Farmer’s Protest | ಟಿಕ್ರಿ ಗಡಿಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹರ್ಯಾಣದ ರೈತನ ಶವ ಪತ್ತೆ

Farmers' Protest ಮೃತ ರೈತ ಹರ್ಯಾಣದ ಜಿಂದ್ ಗ್ರಾಮದವರು ಎಂದು ಪೊಲೀಸರು ಹೇಳಿದ್ದು, ಶವದ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿದೆ.

Farmers Protest | ಟಿಕ್ರಿ ಗಡಿಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹರ್ಯಾಣದ ರೈತನ ಶವ ಪತ್ತೆ
ರೈತರ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ Edited By:

Updated on: Feb 07, 2021 | 6:47 PM

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಟಿಕ್ರಿಗಡಿಭಾಗದಲ್ಲಿ ರೈತರ ಪ್ರತಿಭಟನೆ ನಿರತರಾಗಿದ್ದು, ಪ್ರತಿಭಟನಾ ಸ್ಥಳದಿಂದ 2 ಕಿಮೀ ದೂರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ರೈತನ ಶವ ಪತ್ತೆಯಾಗಿದೆ.

ಮೃತ ರೈತ ಹರ್ಯಾಣದ ಜಿಂದ್ ಗ್ರಾಮದವರು ಎಂದು ಪೊಲೀಸರು ಹೇಳಿದ್ದು, ಶವದ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿದೆ. ಜಿಂದ್ ಗ್ರಾಮದ 52ರ ಹರೆಯದ ರೈತ ಕರಮ್ ವೀರ್ ಸಿಂಗ್ ಅವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ಬಹದ್ದೂರ್ ಗಡ್ ಸಿಟಿ ಪೊಲೀಸ್ ಠಾಣೆಯ ಅಧಿಕಾರಿ ವಿಜಯ್ ಕುಮಾರ್ ಹೇಳಿದ್ದಾರೆ.

ಪೊಲೀಸರ ಪ್ರಕಾರ ಮೃತದೇಹದ ಪಕ್ಕದಲ್ಲಿ ಕೈಬರಹದಲ್ಲಿ ಬರೆದ ಆತ್ಮಹತ್ಯಾ ಟಿಪ್ಪಣಿ ಪತ್ತೆಯಾಗಿದೆ. ಅದರಲ್ಲಿ ಪ್ರೀತಿಯ ರೈತ ಬಂಧುಗಳೇ ಮೋದಿ ಸರ್ಕಾರ ಪದೇಪದೆ ಗಡುವು ನೀಡುತ್ತಿದೆ. ಈ ಕೃಷಿ ಕಾಯ್ದೆಗಳನ್ನು ಸರ್ಕಾರ ಯಾವಾಗ ಹಿಂಪಡೆಯುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ ಎಂಬ ಒಕ್ಕಣೆಯಿದೆ.

15 ದಿನಗಳ ಹಿಂದೆ ಟಿಕ್ರಿ ಗಡಿಭಾಗದಲ್ಲಿ ಹರ್ಯಾಣದ ರೈತರೊಬ್ಬರು ವಿಷ ಸೇವಿಸಿದ್ದರು. ಅವರನ್ನು ತಕ್ಷಣವೇ ದೆಹಲಿ ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಸಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್ ತಿಂಗಳಲ್ಲಿ ಪಂಜಾಬ್ ನ ವಕೀಲರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕಿಂತ ಮುನ್ನ ಸಿಖ್ ಧರ್ಮಗುರು ಸಂತ ರಾಮ್ ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

Mia Khalifa: ಜಾಮೂನು, ಸಮೋಸಾ ತಿಂದು ರೈತರ ಪರವಾಗಿ ಮತ್ತೆ ಟ್ವೀಟ್​ ಮಾಡಿದ ಮಿಯಾ ಖಲೀಫಾ

 

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us