ದರು. ಕಾನೂನು ಪ್ರಕಾರ ಅವರನ್ನು ಭೇಟಿಯಾಗಲು ಯಾರಿಗೂ ಅವಕಾಶ ಕೊಡುವಂತಿರಲಿಲ್ಲ. ಆದರೆ ಭದ್ರತಾ ದೃಷ್ಟಿಯಿಂದ ಜತೆಗಿದ್ದ ಡಿಎಸ್​ಪಿ ಅನಧಿಕೃತವಾಗಿ ಅವಕಾಶ ಮಾಡಿಕೊಟ್ಟಿದ್ದರು ಎಂದು ಹೇಳಲಾಗಿದೆ. ಇದೀಗ ಅವರನ್ನು ಹರ್ಯಾಣ ಸರ್ಕಾರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.

ಡಿಎಸ್​ಪಿ ಶಂಶೇರ್​ ಸಿಂಗ್​ ಅಮಾನತುಗೊಂಡ ಪೊಲೀಸ್​ ಅಧಿಕಾರಿಯಾಗಿದ್ದಾರೆ. ಅವರ ಸಸ್ಪೆಂಡ್​ ಆದೇಶದಲ್ಲಿ, ಶಂಶೇರ್​ ಸಿಂಗ್ ಅಮಾನತು ಅವಧಿಯಲ್ಲಿ ತಮ್ಮ ಸ್ವಸ್ಥಾನ ಬಿಟ್ಟು, ಅನುಮತಿ ಇಲ್ಲದೆ ಎಲ್ಲಿಗೂ ಹೋಗುವಂತಿಲ್ಲ ಎಂದು ಹರ್ಯಾಣ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್​ ಅರೋರಾ ನೀಡಿದ್ದಾರೆ.  ಜುಲೈನಲ್ಲಿ ರಹೀಮ್​ ಸಿಂಗ್​ ವೈದ್ಯಕೀಯ ತಪಾಸಣೆಗೆ ಹೋದಾಗ, ಅವರನ್ನು ಭೇಟಿಯಾಗಲು ನಾಲ್ವರು ಆಗಮಿಸಿದ್ದರು. ಅವರೆಲ್ಲರನ್ನೂ ರಹೀಮ್​ ಬಳಿ ಹೋಗಲು ಬಿಡಲಾಗಿತ್ತು. ಏಮ್ಸ್​ನಿಂದ ವಾಪಸ್​ ರೋಹ್ಟಕ್​ ಜೈಲಿಗೆ ಬಂದ ಬಳಿಕ ಈ ವಿಚಾರ ಹೊರಬಿದ್ದಿತ್ತು. ಅದು ಹರ್ಯಾಣ ಕಾರಾಗೃಹ ಸಚಿವಾಲಯದ ಸಚಿವ ರಂಜಿತ್​ ಸಿಂಗ್​ ಚೌತಾಲಾ ಗಮನಕ್ಕೆ ಬಂದು, ತನಿಖೆಗೆ ಆದೇಶಿಸಲಾಗಿತ್ತು.

ಇದನ್ನೂ ಓದಿ: Indian Railways: ರೈಲ್ವೇ ಇಲಾಖೆಯ ಉದ್ಯೋಗ ಹುಡುಕುವುದು ಹೇಗೆ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ವಿವರ

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ

Published On - 6:12 pm, Tue, 24 August 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ