AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmer’s Protest | ಟಿಕ್ರಿ ಗಡಿಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹರ್ಯಾಣದ ರೈತನ ಶವ ಪತ್ತೆ

Farmers' Protest ಮೃತ ರೈತ ಹರ್ಯಾಣದ ಜಿಂದ್ ಗ್ರಾಮದವರು ಎಂದು ಪೊಲೀಸರು ಹೇಳಿದ್ದು, ಶವದ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿದೆ.

Farmer's Protest | ಟಿಕ್ರಿ ಗಡಿಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹರ್ಯಾಣದ ರೈತನ ಶವ ಪತ್ತೆ
ರೈತರ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
| Edited By: |

Updated on: Feb 07, 2021 | 6:47 PM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಟಿಕ್ರಿಗಡಿಭಾಗದಲ್ಲಿ ರೈತರ ಪ್ರತಿಭಟನೆ ನಿರತರಾಗಿದ್ದು, ಪ್ರತಿಭಟನಾ ಸ್ಥಳದಿಂದ 2 ಕಿಮೀ ದೂರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ರೈತನ ಶವ ಪತ್ತೆಯಾಗಿದೆ.

ಮೃತ ರೈತ ಹರ್ಯಾಣದ ಜಿಂದ್ ಗ್ರಾಮದವರು ಎಂದು ಪೊಲೀಸರು ಹೇಳಿದ್ದು, ಶವದ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿದೆ. ಜಿಂದ್ ಗ್ರಾಮದ 52ರ ಹರೆಯದ ರೈತ ಕರಮ್ ವೀರ್ ಸಿಂಗ್ ಅವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ಬಹದ್ದೂರ್ ಗಡ್ ಸಿಟಿ ಪೊಲೀಸ್ ಠಾಣೆಯ ಅಧಿಕಾರಿ ವಿಜಯ್ ಕುಮಾರ್ ಹೇಳಿದ್ದಾರೆ.

ಪೊಲೀಸರ ಪ್ರಕಾರ ಮೃತದೇಹದ ಪಕ್ಕದಲ್ಲಿ ಕೈಬರಹದಲ್ಲಿ ಬರೆದ ಆತ್ಮಹತ್ಯಾ ಟಿಪ್ಪಣಿ ಪತ್ತೆಯಾಗಿದೆ. ಅದರಲ್ಲಿ ಪ್ರೀತಿಯ ರೈತ ಬಂಧುಗಳೇ ಮೋದಿ ಸರ್ಕಾರ ಪದೇಪದೆ ಗಡುವು ನೀಡುತ್ತಿದೆ. ಈ ಕೃಷಿ ಕಾಯ್ದೆಗಳನ್ನು ಸರ್ಕಾರ ಯಾವಾಗ ಹಿಂಪಡೆಯುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ ಎಂಬ ಒಕ್ಕಣೆಯಿದೆ.

15 ದಿನಗಳ ಹಿಂದೆ ಟಿಕ್ರಿ ಗಡಿಭಾಗದಲ್ಲಿ ಹರ್ಯಾಣದ ರೈತರೊಬ್ಬರು ವಿಷ ಸೇವಿಸಿದ್ದರು. ಅವರನ್ನು ತಕ್ಷಣವೇ ದೆಹಲಿ ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಸಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್ ತಿಂಗಳಲ್ಲಿ ಪಂಜಾಬ್ ನ ವಕೀಲರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕಿಂತ ಮುನ್ನ ಸಿಖ್ ಧರ್ಮಗುರು ಸಂತ ರಾಮ್ ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

Mia Khalifa: ಜಾಮೂನು, ಸಮೋಸಾ ತಿಂದು ರೈತರ ಪರವಾಗಿ ಮತ್ತೆ ಟ್ವೀಟ್​ ಮಾಡಿದ ಮಿಯಾ ಖಲೀಫಾ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ