Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmer’s Protest | ಟಿಕ್ರಿ ಗಡಿಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹರ್ಯಾಣದ ರೈತನ ಶವ ಪತ್ತೆ

Farmers' Protest ಮೃತ ರೈತ ಹರ್ಯಾಣದ ಜಿಂದ್ ಗ್ರಾಮದವರು ಎಂದು ಪೊಲೀಸರು ಹೇಳಿದ್ದು, ಶವದ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿದೆ.

Farmer's Protest | ಟಿಕ್ರಿ ಗಡಿಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹರ್ಯಾಣದ ರೈತನ ಶವ ಪತ್ತೆ
ರೈತರ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 6:47 PM

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಟಿಕ್ರಿಗಡಿಭಾಗದಲ್ಲಿ ರೈತರ ಪ್ರತಿಭಟನೆ ನಿರತರಾಗಿದ್ದು, ಪ್ರತಿಭಟನಾ ಸ್ಥಳದಿಂದ 2 ಕಿಮೀ ದೂರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ರೈತನ ಶವ ಪತ್ತೆಯಾಗಿದೆ.

ಮೃತ ರೈತ ಹರ್ಯಾಣದ ಜಿಂದ್ ಗ್ರಾಮದವರು ಎಂದು ಪೊಲೀಸರು ಹೇಳಿದ್ದು, ಶವದ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿದೆ. ಜಿಂದ್ ಗ್ರಾಮದ 52ರ ಹರೆಯದ ರೈತ ಕರಮ್ ವೀರ್ ಸಿಂಗ್ ಅವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ಬಹದ್ದೂರ್ ಗಡ್ ಸಿಟಿ ಪೊಲೀಸ್ ಠಾಣೆಯ ಅಧಿಕಾರಿ ವಿಜಯ್ ಕುಮಾರ್ ಹೇಳಿದ್ದಾರೆ.

ಪೊಲೀಸರ ಪ್ರಕಾರ ಮೃತದೇಹದ ಪಕ್ಕದಲ್ಲಿ ಕೈಬರಹದಲ್ಲಿ ಬರೆದ ಆತ್ಮಹತ್ಯಾ ಟಿಪ್ಪಣಿ ಪತ್ತೆಯಾಗಿದೆ. ಅದರಲ್ಲಿ ಪ್ರೀತಿಯ ರೈತ ಬಂಧುಗಳೇ ಮೋದಿ ಸರ್ಕಾರ ಪದೇಪದೆ ಗಡುವು ನೀಡುತ್ತಿದೆ. ಈ ಕೃಷಿ ಕಾಯ್ದೆಗಳನ್ನು ಸರ್ಕಾರ ಯಾವಾಗ ಹಿಂಪಡೆಯುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ ಎಂಬ ಒಕ್ಕಣೆಯಿದೆ.

15 ದಿನಗಳ ಹಿಂದೆ ಟಿಕ್ರಿ ಗಡಿಭಾಗದಲ್ಲಿ ಹರ್ಯಾಣದ ರೈತರೊಬ್ಬರು ವಿಷ ಸೇವಿಸಿದ್ದರು. ಅವರನ್ನು ತಕ್ಷಣವೇ ದೆಹಲಿ ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಸಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್ ತಿಂಗಳಲ್ಲಿ ಪಂಜಾಬ್ ನ ವಕೀಲರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕಿಂತ ಮುನ್ನ ಸಿಖ್ ಧರ್ಮಗುರು ಸಂತ ರಾಮ್ ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

Mia Khalifa: ಜಾಮೂನು, ಸಮೋಸಾ ತಿಂದು ರೈತರ ಪರವಾಗಿ ಮತ್ತೆ ಟ್ವೀಟ್​ ಮಾಡಿದ ಮಿಯಾ ಖಲೀಫಾ

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ