AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ, ಜಾರ್ಖಂಡ್​ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಶೇಕಡಾವಾರು ಮತಗಳ ವಿಷಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರದಲ್ಲಿ ಸ್ಥಿರತೆ ಇದ್ದಾಗಲೆಲ್ಲಾ ಆ ರಾಜ್ಯದಲ್ಲಿ ಅಭಿವೃದ್ಧಿ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ, ಜಾರ್ಖಂಡ್​ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ
ಚಂದ್ರಬಾಬು ನಾಯ್ಡು
ಸುಷ್ಮಾ ಚಕ್ರೆ
|

Updated on: Oct 09, 2024 | 7:37 PM

Share

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹರಿಯಾಣ ಫಲಿತಾಂಶಗಳನ್ನು ಪುನರಾವರ್ತಿಸಲಿವೆ ಎಂದು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷವಾಗಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದ್ದು ಮಾತ್ರವಲ್ಲದೆ, ಅಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದಿದ್ದಾರೆ.

“ಹರಿಯಾಣದಲ್ಲಿ ಐತಿಹಾಸಿಕ ಚುನಾವಣಾ ಗೆಲುವು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಉತ್ತಮ ಸಾಧನೆಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ನಂಬಿಕೆಎಗ ಅರ್ಹನಾದ ನಾಯಕ ಉತ್ತಮವಾಗಿ ಕಾರ್ಯ ನಿರ್ವಹಿಸಿದಾಗಲೆಲ್ಲಾ ಜನರು ಅವರನ್ನು ಬೆಂಬಲಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಇದು ಹರಿಯಾಣದಲ್ಲಿ ಮಾತ್ರವಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಸಾಬೀತಾಗಿದೆ. ವೋಟ್ ಪರ್ಸೆಂಟೇಜ್ ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಜಮ್ಮು ಕಾಶ್ಮೀರದಲ್ಲಿ ಹೊರಹೊಮ್ಮಿದೆ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂಗಳ ನಡುವೆ ಜಗಳ ತರಲು ಕಾಂಗ್ರೆಸ್‌ ಷಡ್ಯಂತ್ರ; ಮೋದಿ ಆರೋಪ

ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂತಿರುಗಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಆಗಾಗ ನಡೆಯುವ ಚುನಾವಣೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುವುದರಿಂದ  ಭಾರತವು “ಒಂದು ರಾಷ್ಟ್ರ ಒಂದು ಚುನಾವಣೆ” ಅನ್ನು ಬೆಂಬಲಿಸುವ ಅಗತ್ಯವಿದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಅಮೋಘ ಸಾಧನೆ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಶ್ಲಾಘಿಸಿದ ಚಂದ್ರಬಾಬು ನಾಯ್ಡು, ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದರು. “ಗೌರವಾನ್ವಿತ ಪ್ರಧಾನಿ ಅವರ ಅಸಾಮಾನ್ಯ ಕೆಲಸಕ್ಕಾಗಿ ನಾನು ಮನಃಪೂರ್ವಕವಾಗಿ ಪ್ರಶಂಸಿಸುತ್ತೇನೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ