AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದ ಆರೋಗ್ಯ ಸಚಿವ ಅನಿಲ್​ ವಿಜ್​ಗೆ ಕೊರೊನಾ

ಹರಿಯಾಣದ ಆರೋಗ್ಯ ಸಚಿವ ವಿಜ್ ನವೆಂಬರ್ 20ರಂದು ಭಾರತ್ ಬಯೋಟೆಕ್​ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದಲ್ಲಿ ಭಾಗವಹಿಸಿದ್ದರು.

ಹರಿಯಾಣದ ಆರೋಗ್ಯ ಸಚಿವ ಅನಿಲ್​ ವಿಜ್​ಗೆ ಕೊರೊನಾ
ಹರಿಯಾಣದ ಆರೋಗ್ಯ ಸಚಿವ ವಿಜ್
preethi shettigar
| Edited By: |

Updated on:Dec 06, 2020 | 11:23 AM

Share

ಚಂಡೀಗಢ: ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್​ ಅವರಿಗೆ​ ಕೋವಿಡ್-19 ಧೃಡಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ತಮ್ಮೊಂದಿಗೆ ನೇರ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಚಿವರು ಸೂಚಿಸಿದ್ದಾರೆ.

ನನಗೆ ಕೊರೊನಾ ದೃಢಪಟ್ಟಿದೆ, ನಾನು ಅಂಬಾಲಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸಚಿವ ವಿಜ್ ಟ್ವೀಟ್ ಮಾಡಿದ್ದಾರೆ.

ನವೆಂಬರ್ 20ರಂದು ಹರಿಯಾಣದ ಆರೋಗ್ಯ ಸಚಿವ ವಿಜ್, ಭಾರತ್ ಬಯೋಟೆಕ್​ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದಲ್ಲಿ ಭಾಗವಹಿಸಿದ್ದರು ಮತ್ತು ಲಸಿಕೆ ಪ್ರಯೋಗದಲ್ಲಿ ಪಾಲ್ಗೊಂಡ ರಾಜ್ಯದ ಮೊದಲ ಸ್ವಯಂ ಸೇವಕ ಎಂದು ಈ ಮೊದಲು ಟ್ವೀಟ್ ಮಾಡಿದ್ದರು.

ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡ ನಂತರವಷ್ಟೇ ಸೋಂಕಿನ ವಿರುದ್ಧದ ಪ್ರತಿಕಾಯಗಳು ಮನುಷ್ಯನಲ್ಲಿ ಬೆಳೆಯುತ್ತವೆ. ಏಕೆಂದರೆ ಇದು ಎರಡು ಡೋಸ್ ಹೊಂದಿದ್ದ ಲಸಿಕೆ. ಸಚಿವರು ಕೇವಲ ಒಂದು ಡೋಸ್ ಮಾತ್ರ ತೆಗೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಭಾರತ್ ಬಯೋಟೆಕ್ ಕೋವ್ಯಾಕ್ಸಿನ್

ಭಾರತ್ ಬಯೋಟಿಕ್ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಕೊವಾಕ್ಸಿನ್ ಲಸಿಕೆಯನ್ನು ಮೊದಲ ಬಾರಿಗೆ ತೆಗೆದುಕೊಂಡವರು 28 ದಿನಗಳ ಅಂತರದಲ್ಲಿ ಮತ್ತೊಮ್ಮೆ ತೆಗೆದುಕೊಳ್ಳಬೇಕು. ಸುರಕ್ಷತೆ ಮತ್ತು ಇಮ್ಯುನೊಜೆನೆಸಿಟಿ (ಪ್ರತಿರಕ್ಷಾ ಜನಕ) ದತ್ತಾಂಶದೊಂದಿಗೆ ಕ್ಲಿನಿಕಲ್ ಪ್ರಯೋಗಗಳ ಮೊದಲ ಎರಡು ಹಂತದಲ್ಲಿ ಕೋವ್ಯಾಕ್ಸಿನ್ ಅನ್ನು ಸುಮಾರು 1000 ಜನರಿಗೆ ನೀಡಿ, ಮೌಲ್ಯಮಾಪನ ಮಾಡಲಾಗಿದೆ.

Published On - 11:17 am, Sun, 6 December 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ