Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ, ಜಾರ್ಖಂಡ್​ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಶೇಕಡಾವಾರು ಮತಗಳ ವಿಷಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರದಲ್ಲಿ ಸ್ಥಿರತೆ ಇದ್ದಾಗಲೆಲ್ಲಾ ಆ ರಾಜ್ಯದಲ್ಲಿ ಅಭಿವೃದ್ಧಿ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ, ಜಾರ್ಖಂಡ್​ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ
ಚಂದ್ರಬಾಬು ನಾಯ್ಡು
Follow us
ಸುಷ್ಮಾ ಚಕ್ರೆ
|

Updated on: Oct 09, 2024 | 7:37 PM

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹರಿಯಾಣ ಫಲಿತಾಂಶಗಳನ್ನು ಪುನರಾವರ್ತಿಸಲಿವೆ ಎಂದು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷವಾಗಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದ್ದು ಮಾತ್ರವಲ್ಲದೆ, ಅಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದಿದ್ದಾರೆ.

“ಹರಿಯಾಣದಲ್ಲಿ ಐತಿಹಾಸಿಕ ಚುನಾವಣಾ ಗೆಲುವು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಉತ್ತಮ ಸಾಧನೆಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ನಂಬಿಕೆಎಗ ಅರ್ಹನಾದ ನಾಯಕ ಉತ್ತಮವಾಗಿ ಕಾರ್ಯ ನಿರ್ವಹಿಸಿದಾಗಲೆಲ್ಲಾ ಜನರು ಅವರನ್ನು ಬೆಂಬಲಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಇದು ಹರಿಯಾಣದಲ್ಲಿ ಮಾತ್ರವಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಸಾಬೀತಾಗಿದೆ. ವೋಟ್ ಪರ್ಸೆಂಟೇಜ್ ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಜಮ್ಮು ಕಾಶ್ಮೀರದಲ್ಲಿ ಹೊರಹೊಮ್ಮಿದೆ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂಗಳ ನಡುವೆ ಜಗಳ ತರಲು ಕಾಂಗ್ರೆಸ್‌ ಷಡ್ಯಂತ್ರ; ಮೋದಿ ಆರೋಪ

ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂತಿರುಗಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಆಗಾಗ ನಡೆಯುವ ಚುನಾವಣೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುವುದರಿಂದ  ಭಾರತವು “ಒಂದು ರಾಷ್ಟ್ರ ಒಂದು ಚುನಾವಣೆ” ಅನ್ನು ಬೆಂಬಲಿಸುವ ಅಗತ್ಯವಿದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಅಮೋಘ ಸಾಧನೆ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಶ್ಲಾಘಿಸಿದ ಚಂದ್ರಬಾಬು ನಾಯ್ಡು, ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದರು. “ಗೌರವಾನ್ವಿತ ಪ್ರಧಾನಿ ಅವರ ಅಸಾಮಾನ್ಯ ಕೆಲಸಕ್ಕಾಗಿ ನಾನು ಮನಃಪೂರ್ವಕವಾಗಿ ಪ್ರಶಂಸಿಸುತ್ತೇನೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್