AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana elections: ಹರ್ಯಾಣದಲ್ಲಿ ಮತದಾನ ಅಕ್ಟೋಬರ್ 5ಕ್ಕೆ ಮುಂದೂಡಿಕೆ, 8 ರಂದು ಫಲಿತಾಂಶ: ಚುನಾವಣಾ ಆಯೋಗ

ರಾಷ್ಟ್ರೀಯ ರಾಜಕೀಯ ಪಕ್ಷಗಳು, ರಾಜ್ಯ ರಾಜಕೀಯ ಪಕ್ಷ ಮತ್ತು ಅಖಿಲ ಭಾರತ ಬಿಷ್ಣೋಯಿ ಮಹಾಸಭಾದಿಂದ ಹರ್ಯಾಣದ ಬಿಷ್ಣೋಯ್ ಸಮುದಾಯದ ಜನರು ಶತಮಾನಗಳ ಹಳೆಯ ಅಸೋಜ್ ಅಮವಾಸ್ಯೆ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ರಾಜಸ್ಥಾನಕ್ಕೆ ಸಾಮೂಹಿಕವಾಗಿ ತೆರಳಲಿದ್ದಾರೆ. ಹಾಗಾಗಿ ಮತದಾನದ ದಿನಾಂಕ ಮುಂದೂಡಿದ ಚುನಾವಣಾ ಆಯೋಗ

Haryana elections: ಹರ್ಯಾಣದಲ್ಲಿ ಮತದಾನ ಅಕ್ಟೋಬರ್ 5ಕ್ಕೆ ಮುಂದೂಡಿಕೆ, 8 ರಂದು ಫಲಿತಾಂಶ: ಚುನಾವಣಾ ಆಯೋಗ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Aug 31, 2024 | 8:05 PM

Share

ದೆಹಲಿ ಆಗಸ್ಟ್ 31: ಅಕ್ಟೋಬರ್ 1 ರಂದು  ನಿಗದಿ ಆಗಿದ್ದ ಹರ್ಯಾಣ ವಿಧಾನಸಭಾ ಚುನಾವಣೆಯ (Haryana elections) ಮತದಾನವನ್ನು ಚುನಾವಣಾ ಆಯೋಗವು (Election Commission) ಅಕ್ಟೋಬರ್ 5 ಕ್ಕೆ ಮುಂದೂಡಿದೆ. ಅಕ್ಟೋಬರ್ 1 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ (Jammu and Kashmir)ಚುನಾವಣೆಯ ಮೂರನೇ ಹಂತದ ಮತದಾನದ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಜಮ್ಮು ಮತ್ತು ಕಾಶ್ಮೀರ, ಹರ್ಯಾಣ  ಎರಡರ ಚುನಾವಣಾ ಫಲಿತಾಂಶಗಳನ್ನು ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು.

ರಾಷ್ಟ್ರೀಯ ರಾಜಕೀಯ ಪಕ್ಷಗಳು, ರಾಜ್ಯ ರಾಜಕೀಯ ಪಕ್ಷ ಮತ್ತು ಅಖಿಲ ಭಾರತ ಬಿಷ್ಣೋಯಿ ಮಹಾಸಭಾದಿಂದ ಹರ್ಯಾಣದ ಬಿಷ್ಣೋಯ್ ಸಮುದಾಯದ ಜನರು ಶತಮಾನಗಳ ಹಳೆಯ ಅಸೋಜ್ ಅಮವಾಸ್ಯೆ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ರಾಜಸ್ಥಾನಕ್ಕೆ ಸಾಮೂಹಿಕವಾಗಿ ತೆರಳಲಿದ್ದಾರೆ. ಇದು ಹೆಚ್ಚಿನ ಸಂಖ್ಯೆಯ ಜನರಿಗೆ ಮತದಾನದ ಹಕ್ಕನ್ನು ನಿರಾಕರಿಸಬಹುದು ಮತ್ತು ಹರ್ಯಾಣ  ಶಾಸಕಾಂಗ ಸಭೆಗೆ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಕಡಿಮೆ ಮಾಡಬಹುದು ಎಂದು ಚುನಾವಣಾ ಆಯೋಗದ ಅಧಿಸೂಚನೆ ಹೇಳಿದೆ.

ಹರ್ಯಾಣ ಬಿಜೆಪಿ ನಾಯಕರು ಚುನಾವಣೆ ಮುಂದೂಡುವಂತೆ ಕೋರಿದ್ದರು

” ಅಕ್ಟೋಬರ್ 1 (ಮಂಗಳವಾರ) ರ ಅಸೆಂಬ್ಲಿ ಚುನಾವಣಾ ದಿನಾಂಕವು ವಾರಾಂತ್ಯದ ಮೊದಲು ಮತ್ತು ನಂತರ ಹೆಚ್ಚಿನ ರಜಾದಿನಗಳು ಮತದಾನದ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡಬಹುದು ಎಂದು ನಾವು ತರ್ಕಿಸಿದ್ದೇವೆ ಏಕೆಂದರೆ ಜನರು ದೀರ್ಘ ವಾರಾಂತ್ಯಗಳಲ್ಲಿ ರಜೆಯ ಮೇಲೆ ಹೋಗುತ್ತಾರೆ..” ಎಂದು ಆಗಸ್ಟ್ 24 ರಂದು ಹರ್ಯಾಣ ಬಿಜೆಪಿಯ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯ ವರೀಂದರ್ ಗಾರ್ಗ್ ಹೇಳಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಈ ಕ್ರಮವನ್ನು ಖಂಡಿಸಿದ್ದವು. ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ನಿಲುವು ಈಗಾಗಲೇ ಸೋಲನ್ನು ಒಪ್ಪಿಕೊಂಡಿದೆ ಎಂದು ತೋರಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಸೆಪ್ಟೆಂಬರ್ 8-10ರವರೆಗೆ ರಾಹುಲ್ ಗಾಂಧಿ ಅಮೆರಿಕ ಭೇಟಿ

” ನಿಗದಿಪಡಿಸಿದ ದಿನಾಂಕದ ಪ್ರಕಾರ ಚುನಾವಣೆ ನಡೆಯಬೇಕು. ಹರ್ಯಾಣದ ಜನರು ಬಿಜೆಪಿ ಸರ್ಕಾರವನ್ನು ಒಂದು ದಿನವೂ ಅಧಿಕಾರದಲ್ಲಿ ಇರುವುದನ್ನು ನೋಡಲು ಬಯಸುವುದಿಲ್ಲ” ಎಂದು ಹಿರಿಯ ನಾಯಕ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಎಎಪಿಯ ಹರ್ಯಾಣ ಘಟಕವು ಚುನಾವಣೆ ನಡೆಯುವ ಮೊದಲೇ, ಆಡಳಿತಾರೂಢ ಬಿಜೆಪಿ ಚುನಾವಣೆಯಲ್ಲಿ ತನ್ನ ಸನ್ನಿಹಿತ ಸೋಲನ್ನು ಗ್ರಹಿಸುವ ಕಾರಣಕ್ಕಾಗಿ ಮನ್ನಣೆಗಳನ್ನು ಹುಡುಕಲು ಪ್ರಾರಂಭಿಸಿದೆ ಎಂದು ಹೇಳಿದೆ. ಬಿಜೆಪಿಯು ಸತತ ಮೂರನೇ ಅವಧಿಯ ಮೇಲೆ ಕಣ್ಣಿಟ್ಟಿದ್ದು, ಕಾಂಗ್ರೆಸ್ ಆಡಳಿತಾರೂಢ ಪಕ್ಷದಿಂದ ಅಧಿಕಾರವನ್ನು ಕಸಿದುಕೊಳ್ಳಲು ಹವಣಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Sat, 31 August 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!