AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿ ರಾಮ್​ ರಹೀಮ್​ ಸಿಂಗ್​ ಭೇಟಿಗೆ, ಅಪರಿಚಿತರಿಗೆ ಅವಕಾಶ ಮಾಡಿಕೊಟ್ಟಿದ್ದ ಡಿಎಸ್​ಪಿ ಅಮಾನತು

ಡಿಎಸ್​ಪಿ ಶಂಶೇರ್​ ಸಿಂಗ್​ ಅಮಾನತುಗೊಂಡ ಪೊಲೀಸ್​ ಅಧಿಕಾರಿಯಾಗಿದ್ದಾರೆ. ಅವರ ಸಸ್ಪೆಂಡ್​ ಆದೇಶದಲ್ಲಿ, ಶಂಶೇರ್​ ಸಿಂಗ್ ಅಮಾನತು ಅವಧಿಯಲ್ಲಿ ತಮ್ಮ ಸ್ವಸ್ಥಾನ ಬಿಟ್ಟು, ಅನುಮತಿ ಇಲ್ಲದೆ ಎಲ್ಲಿಗೂ ಹೋಗುವಂತಿಲ್ಲ ಎಂದೂ ಹೇಳಲಾಗಿದೆ.

ಅತ್ಯಾಚಾರ ಆರೋಪಿ ರಾಮ್​ ರಹೀಮ್​ ಸಿಂಗ್​ ಭೇಟಿಗೆ, ಅಪರಿಚಿತರಿಗೆ ಅವಕಾಶ ಮಾಡಿಕೊಟ್ಟಿದ್ದ ಡಿಎಸ್​ಪಿ ಅಮಾನತು
ಗುರ್ಮಿತ್​ ರಾಮ್​ ರಹೀಮ್​
TV9 Web
| Edited By: |

Updated on:Aug 24, 2021 | 6:13 PM

Share

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಸದ್ಯ ರೊಹ್ಟಕ್ ಜೈಲಿನಲ್ಲಿರುವ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮೀತ್​ ರಾಮ್​ ರಹೀಮ್​ ಸಿಂಗ್​​ನನ್ನು ಭೇಟಿಯಾಗಲು ಒಂದಷ್ಟು ಜನರಿಗೆ ಅನಧಿಕೃತವಾಗಿ ಅವಕಾಶ ಮಾಡಿಕೊಟ್ಟ ಡಿಎಸ್​​ಪಿ (ಪೊಲೀಸ್ ಉಪ ಅಧೀಕ್ಷಕ)ಯನ್ನು ಹರ್ಯಾಣ ಸರ್ಕಾರ ಅಮಾನತುಗಳಿಸಿದೆ. ಈ ರಾಮ್​ ರಹೀಮ್ ಸಿಂಗ್ ಜುಲೈ ತಿಂಗಳಲ್ಲಿ ಆರೋಗ್ಯ ತಪಾಸಣೆಗೆಂದು ದೆಹಲಿಯ ಏಮ್ಸ್​ಗೆ ಹೋಗಿದ್ದರು. ಆ ವೇಳೆ ಕೆಲವು ಮಂದಿ ರಹೀಮ್​ ಸಿಂಗ್​ ಭೇಟಿಗೆ ಆಗಮಿಸಿದ್ದರು. ಕಾನೂನು ಪ್ರಕಾರ ಅವರನ್ನು ಭೇಟಿಯಾಗಲು ಯಾರಿಗೂ ಅವಕಾಶ ಕೊಡುವಂತಿರಲಿಲ್ಲ. ಆದರೆ ಭದ್ರತಾ ದೃಷ್ಟಿಯಿಂದ ಜತೆಗಿದ್ದ ಡಿಎಸ್​ಪಿ ಅನಧಿಕೃತವಾಗಿ ಅವಕಾಶ ಮಾಡಿಕೊಟ್ಟಿದ್ದರು ಎಂದು ಹೇಳಲಾಗಿದೆ. ಇದೀಗ ಅವರನ್ನು ಹರ್ಯಾಣ ಸರ್ಕಾರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.

ಡಿಎಸ್​ಪಿ ಶಂಶೇರ್​ ಸಿಂಗ್​ ಅಮಾನತುಗೊಂಡ ಪೊಲೀಸ್​ ಅಧಿಕಾರಿಯಾಗಿದ್ದಾರೆ. ಅವರ ಸಸ್ಪೆಂಡ್​ ಆದೇಶದಲ್ಲಿ, ಶಂಶೇರ್​ ಸಿಂಗ್ ಅಮಾನತು ಅವಧಿಯಲ್ಲಿ ತಮ್ಮ ಸ್ವಸ್ಥಾನ ಬಿಟ್ಟು, ಅನುಮತಿ ಇಲ್ಲದೆ ಎಲ್ಲಿಗೂ ಹೋಗುವಂತಿಲ್ಲ ಎಂದು ಹರ್ಯಾಣ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್​ ಅರೋರಾ ನೀಡಿದ್ದಾರೆ.  ಜುಲೈನಲ್ಲಿ ರಹೀಮ್​ ಸಿಂಗ್​ ವೈದ್ಯಕೀಯ ತಪಾಸಣೆಗೆ ಹೋದಾಗ, ಅವರನ್ನು ಭೇಟಿಯಾಗಲು ನಾಲ್ವರು ಆಗಮಿಸಿದ್ದರು. ಅವರೆಲ್ಲರನ್ನೂ ರಹೀಮ್​ ಬಳಿ ಹೋಗಲು ಬಿಡಲಾಗಿತ್ತು. ಏಮ್ಸ್​ನಿಂದ ವಾಪಸ್​ ರೋಹ್ಟಕ್​ ಜೈಲಿಗೆ ಬಂದ ಬಳಿಕ ಈ ವಿಚಾರ ಹೊರಬಿದ್ದಿತ್ತು. ಅದು ಹರ್ಯಾಣ ಕಾರಾಗೃಹ ಸಚಿವಾಲಯದ ಸಚಿವ ರಂಜಿತ್​ ಸಿಂಗ್​ ಚೌತಾಲಾ ಗಮನಕ್ಕೆ ಬಂದು, ತನಿಖೆಗೆ ಆದೇಶಿಸಲಾಗಿತ್ತು.

ಇದನ್ನೂ ಓದಿ: Indian Railways: ರೈಲ್ವೇ ಇಲಾಖೆಯ ಉದ್ಯೋಗ ಹುಡುಕುವುದು ಹೇಗೆ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ವಿವರ

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ

Published On - 6:12 pm, Tue, 24 August 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್